Yuvavahini

FEB 19, 2017 7.17 AM IST

ಯುವ ಸಿಂಚನ

ದೇಯಿ ಬೈದ್ಯೆತಿ ಮತ್ತು ಕೋಟಿ-ಚೆನ್ನಯರ ಮೂಲಸ್ಥಾನ ಶಿಲಾನ್ಯಾಸ ; ರಾಮ-ಲಕ್ಷ್ಮಣರಿಗೆ ಸಮಾನರಾದ ಕೋಟಿ-ಚೆನ್ನಯರು: ಕನ್ಯಾಡಿ ಶ್ರೀ

ಸಮಾಜದಲ್ಲಿ ಅಧರ್ಮ ತುಂಬಿದ್ದ ಸಂದರ್ಭ ಶಸ್ತ್ರಬಲದ ಮೂಲಕ ಧರ್ಮ ಸ್ಥಾಪನೆ ಮಾಡಿದ ಕೋಟಿ ಚೆನ್ನಯರು ರಾಮ-ಲಕ್ಷ್ಮಣರಿಗೆ ಸಮಾನರು ’ವಸುಧೈವ ಕುಟುಂಬಕಂ’ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಗಳ ಆಶಯದಂತೆ ಶಾಂತಿ ನೆಲೆಸಬೇಕಾದರೆ ಧರ್ಮ ಕ್ಷೇತ್ರಗಳ ಉನ್ನತಿಯಾಗಬೇಕು. ಕೋಟಿ-ಚೆನ್ನಯರು, ಮಾತೆ ದೇಯಿ ಬೈದ್ಯೆತಿಯ ಕ್ಷೇತ್ರ ಅಭಿವೃದ್ಧಿಗೆ ಕೈಂಕರ್ಯ ತೊಡುವ ಮೂಲಕ ಸುವರ್ಣಾಕ್ಷರದಲ್ಲಿ ಬರೆದಿಡುವ ಸಂದರ್ಭ ಸೃಷ್ಟಿಯಾಗಿದೆ ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಮಾತೆ ದೇಯಿ ಬೈದ್ಯೆತಿ ಮತ್ತು ಕೋಟಿ-ಚೆನ್ನಯರ ಮೂಲಸ್ಥಾನವಾಗಿರುವ ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ನಂದನ ಬಿತ್ತಿಲ್‌ನಲ್ಲಿ ಮೂಲಸ್ಥಾನ ಗರಡಿ ಸೇರಿ 9 ಐತಿಹಾಸಿಕ ಸ್ಥಳಗಳ ಪುನರುತ್ಥಾನಕ್ಕೆ 19-02-2017 ರಂದು ನಡೆದ ಶಿಲಾನ್ಯಾಸ ಕಾರ್ಯಕ್ರಮದ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ಸಭಾ ಕಾರ್ಯಕ್ರಮ ಉದ್ಘಾಟಿಸಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಸಾಮಾಜಿಕ ಅಸಮಾನತೆ ವಿರುದ್ಧ ಧ್ವನಿಯೆತ್ತಿ ಹೋರಾಟದ ಕಿಚ್ಚು ಹಚ್ಚಿದವರು ಕೋಟಿ-ಚೆನ್ನಯರು. ಅವರ ಮೂಲ ಕ್ಷೇತ್ರ ಅಭಿವೃದ್ಧಿಗೆ ಎಲ್ಲ ಸಹಕಾರ ನೀಡಲಾಗುವುದು. ನಾರಾಯಣ ಗುರುಸ್ವಾಮಿ ಅವರ ಸಿದ್ಧಾಂತ ವರ್ತಮಾನದಲ್ಲಿ ಅನುಷ್ಠಾನದ ಅಗತ್ಯವಿದೆ. ಪಡುಮಲೆ ಕ್ಷೇತ್ರದ ಮುಡುಪಿನಡ್ಕದಲ್ಲಿ ಮಾತೆ ದೆಯಿ ಬೈದ್ಯೆತಿ ಔಷಧ ವನ ನಿರ್ಮಾಣದ ಅವಕಾಶ ಸಿಕ್ಕಿರುವುದಕ್ಕೆ ಸಂತೋಷವಿದೆ. 2ನೇ ಹಂತದ ಅಭಿವೃದ್ಧಿ ಕಾರ್ಯ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕುಂದಾಪುರ, ಉಡುಪಿ, ಕಾರ್ಕಳ, ಮೂಡಬಿದ್ರೆ ಇನ್ನಿತರ ಕಡೆಗಳಿಂದ ತಂಡೋಪ ತಂಡವಾಗಿ ಜನಸಾಗರ ಹರಿದು ಬಂತು. ಸುಮಾರು ೩೦೦ಕ್ಕೂ ಅಧಿಕ ಬಸ್‌ಗಳಲ್ಲಿ, ಕಾರು, ಮುಂತಾದ ವಿವಿಧ ವಾಹನಗಳಲ್ಲಿ ಜನರು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದರು. ನಿರೀಕ್ಷೆಗೂ ಮೀರಿ ಜನಸಾಗರ ಸಂಗಮಗೊಳ್ಳುವ ಮೂಲಕ ಗೆಜ್ಜೆಗಿರಿ ಕ್ಷೇತ್ರ ದಾಖಲೆ ಬರೆಯಿತು. ದೇಶ-ವಿದೇಶಗಳಿಂದ ಅತಿಥಿ ಗಣ್ಯರು ಆಗಮಿಸಿದ್ದರು. ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಬೆಳಗ್ಗಿನ ಉಪಹಾರ, ಮಧ್ಯಾಹ್ನ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಭಕ್ತಾದಿಗಳ ವಾಹನ ನಿಲುಗಡೆ ಅಲ್ಲಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಭಾನುವಾರ ಬೆಳಿಗ್ಗೆ ಕ್ಷೇತ್ರಕ್ಕೆ ಬೃಹತ್ ವಾಹನ ಜಾಥಾ ಏರ್ಪಡಿಸಲಾಗಿತ್ತು. ಮಂಗಳೂರು, ಕಾರ್ಕಳ, ಮೂಡಬಿದ್ರೆ, ಬಂಟ್ವಾಳ, ಗುರುವಾಯನಕೆರೆ ಮುಂತಾದ ಕಡೆಗಳಿಂದ ವಾಹನ ಜಾಥಾ ಆಗಮಿಸಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!