Yuvavahini

SEP 13, 2019 9.13 AM IST

ಯುವವಾಹಿನಿ (ರಿ) ಮಂಗಳೂರು ಘಟಕ

ಬ್ರಹ್ಮಶ್ರೀ ನಾರಾಯಣ ಗುರು ಸಂದೇಶ ಪ್ರಚಾರ ಜಾಥಾ

 

           ಬ್ರಹ್ಮಶ್ರಿ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯು ತಾರೀಕು 13.9.2019 ರ ಶುಕ್ರವಾರದಂದು ಮಂಗಳೂರು ಘಟಕದ ವತಿಯಿಂದ ಬಹಳ ವಿಜೃಂಭಣೆಯಿಂದ ಜರುಗಿತು. ಘಟಕದ *ಯುವವಾಹಿನಿ ಸಭಾಂಗಣ* ದಲ್ಲಿ ಬೆಳಿಗ್ಗೆ 9.30 ಗಂಟೆಗೆ ಪುಷ್ಪಾಲಂಕಾರಗೊಂಡ ಗುರುಗಳ ಭಾವಚಿತ್ರಕ್ಕೆ ಕೇಂದ್ರ ಸಮಿತಿ ಅಧ್ಯಕ್ಷರಾದ  ನರೇಶ್ ಕುಮಾರ್ ಸಸಿಹಿತ್ಲು  ರವರು ಆರತಿ ಬೆಳಗಿ ಪುಷ್ಪ ಅರ್ಪಿಸುವುದರೊಂದಿಗೆ ಗುರುನಾರಾಯಣ ಜಯಂತಿಗೆ ಚಾಲನೆ ನೀಡಿದರು. ಸರ್ವಾಲಂಕಾರ ಗೊಂಡ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವಿರುವ ರಥಕ್ಕೆ ಕೇಂದ್ರ ಸಮಿತಿ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲುರವರು ತೆಂಗಿನಕಾಯಿ ಹೊಡೆಯುವುದರ ಮೂಲಕ ರಥಕ್ಕೆ ಚಾಲನೆ ನೀಡಿದರು. ರಥವು ಭಜನೆ, ಚೆಂಡೆ ವಾದ್ಯ ಹಾಗೂ ನಾರಾಯಣಗುರುಗಳ ತತ್ವ ಸಂದೇಶಗಳ ಪ್ರಚಾರದೊಂದಿಗೆ ಯುವವಾಹಿನಿ ಸಭಾಂಗಣದಿಂದ ಹೊರಟು ಚಿಲಿಂಬಿ ಮಾರ್ಗವಾಗಿ ಲೇಡಿ ಹಿಲ್ ಗೆ ಬಂತು. ಲೇಡಿಹಿಲ್ ನಲ್ಲಿ ಯುವವಾಹಿನಿ ಸಹ ಘಟಕಗಳ ಸಂಯುಕ್ತ ದೊಂದಿಗೆ ಆರಂಭಗೊಂಡ *ಬ್ರಹತ್ ಗುರು ಸಂದೇಶ ಪ್ರಚಾರ ಪಾದ ಜಾಥ* ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಹೆಚ್ ಎಸ್  ಸಾಯಿರಾಮ್ ಮತ್ತು ಕೋಶಾಧಿಕಾರಿ ಶ್ರೀ ಪದ್ಮರಾಜ್ ರವರು ಧ್ವಜ ನೀಡುವುದರೊಂದಿಗೆ ಚಾಲನೆ ನೀಡಿದರು. ಪಾದ ಜಾಥವು  ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿಯವರ ಗುರು ಸಂದೇಶ, ಭಜನೆ ಮತ್ತು ಚಂಡೆಗಳ ನಾದದೊಂದಿಗೆ  ಮಣ್ಣಗುಡ್ಡೆ ಮಾರ್ಗವಾಗಿ ಕುದ್ರೋಳಿ ದೇವಸ್ಥಾನ ತಲುಪಿತು. ದೇವಸ್ಥಾನದ ಆಡಳಿತ ಮಂಡಳಿ ಮತ್ತು ಅರ್ಚಕರು ಗುರುನಾರಾಯಣ ಭಾವಚಿತ್ರಕ್ಕೆ ಆರತಿ ಬೆಳಗಿ ಸ್ವಾಗತಿಸಿದರು.  ಸರ್ವ ಸದಸ್ಯರ ಸಮ್ಮುಖದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಗುರು ಪೂಜೆ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಮಂಗಳೂರು ಇವರ ಸಹಕಾರದೊಂದಿಗೆ ನಡೆಯುವ ಬ್ರಹ್ಮಶ್ರಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಂಗಳೂರು ಘಟಕ ಪ್ರಕಟಿಸಿರುವ *ಶ್ರೀ ಗುರು ಅಷ್ಟೋತ್ತರ ಶತನಾಮಾವಳಿ* ಪುಸ್ತಕವನ್ನು ಕರ್ನಾಟಕ ಸರಕಾರದ ಸಚಿವರಾದ ಸನ್ಮಾನ್ಯ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಬಿಡುಗಡೆಗೊಳಿಸಿದರು. ಘಟಕದ ಅಧ್ಯಕ್ಷರಾದ ಕೆ ಆರ್ ಲಕ್ಷ್ಮೀ ನಾರಾಯಣರವರು ಸಹಕಾರ ನೀಡಿದ ಎಲ್ಲಾ ಸಹ ಘಟಕದ ಅಧ್ಯಕ್ಷ  ಕಾರ್ಯದರ್ಶಿ ಹಾಗೂ ಸದಸ್ಯರುಗಳಿಗೆ ವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ಘಟಕದ ಕಾರ್ಯದರ್ಶಿ ಗಣೇಶ್ ವಿ ಕೋಡಿಕಲ್, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಯುತ ಜಗದೀಶ್ ಸುವರ್ಣ, ಶ್ರೀಕಾಂತ್  ಸುವರ್ಣ, ಗೋಪಾಲ ಪೂಜಾರಿ,  ಸಂಘಟನಾ ನಿರ್ದೇಶಕರಾದ ಹರೀಶ್ ಪೂಜಾರಿ, ಮೋಹನ ದಾಸ ಮಾಲೆಮಾರ್, ಮಾಜಿ ಅಧ್ಯಕ್ಷರುಗಳು ಹಾಗೂ ಸರ್ವ ಸದಸ್ಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!