Yuvavahini

SEP 30, 2019 8.48 AM IST

ಯುವವಾಹಿನಿ (ರಿ) ಮಂಗಳೂರು ಮತ್ತು ಕಾರ್ಕಳ ಘಟಕ

ಯಶಸ್ವಿ ಉದ್ಯಮಕ್ಕೆ ಚೇತರಿಕಾ-2019

ದಿನಾಂಕ 29.09.2019 ರಂದು ಯುವವಾಹಿನಿ(ರಿ) ಮಂಗಳೂರು ಘಟಕ ಮತ್ತು ಕಾರ್ಕಳ ಘಟಕ ಇದರ ಜಂಟಿ ಆಶ್ರಯದಲ್ಲಿ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರು, ವ್ಯಾಪಾರಸ್ಥರು, ಸ್ವ ಉದ್ಯೋಗಿಗಳಿಗೆ, ಹೊಸದಾಗಿ ಉದ್ಯಮ ಪ್ರಾರಂಭಿಸುವವರಿಗೆ ಮತ್ತು ನಿರುದ್ಯೋಗಿಗಳಿಗೆ ಯಶಸ್ವಿ ಉದ್ಯಮಕ್ಕೆ ಸಮಗ್ರ ಮಾರ್ಗದರ್ಶನ ಚೇತರಿಕಾ 2019 ಎಂಬ ಕಾರ್ಯಕ್ರಮವು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ನಲ್ಲಿ ಜರಗಿತು.

ಕಾರ್ಯಕ್ರಮವನ್ನು ಉದ್ಯಮಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಇದರ ಪ್ರಧಾನ ಕಾರ್ಯದರ್ಶಿ ರವಿಪೂಜಾರಿ ಚಿಲಿಂಬಿ ಉದ್ಘಾಟಿಸಿದರು. ಯುವವಾಹಿನಿಯು ಅವಕಾಶ ವಂಚಿತ ವರ್ಗಗಳಿಗೆ ಯಶಸ್ವಿ ಉದ್ಯಮಕ್ಕೆ ಸಮಗ್ರ ಮಾರ್ಗದರ್ಶನ ನೀಡುವ ಮೂಲಕ ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಉದ್ಯಮ ವ್ಯಾಪಾರಕ್ಕೂ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಬಿಲ್ಲವ ಸಮಾಜದ ಮಾದರಿ ಸಂಘಟನೆಯಾಗಿ ಬೆಳೆಯುತ್ತಿದೆ ಎಂದು ರವಿಪೂಜರಿಯವರು ತಿಳಿಸಿದರು. ಅವಕಾಶ ವಂಚಿತ ಸಮಾಜ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕ ವಾಗಿ ಅಭಿವೃದ್ಧಿಯಾಗ ಬೇಕಾದರೆ ಆ ಸಮಾಜದಲ್ಲಿ ಜನಪರ ರಾಜಕೀಯ ನಾಯಕತ್ವ ಬೆಳೆದುಬರಬೇಕು ಇದು ಆ ಸಮಾಜದ ಉದ್ಯಮಶೀಲತೆಗೆ ಪೂರಕವಾಗುತ್ತದೆ ಎಂದರು.
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಕುಮಾರ್ ಸಸಹಿತ್ಲು, ರಾಷ್ಟ್ರೀಯ ಮಟ್ಟದ ಹೆಸರಾಂತ ತರಬೇತುದಾರರು ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ್ ಕಾರ್ಕಳ, ಮಂಗಳೂರು ಘಟಕದ ಅಧ್ಯಕ್ಷ ರಾದ ಕೆ. ಆರ್. ಲಕ್ಷ್ಮೀನಾರಾಯಣ, ಕಾರ್ಯಕ್ರಮ ದ ಸಂಚಾಲಕರಾದ ರಾಜೇಶ್ ಕದ್ರಿ, ಕಾರ್ಕಳ ಘಟಕದ ಕಾರ್ಯದರ್ಶಿ ಗಣೇಶ್ ಸಾಲಿಯಾನ್, ಸಂಘಟನಾ ನಿರ್ದೇಶಕರಾದ ಹರೀಶ್ ಸನಿಲ್ ಮುಂತಾದವರು ಉಪಸ್ಥಿತರಿದ್ದರು. ಪ್ರವೀಣ್ ಸಾಲ್ಯನ್ ಕಿರೋಡಿ ಕಾರ್ಯಕ್ರಮ ನಿರೂಪಿಸಿದರು.
ವಿವಿಧ ಘಟಕಗಳಿಂದ ಆಗಮಿಸಿರುವ 66 ಶಿಬಿರಾರ್ಥಿಗಳಿಗೆ ರಾಷ್ಟ್ರೀಯ ತರಬೇತುದಾರರಾದ ಶ್ರೀ ಸುಧಾಕರ ಕಾರ್ಕಳರವರು ಧನಾತ್ಮಕವಾಗಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಯುವವಾಹಿನಿಯಲ್ಲಿ ಪ್ರಥಮ ಬಾರಿಗೆ ನಡೆದಂತಹ ಕಾರ್ಯಾಗಾರದಲ್ಲಿ ಶಿಬಿರಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಾ, ಅಂತರ್ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಅನುಭವವಾಯಿತೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹೈಕೋರ್ಟ್ ವಕೀಲರಾದ ನವನೀತ್ ಹಿಂಗಾಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮಾಜ ಮುಖಿ ಕಾರ್ಯಕ್ರಮ ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಂಗಳೂರು ಘಟಕದ ಕಾರ್ಯದರ್ಶಿ ಗಣೇಶ್ ವಿ. ಕೋಡಿಕಲ್ ರವರು ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!