Yuvavahini

MAR 12, 2022 4.46 AM IST

ಯುವವಾಹಿನಿ (ರಿ.)ಕಡಬ ಘಟಕ

ಯುವವಾಹಿನಿ ವಿದ್ಯಾ ಸ್ಫೂರ್ತಿ- 2022

ಕಡಬ :- ದಿನಾಂಕ 12.03.2022 ರಂದು ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ SSLC ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಭೇತಿ ಕಾರ್ಯಗಾರ “ವಿದ್ಯಾ ಸ್ಪೂರ್ತಿ” ಕಾರ್ಯಕ್ರಮವು ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ “ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ SSLC ಯ ಅಂಕಗಳು ಮಾನ ದಂಡವಾಗುತ್ತದೆ ಹಾಗೆಯೇ ಈ ಅದ್ಭುತ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು, ಮುಂದಿನ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ತಿಳಿಸುವುದರೊಂದಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಕಡಬ ಪೊಲೀಸ್ ಠಾಣೆ ಉಪ ನೀರೀಕ್ಷಕರಾದ ರುಕ್ಮ ನಾಯ್ಕ್ ಇವರು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬೆಳೆಯಬೇಕಾದರೆ ಎಸ್.ಎಸ್.ಎಲ್.ಸಿ ಘಟ್ಟವೆಂಬುದು ಪ್ರಮುಖವಾಗಿರುವುದು, ಹಾಗೆಯೇ ಮೊಬೈಲ್ ಬಳಕೆಯನ್ನು ಕಡಿಮೆ ಬಳಸಿ ನಿಮ್ಮ ಭವಿಷ್ಯವು ಉಜ್ವಲವಾಗಿರುವುದೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಫಾದರ್ ಅರುಣ್ ವಿಲ್ಸನ್ ಲೋಬೊ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಪ್ರಪಂಚಕ್ಕೆ ನಕ್ಷತ್ರಗಳಾಗಿ ಪ್ರಜ್ವಲಿಸಬೇಕು ಹಾಗೆಯೇ ಮನೆಗೆ ದೀಪಗಳಾಗಿರಬೇಕೆಂದು ತಿಳಿಸಿದರು. ಪುತ್ತೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಸಿ ಇವರು ಈ ತರಬೇತಿಯ ಪ್ರಯೋಜನವು ಎಸ್.ಎಸ್.ಎಲ್.ಸಿ ಗೆ ಮಾತ್ರ ಸೀಮಿತವಾಗಿರದೆ ಮುಂದಿನ ವಿದ್ಯಾಭ್ಯಾಸಕ್ಕೂ ಸದುಪಯೋಗವಾಗಲಿದೆ ಹಾಗೂ ತಂದೆ ತಾಯಿಯ ಕನಸನ್ನು ನನಸು ಮಾಡಿ ಮತ್ತು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಿರಿ ಎಂದು ಹಾರೈಸಿದರು.

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಮಾತನಾಡಿ ಪರಿಪೂರ್ಣತೆ ಮತ್ತು ಶ್ರದ್ದೆಯನ್ನು ಈ ಅದ್ಭುತ ತರಬೇತಿಯಲ್ಲಿ ಪಡೆದುಕೊಳ್ಳಿ ಎಂದು ಶುಭ ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕಡಬ ಘಟಕದ ಅಧ್ಯಕ್ಷರಾದ ಪ್ರವೀಣ್ ಓಂಕಲ್ ವಹಿಸಿದ್ದರು. ವೇದಿಕೆಯಲ್ಲಿ ಯುವ ಉದ್ಯಮಿ ಅಭಿಲಾಶ್ ಪಿ. ಕೆ ನೂಜಿಬಾಳ್ತಿಲ, ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾದ ಬಾಬು ಪೂಜಾರಿ, ಕೇಂದ್ರ ಸಮಿತಿ ಮಂಗಳೂರು ಇದರ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲ, ಘಟಕದ ವಿದ್ಯಾನಿಧಿ ನಿರ್ದೇಶಕರಾದ ಜಯಪ್ರಕಾಶ್ ದೋಳ ಹಾಜರಿದ್ದರು. ಶಿವಪ್ರಸಾದ್ ಮರ್ಧಾಳ ಸ್ವಾಗತಿಸಿ, ಕಾರ್ಯದರ್ಶಿ ಕೃಷ್ಣಪ್ಪ ಅಮೈ ವಂದಿಸಿ, ಸುಪ್ರಿತಾ ಚರಣ್ ಪಾಲಪ್ಪೆ ಕಡಬ ನಿರೂಪಿಸಿದರು.

ತರಭೇತಿದಾರರಾಗಿ ಜೆಸೀ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 13 ಶಾಲೆಯ 750 ವಿದ್ಯಾರ್ಥಿಗಳು ಎರಡು ಹಂತದಲ್ಲಿ ತರಬೇತಿ ಪಡೆದರು. ಈ ಕಾರ್ಯಕ್ರಮದಲ್ಲಿ 13 ಶಾಲಾ ಶಿಕ್ಷಕರು ಕೂಡ ಭಾಗವಹಿಸಿದರು, ಯುವವಾಹಿನಿ(ರಿ.) ಕಡಬ ಘಟಕದ ಸದಸ್ಯರು ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!