Yuvavahini

OCT 28, 2019 2.26 AM IST

ಯುವವಾಹಿನಿ (ರಿ) ಕಾಪು ಘಟಕ

ಜಾತಿ ಭೇದ ಮತ ದ್ವೇಷ ಇಲ್ಲದ ಬೆಳಕು ದೀಪಾವಳಿ

ಬೆಳಕಿನ ಹಬ್ಬ ದೀಪಾವಳಿಯನ್ನು ಯುವವಾಹಿನಿ ಕಾಪು ಘಟಕದ ನೇತೃತ್ವದಲ್ಲಿ ಕಾಪು ಕೊರಗಜ್ಜ ದೈವಸ್ಥಾನದ ಬಳಿ ಕೊರಗರ ಕಾಲೋನಿಯಲ್ಲಿ ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
ಮಹಿಳೆಯರಿಗೆ ಸೀರೆ, ಗಂಡಸರಿಗೆ ಶಾಲು, ಲುಂಗಿ ಡ್ರೆಸ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ಕಾಲೋನಿಯ ಕುಟುಂಬಗಳ ಸದಸ್ಯರು ಈ ವಿಶಿಷ್ಟ ದೀಪಾವಳಿಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸಿ ಮಾತನಾಡಿ, ಹಿಂದೂಗಳ ದೊಡ್ಡ ಹಬ್ಬ ಆಗಿರುವ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಆಚರಣೆಗೆ ಯಾವುದೇ ಜಾತಿ, ಮತಗಳ ಭೇದ ಭಾವ ಇಲ್ಲ. ಎಲ್ಲ ವರ್ಗದ ಜನರೂ ಕೂಡಾ ತಮ್ಮ ಇತಿಮಿತಿಗೆ ತಕ್ಕಂತೆ ದೀಪಾವಳಿ ಆಚರಿಸುತ್ತಾರೆ. ಮೂಲ ಜನಾಂಗದ ಜನರು ತಮ್ಮ ಕಾಲೊನಿಗಳಲ್ಲಿ ಇಂದಿಗೂ ಕೂಡಾ ಅಬ್ಬರವಿಲ್ಲದ ಸಾಂಪ್ರದಾಯಿಕ ಶೈಲಿಯ ದೀಪಾವಳಿಯನ್ನು ಆಚರಿಸಿಕೊಂಡು ಬರುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ತುಳುನಾಡಿನ ಜನರ ಕೃಷಿ ಪ್ರಧಾನವಾದ ಜೀವನ ಪದ್ಧತಿಯಲ್ಲಿ ದೀಪಾವಳಿ ಎಂದರೆ ಆದು ದೊಡ್ಡ ಹಬ್ಬ. ಯುವ ವಾಹಿನಿ ಕಾಪು ಘಟಕವು ಮಾದರಿ ರೀತಿಯಲ್ಲಿ ದೀಪಾವಳಿ ಸಂಭ್ರಮವನ್ನು ಆಚರಿಸುತ್ತಿದ್ದು, ಈ ಮೂಲಕ ಸಮಾಜಿಕ ಸಾಮರಸ್ಯದ ಬದುಕು ಇನ್ನಷ್ಟು ಇಮ್ಮಡಿಗೊಳ್ಳಲು ಸಾಧ್ಯವಿದೆ ಎಂದು ಪತ್ರಕರ್ತ ರಾಕೇಶ್ ಕುಂಜೂರು ಹೇಳಿದರು.
ಯುವವಾಹಿನಿ ಕಾಪು ಘಟಕದ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡ ಮನ್ಹರ್ ಇಬ್ರಾಹಿಂ, ಪುರಸಭೆ ಸದಸ್ಯರಾದ ಕೆ.ಎಚ್. ಉಸ್ಮಾನ್, ಶಾಂತಲತಾ ಶೆಟ್ಟಿ, ಸುಲೋಚನಾ ಬಂಗೇರ, ಅಶ್ವಿನಿ, ಬಡಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶರ್ಮಿಳಾ, ಉಡುಪಿ ಜಿಲ್ಲಾ ಬಿಲ್ಲವ ಪರಿಷತ್‌ನ ಮಹಿಳಾ ಘಟಕದ ಸಂಚಾಲಕಿ ಆಶಾ ಕಟಪಾಡಿ, ಯುವವಾಹಿನಿ ಉಪಾಧ್ಯಕ್ಷ ಶಶಿಧರ್ ಸುವರ್ಣ, ಕಾಪು ಬಿಲ್ಲವರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಆಶಾ ಶಂಕರ್ ಉಪಸ್ಥಿತರಿದ್ದರು.
ಯುವವಾಹಿನಿ ಕಾಪು ಘಟಕದ ನಿಯೋಜಿತ ಅಧ್ಯಕ್ಷ ನಾಗೇಶ್ ಸುವರ್ಣ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!