Yuvavahini

APR 10, 2022 7.45 AM IST

ಚೈತನ್ಯ-2022 ತರಬೇತಿ ಕಾರ್ಯಾಗಾರದಲ್ಲಿ ತರಬೇತುದಾರರು

ಯುವವಾಹಿನಿ ಸದಸ್ಯರ ಶಿಸ್ತು ಮತ್ತು ಉತ್ಸಾಹ ಕಾರ್ಯಾಗಾರದ ಯಶಸ್ಸಿನ ಮೂಲ : ಸದಾನಂದ ನಾವಡ

ಮಾಣಿ : ಕಾರ್ಯಾಗಾರದಲ್ಲಿ ಭಾಗವಹಿಸಿದ‌ ಸದಸ್ಯರ ಉತ್ಸಾಹ, ಶಿಸ್ತು, ಯುವವಾಹಿನಿಯ ಸಂಸ್ಥೆಯ ಮೇಲಿನ ಅತೀವ ಪ್ರೀತಿ ಕಾರ್ಯಾಗಾರದ ಯಶಸ್ಸಿನ ಮೂಲ ಎಂದು ರಾಷ್ಟ್ರೀಯ ತರಬೇತುದಾರರಾದ ಸದಾನಂದ ನಾವಡ ತಿಳಿಸಿದರು.

ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ವ್ಯಕ್ತಿತ್ವ ವಿಕಸನ‌ ನಿರ್ದೇಶಕರಿಗೆ ಮಾಣಿ ನಾರಾಯಣಗುರು ಸಭಾಭವನದಲ್ಲಿ ಜರುಗಿದ ಚೈತನ್ಯ-2022 ತರಬೇತಿ ಕಾರ್ಯಾಗಾರದ ಮುಖ್ಯ ತರಬೇತುದಾರರಾದ ಸದಾನಂದ ನಾವಡ ರವರು ನಾಯಕತ್ವ, ಸಂಘಟನೆಯ ಶಕ್ತಿ ವಿಷಯದ ಬಗ್ಗೆ ತರಬೇತಿ ನೀಡಿದರು .

ನಾಯಕತ್ವ ಗುಣಗಳನ್ನು ಮೈಗೂಡಿಸಿದಾಗ ಸಂಘಟನೆಯಲ್ಲಿ ಯಶಸ್ಸು ಸಾಧ್ಯ : ಸುಧಾಕರ್ ಕಾರ್ಕಳ

ಉತ್ತಮ ನಾಯಕರಾಗಲು ಕೆಲವೊಂದು ಗುಣಗಳನ್ನು ಮೈಗೂಡಿಸಿಕೊಂಡಾಗ ಸಂಘಟನೆಯನ್ನು ಯಶಸ್ವಿಯಾಗಿ ಮನ್ನಡೆಸಬಹುದು ಎಂದು ರಾಷ್ಟ್ರೀಯ ತರಬೇತುದಾರ ಹಾಗೂ ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕರಾದ, ಸುಧಾಕರ್ ಕಾರ್ಕಳರವರು ಸಂಘಟನೆಯ ಹೊಂದಾಣಿಕೆ,ಕಾರ್ಯಕ್ರಮ ನಿರ್ವಹಣೆ ಮತ್ತು ಪರಿಣಾಮಕಾರಿ ಭಾಷಣದ ಬಗ್ಗೆ ಸುಧಾಕರ್ ಕಾರ್ಕಳ ತಿಳಿಸಿದರು.

ಯುವವಾಹಿನಿ ನಾಯಕತ್ವ ರೂಪಿಸುವ ಹೆಬ್ಬಾಗಿಲು : ರಾಜೇಶ್ ಸುವರ್ಣ

ಯುವವಾಹಿನಿಯ ವೈಶಿಷ್ಠಪೂರ್ಣ ಉಪನಿಬಂಧನೆ ಹಾಗೂ ನಿಯಮಾವಳಿಗಳು ಸಂಘಟನೆ ಶಿಸ್ತು ಬದ್ದವಾಗಿ ಮುನ್ನಡೆಯಲು ಸಾಧ್ಯವಾಗಿದೆ. ಕ್ರೀಯಾಶಿಲ ಯೋಜನೆ ಹಾಗೂ ಯೋಚನೆಗಳ ಮೂಲಕ ಯುವಜನತೆಗೆ ಯುವವಾಹಿನಿ ನಾಯಕತ್ವ ರೂಪಿಸುವ ಹೆಬ್ಬಾಗಿಲು ಆಗಿದೆ ಎಂದು “ಯುವವಾಹಿನಿ ಮತ್ತು ನಾನು” ವಿಚಾರದ ಬಗ್ಗೆ ತರಬೇತುದಾರ ಹಾಗೂ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾದ ರಾಜೇಶ್ ಸುವರ್ಣ ರವರು ತಿಳಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ರಮೇಶ್ ಮುಜಲ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸಚಿನ್ ಎಂ, ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತರಬೇತಿ ಕಾರ್ಯಗಾರದ ತರಬೇತುದಾರರನ್ನು ಸನ್ಮಾನಿಸಲಾಯಿತು.ಯುವವಾಹಿನಿ ಕೇಂದ್ರ ಸಮಿತಿಯ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಂಚಾಲಕರಾದ ಪ್ರಶಾಂತ್ ಮಾಣಿ ಸ್ವಾಗತಿಸಿದರು, ಮಾಣಿ ಘಟಕದ ಕಾರ್ಯದರ್ಶಿ ರೇಣುಕಾ ಕಣಿಯೂರು ವಂದಿಸಿದರು, ಕೋಶಾಧಿಕಾರಿ ರಾಜೇಶ್ ಬಲ್ಯ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!