Yuvavahini

NOV 18, 2019 2.14 PM IST

ಯುವವಾಹಿನಿ (ರಿ.) ಪಡುಬಿದ್ರಿ ಘಟಕ

ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ-2019”

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ” ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಚಿನಡ್ಕ ಇಲ್ಲಿ ದಿನಾಂಕ 17/11/2019 ರ ಭಾನುವಾರ ಮುಂಜಾನೆ ಉದ್ಘಾಟನೆಯೊಂದಿಗೆ ಆರಂಭಗೊಂಡು ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳ ನಂತರ ಅಪರಾಹ್ನ ಸಮಾರೋಪ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು.
ಮುಂಜಾನೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರು ವಹಿಸಿಕೊಂಡಿದ್ದರು, ಸಮಾರಂಭದ ಉದ್ಘಾಟಕರಾಗಿ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಸಾದಿಯ ಬಾನು, ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.)ಕೇಂದ್ರ ಸಮಿತಿ, ಮಂಗಳೂರು ಇದರ ಎರಡನೇ ಉಪಾಧ್ಯಕ್ಷರಾದ ಶ್ರೀ ಉದಯ ಅಮೀನ್ ಮಟ್ಟು, ಉಡುಪಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನೀತಾ ಗುರುರಾಜ್, ಅದಾನಿ ಯು.ಪಿ.ಸಿ.ಎಲ್.ನ ಫೈನಾನ್ಸ್ ಮತ್ತು ಅಕೌಂಟ್ಸ್ ಅಸೋಸಿಯೇಟ್ ಮೇನೇಜರ್ ಶ್ರೀ ಪ್ರೇಮಾನಂದ ಕುಮಾರ್, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಹಸನ್ ಬಾವ,ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಕೆ.ರೇಖಾ ಶೆಣೈ , ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಶ್ರೀ ವಿಧಿತ್ ವಿ .ಪೂಜಾರಿ ಇವರು ಉಪಸ್ಥಿತರಿದ್ದರು.

ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು, ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಸರ್ವರನ್ನು ಸ್ವಾಗತಿಸಿದರು,ಶಾಲಾ ನಾಯಕಿ ಕುಮಾರಿ ‌ಸಾದಿಯಾ ಬಾನು ,ಗಣ್ಯರೊಂದಿಗೆ ದೀಪ ಬೆಳಗುವುದರೊಂದಿಗೆ
ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಅತ್ಯುತ್ತಮ ಕಾರ್ಯಕ್ರಮಗಳನ್ನು ನೀಡುತ್ತಿರುವ ಘಟಕದ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.
ಉದಯ ಅಮೀನ್ ಮಟ್ಟು ಅವರು ಮಕ್ಕಳ ಹಬ್ಬ ಕಾರ್ಯಕ್ರಮದಂತ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡ ಹಾಗೂ ಇತರೆ ಘಟಕಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಪಡುಬಿದ್ರಿ ಘಟಕದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಹಸನ್ ಬಾವ ಅವರು ಘಟಕ ಮತ್ತು ಕಾರ್ಯಕ್ರಮವನ್ನು ಪ್ರಶಂಸಿ ಇನ್ನಷ್ಟು ಪ್ರಶಸ್ತಿಗಳನ್ನು ಯುವವಾಹಿನಿ ಸಂಸ್ಥೆ ಪಡೆಯಲಿ ಎಂದು ಹಾರೈಸಿದರು.

ಉದ್ಘಾಟನಾ ಸಭಾ ಕಾರ್ಯಕ್ರಮದ ನಂತರ ಮಕ್ಕಳಿಗಾಗಿ ಅಭಿನಯ ಗೀತೆ, ಛದ್ಮವೇಷ, ದೇಶಭಕ್ತಿಗೀತೆ, ಭಾಷಣ,ರಸಪ್ರಶ್ನೆ,ಚಿತ್ರಕಲೆ, ಸಮೂಹ ನೃತ್ಯ ಮುಂತಾದ ವಿವಿಧ ಸ್ಪರ್ಧೆಗಳು ವಿಭಾಗ-1 ,1 ರಿಂದ 4ನೇ ತರಗತಿ ಹಾಗೂ ವಿಭಾಗ- 2. 5 ರಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ನಡೆಯಿತು.

ಸ್ಪರ್ಧಾ ಕಾರ್ಯಕ್ರಮ ಮುಕ್ತಾಯದ ನಂತರ ಅಪರಾಹ್ನ ಸಮಾರೋಪ ಸಮಾರಂಭ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಯೋಗೀಶ್ ಪೂಜಾರಿ ವಹಿಸಿದ್ದರು,
ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಪ್ರದಾನ ಕಾರ್ಯದರ್ಶಿಯವರಾದ ಶ್ರೀ ಎಸ್. ಆರ್. ಪ್ರದೀಪ್ ,
ಬಿ.ಜೆ.ಪಿ. ಕಾಪು ವಿಧಾನ ಸಭಾ ಕ್ಷೇತ್ರದ ಕ್ಷೇತ್ರಾಧ್ಯಕ್ಷರಾದ ಶ್ರೀ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು.
ನಿವೃತ್ತ ಅಂಚೆ ಸಹಾಯಕರಾದ ಶ್ರೀ ಬಾಬು ಕೋಟ್ಯಾನ್.
ಯುವವಾಹಿನಿ (ರಿ.) ಕೇಂದ್ರ ಸಮಿತಿ ಇದರ ಸಂಘಟನಾ ಕಾರ್ಯದರ್ಶಿ ಶ್ರೀ ಸಂತೋಷ್ ಎಸ್.ಪೂಜಾರಿ.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಕೆ.ರೇಖಾ ಶೆಣೈ.
ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಶ್ರೀ ವಿಧಿತ್ ವಿ.ಪೂಜಾರಿ.
ಘಟಕದ ಕಾರ್ಯದರ್ಶಿ ಕುಮಾರಿ ಯಶೋದ.
ಉಪಸ್ಥಿತರಿದ್ದರು.

ಕುಮಾರಿ ಐಶ್ವರ್ಯ ಸಿ.ಅಂಚನ್ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.
ಕಾರ್ಯದರ್ಶಿ ಎಲ್ಲರನ್ನೂ ಸ್ವಾಗತಿಸಿದರು.
ಎಸ್.ಆರ್.ಪ್ರದೀಪ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಮಕ್ಕಳು , ಪೋಷಕರು ಮತ್ತು ಶಿಕ್ಷಕರಿಗೆ ಗೌರವ ಕೊಟ್ಟು ಒಳ್ಳೆಯ ದಾರಿಯಲ್ಲಿ
ನಡೆಯಬೇಕೆಂದು ಹಿತ ನುಡಿ ನುಡಿದರು.
ನಂತರ ವಿಭಾಗ -1ರ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ನಂತರ ಪ್ರಕಾಶ್ ಪಾದೆಬೆಟ್ಟು ಮಾತನಾಡುತ್ತಾ ಘಟಕದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು
ಬಾಬು ಕೋಟ್ಯಾನ್ ಅವರು ಮಾತನಾಡುತ್ತಾ ಶಾಲೆ ಆರಂಭದ ದಿನಗಳ ಬಗ್ಗೆ ತಿಳಿಸಿ ,ಶಾಲೆ ಇನ್ನಷ್ಟು ಅಭಿವೃದ್ಧಿಯಾಗಲಿ ಎಂದು ಹಾರಿಸಿದರು.
ನಂತರ ವಿಭಾಗ -2 ರ 5 ರಿಂದ 7ನೇ ತರಗತಿ ವಿದ್ಯಾರ್ಥಿಗಳ ಬಹುಮಾನ ನೀಡಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ವಂದಿಸಿ ಘಟಕದ ಕಾರ್ಯಕ್ರಮ, ಸದಸ್ಯರ ಒಗ್ಗಟ್ಟು ,ಶಿಸ್ತನ್ನು ಶ್ಲಾಘಿಸಿ,ಘಟಕ ಇನ್ನಷ್ಟು ಯಶಸ್ಸು ಗಳಿಸಿ ,ಚಿರಾಯುವಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮಕ್ಕೆ ಸಹಕರಿಸಿದ ಶಿಕ್ಷಕರಿಗೆ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆಗೈದ ತಲಾ ಒಬ್ಬ ವಿದ್ಯಾರ್ಥಿಗೆ ನೀಡುವ ಕಲಾಶ್ರೀ ,ಕಲಾರತ್ನ ,ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಗೌರವ ಪಡೆದ ವಿದ್ಯಾರ್ಥಿಗಳು ವಿಭಾಗ-1ರ ಕುಮಾರಿ ಮಾನ್ವಿ 3 ನೇ ತರಗತಿ ಕಲಾಶ್ರೀ ಪ್ರಶಸ್ತಿ ಹಾಗೂ
ವಿಭಾಗ -2 ರ ಕುಮಾರಿ ಸೃಷ್ಠಿ 7ನೇ ತರಗತಿ ಅವರಿಗೆ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತೀರ್ಪುಗಾರರ ಮೆಚ್ಚುಗೆ ಗಳಿಸಿದ ಕುಮಾರಿ ನವ್ಯಶ್ರೀ ಅವರನ್ನು ಗೌರವಿಸಲಾಯಿತು.
ವಿಧಿತ್ ವಿ. ಪೂಜಾರಿ ಅವರ ಧನ್ಯವಾದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!