Yuvavahini

MAR 15, 2017 12.13 PM IST

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು

ಯುವ ಸಿಂಚನ : ಗಂಗಾಧರ ಪೂಜಾರಿ

ಸಂಪಾದಕರ ಮಾತು

ಪ್ರೀತಿಯ ವಾಚಕರೇ,

ನಮ್ಮ ಸಂಸ್ಕೃತಿಯನ್ನು ಉಳಿಸಲು ನಾವು ನಮ್ಮ ಮಕ್ಕಳಿಗೆ ಯಾವ ರೀತಿಯ ಶಿಕ್ಷಣವನ್ನು ನೀಡುತ್ತಿದ್ದೇವೆ. ಅವರು ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ನಮ್ಮ ಕರ್ತವ್ಯದ ಬಗ್ಗೆ ವಿಮರ್ಷಿಸೋಣ.

ಮೌಲ್ಯಾಧಾರಿತ, ಸ್ವಾವಲಂಬನೆಯ, ಸರ್ವತೋಮುಖ ಅಭಿವೃದ್ಧಿಯ ಸಾಮಾಜಿಕ, ಪ್ರಾಕೃತಿಕ ಹಾಗೂ ಜೀವನ ಶಿಕ್ಷಣಗಳನ್ನು ಮಕ್ಕಳು ತಮ್ಮ ಪ್ರಾಥಮಿಕ ಶಿಕ್ಷಣದಲ್ಲೇ ಕಲಿಯಬೇಕು. ಮಕ್ಕಳು ವಾಸಿಸುವ ಮನೆ, ಮೇಲೆ ಹೇಳಿರುವ ಶಿಕ್ಷಣಗಳನ್ನು ಮನೆಗಳಲ್ಲಿ ನೋಡಿ, ಕಲಿಯುವ ಮನೆಯಾಗಬೇಕು. ತಾಯಿ-ತಂದೆ, ಹಿರಿಯರು ಮಕ್ಕಳಿಗೆ ಮೇಲೆ ಹೇಳಿರುವ ವಿವಿಧ ರೀತಿಯ ಶಿಕ್ಷಣದ ವಿಚಾರಗಳ ಬಗ್ಗೆ ಸದಾ ಭೋದಿಸುತ್ತಿರಬೇಕು.

ಹಳ್ಳಿಯಲ್ಲಿ ಬೆಳೆಯುತ್ತಿರುವ ಮಗುವಿಗೆ ಪಾಲಕರು, ಮನೆಯ ಹಿರಿಯರು ಈ ಮೇಲೆ ಹೇಳಿರುವ ವಿಚಾರಗಳನ್ನು ತಿಳಿಸುವ ಜೊತೆಗೆ ಇವುಗಳನ್ನು ದಿನನಿತ್ಯ ಪಾಲಿಸುತ್ತಿರುತ್ತಾರೆ. ಆದರೆ ಪಟ್ಟಣದ ಬಹಳಷ್ಟು ಮಕ್ಕಳಿಗೆ ತಮ್ಮ ತಮ್ಮ ಮನೆಗಳು ಕಲಿಯುವ ಮನೆಗಳಾಗಿರುವುದಿಲ್ಲ. ತಂದೆ-ತಾಯಂದಿರು ತಮ್ಮ ಮಕ್ಕಳ ಜೊತೆ ಮನೆಯಲ್ಲಿ ಈ ವಿಚಾರಗಳ ಬಗ್ಗೆ ಭೋದಿಸುವುದು ಬಹಳ ವಿರಳ. ಈ ಮಕ್ಕಳಿಗೆ ತಮ್ಮ ಭೂಮಿಯ ಮಹತ್ವ ಗೊತ್ತಿಲ್ಲ. ಆಹಾರ, ದವಸ ಧಾನ್ಯಗಳು ಹೇಗೆ ಉತ್ಪತ್ತಿಯಾಗುತ್ತವೆ ಎಂಬುದರ ಪರಿವೆಯೇ ಇಲ್ಲ. ಕೇವಲ ಹಣದಿಂದಲೇ ಈ ಎಲ್ಲವನ್ನು ಕೊಂಡುಕೊಳ್ಳಬಹುದು ಎಂದು ಭಾವಿಸಿದ್ದಾರೆ. ಪೋಷಕರು ತಮ್ಮ ತಮ್ಮ ಮಕ್ಕಳಿಗೆ ಈ ವಿಚಾರಗಳನ್ನು ಹೇಳಿಕೊಡಲು ಅವರಿಗೆ ಸಮಯವೇ ಇರುವುದಿಲ್ಲ. ಮಕ್ಕಳಿಗೆ ಮನೆ ಎಂದರೆ ಪೋಷಕರು ಹಣ ಕೊಡುತ್ತಾರೆ, ಕೇಳಿದ್ದನ್ನು ಕೊಡಿಸುತ್ತಾರೆ ಮತ್ತು ಕೇವಲ ಆಶ್ರಯದ ಸ್ಥಳವಾಗಿರುತ್ತದೆ. ಈ ಮನೆಗಳು ವಾಣಿಜ್ಯ ಸ್ವರೂಪ ಪಡೆದುಕೊಂಡಿವೆಯೇ ಹೊರತು, ಕಲಿಯುವ ನಂದಗೋಕುಲಗಳಾಗಿರುವುದಿಲ್ಲ.

ಮಾರ್ಚ್ ತಿಂಗಳು ಬಂತೆಂದರೆ ಮಕ್ಕಳ ಮನಸ್ಸು ಭಯದಿಂದ, ಒತ್ತಡದಿಂದ ಕಂಪಿಸುತ್ತಿರುತ್ತದೆ. ಈ ಸಂದರ್ಭದಲ್ಲಿ ಪೋಷಕರು ತಂದೆ-ತಾಯಂದಿರು ತಮ್ಮ ಮಕ್ಕಳ ವಿದ್ಯಾರ್ಜನೆಯಲ್ಲಿ ಬರೇ ಅಧಿಕ ಅಂಕ ಪಡೆಯುವುದಕ್ಕೋಸ್ಕರ ಒತ್ತಡ ಹೇರುವುದು ತಪ್ಪು. ಇದರಿಂದ ಮಕ್ಕಳ ಮನಸ್ಸಿಗೆ ಆಘಾತ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಪರಿಸ್ಥಿತಿಯಲ್ಲಿ ಮಕ್ಕಳು ಓದಿದ್ದನ್ನು ಮರೆಯುವ ಸಾಧ್ಯತೆ ಹೆಚ್ಚು. ಶಾಲಾ ಪರೀಕ್ಷೆಯ ಪಾಸು-ಫೈಲುಗಳ ಬಗ್ಗೆ ಚಿಂತಿಸದೇ, ಪರೀಕ್ಷಾ ಸಿದ್ಧತೆಗಾಗಿ ಹೆಚ್ಚಿನ ನಿಗಾ ವಹಿಸುವುದು ತಂದೆ-ತಾಯಂದಿರ ಆದ್ಯ ಕರ್ತವ್ಯವಾಗಬೇಕು. ಮಕ್ಕಳ ಸಾಮರ್ಥ್ಯವನ್ನು ಸಂಶಯದಿಂದ ಕಾಣದೆ, ಸಾಧ್ಯವಾದಷ್ಟು ಒಳ್ಳೆಯ ಮಾತುಗಳನ್ನಾಡಿ, ’ನಿನ್ನಿಂದ ಸಾಧ್ಯವಿಲ್ಲ’ ಎನ್ನದೆ, ನೀನು ಮನಸ್ಸು ಮಾಡಿದರೆ ಸಕಲವೂ ಸಾಧ್ಯ ಎಂದು ಹುರಿದುಂಬಿಸಬೇಕು. ಈಗಿನ ಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾಗಿರುವುದರಿಂದ ಏನೇ ಹೇಳಬೇಕಾದರೂ ಬಹಳ ಎಚ್ಚರಿಕೆಯಿಂದ ತಿಳಿಸುವುದು ಸೂಕ್ತ. ಮನೆಯ ಒಳಗಿನ ಕೆಲಸದಲ್ಲಿಯೂ ತಮ್ಮ ಜೊತೆ ಮಕ್ಕಳನ್ನು ಸೇರಿಸಿಕೊಂಡರೆ ಮಕ್ಕಳ ಮನಸ್ಸನ್ನು ಹಗುರವಾಗಿಡುವುದರ ಜೊತೆಗೆ ಒತ್ತಡಕ್ಕೆ ಒಳಗಾಗದಂತೆ ಓದಬಹುದು. ಶಾಂತ ಚಿತ್ತದಿಂದ ಓದಿದರೆ ಓದಿದ್ದನ್ನು ವೇಗವಾಗಿ, ಸರಿಯಾಗಿ ಗ್ರಹಿಸಲು ಸಾಧ್ಯ. ಪರೀಕ್ಷಾ ಸಂದರ್ಭದಲ್ಲಿ ತಂದೆ-ತಾಯಿ, ಪೋಷಕರು ಮಕ್ಕಳ ಜೊತೆ ಎಷ್ಟು ಹೊಂದಿಕೊಳ್ಳುತ್ತಾರೋ ಅಥವಾ ಬೆರೆತುಕೊಳ್ಳುತ್ತಾರೋ, ಮಕ್ಕಳ ಮನಸ್ಸು ಅಷ್ಟೇ ಹಗುರವಾಗುತ್ತದೆ. ಒತ್ತಡದಿಂದ ಹೊರಬಂದು ಪರೀಕ್ಷೆ ಬರೆಯಲು ಮನಸ್ಸು ಸ್ವಚ್ಛವಾಗಿರುತ್ತದೆ. ಮನೆಯ ವಾತಾವರಣವೂ ಹಿತವಾಗಿರುವಂತೆ ನೋಡಿಕೊಳ್ಳಬೇಕು. ಒಟ್ಟಿನಲ್ಲಿ ಪೋಷಕರು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದರೆ ಅವರು ಉತ್ತಮವಾಗಿ ಪರೀಕ್ಷೆಯನ್ನು ಎದುರಿಸಬಲ್ಲರು. ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬಲ್ಲರು. ಸುಶಿಕ್ಷಿತ ವಿದ್ಯಾರ್ಥಿಗಳಾಗಿ ಹೊರಹೊಮ್ಮುವರು. ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ, ನಾಯಕರಾಗಿ ಮೂಡಿ ಬರಲು ಸಾಧ್ಯವಾಗಬಲ್ಲರು.

ಈ ನಿಟ್ಟಿನಲ್ಲಿ ಕಳೆದ ಸಂಚಿಕೆಯಲ್ಲಿ ಪ್ರಕಟವಾದ ಆತ್ಮವಿಶ್ವಾಸ, ಇಂದ್ರಿಯ ನಿಗ್ರಹ ಶಕ್ತಿ ಮತ್ತು ನಮ್ಮ ಸಮಾಜ ಎಂಬ ಆಶಯ ಲೇಖನ ಮುಖಾಂತರ ಯುವ ಸಮಾಜಕ್ಕೆ ಕಿವಿಮಾತು ಹೇಳಿರುವ ಪ್ರಾಧ್ಯಾಪಕ ರಾಕೇಶ್ ಕುಮಾರ್ ಇವರಿಗೆ ಯುವ ಸಿಂಚನ ಬಳಗದ ವಂದನೆಗಳು. ಈ ಸಂಚಿಕೆಯಲ್ಲಿ ಘಟಕಗಳು ಹಮ್ಮಿಕೊಂಡ ಸಮಾಜಮುಖಿ ಕಾರ್ಯಕ್ರಮಗಳ ವರದಿಯನ್ನು ನಿಮಗೆ ನೀಡುತ್ತಿದ್ದೇವೆ. ಒಮ್ಮೆ ಕಣ್ಣಾಡಿಸಿ ಅಭಿಪ್ರಾಯ ತಿಳಿಸಿ.

– ಕಾರ್ಯನಿರ್ವಾಹಕ ಸಂಪಾದಕ

One thought on “ಯುವ ಸಿಂಚನ : ಗಂಗಾಧರ ಪೂಜಾರಿ

  1. Very aptly said by the editor. Thank you Gangadhar for your precious contribution to Yuvavahini.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!