Yuvavahini

MAR 20, 2022 5.41 AM IST

ಯುವವಾಹಿನಿ (ರಿ.) ಹಳೆಯಂಗಡಿ ಘಟಕದ ಪದಗ್ರಹಣ ಸಮಾರಂಭ

ಸಮಾಜಮುಖಿ ಕಾರ್ಯಗಳಿಗೆ ಯುವವಾಹಿನಿ ಮಾದರಿ : ಚಂದ್ರಶೇಖರ ನಾನಿಲ್

ಯುವವಾಹಿನಿ ಸಂಸ್ಥೆಯು ಯುವ ಸಮುದಾಯವನ್ನು ಕಟ್ಟಿ ಬೆಳೆಸುವ ಧ್ಯೇಯದೊಂದಿಗೆ ಇಂದು ಮಾದರಿಯಾಗಿ ಬೆಳೆದಿದೆ. ಸಮಾಜಮುಖಿ ಚಿಂತನೆಯಿಂದ ತಮ್ಮ ಸೇವೆಯನ್ನು ಎಲ್ಲಾ ಸಮಾಜಕ್ಕೂ ನೀಡುತ್ತಿರುವುದು ಶ್ಲಾಘನೀಯ ಇಂತಹ ಸೇವಾ ಸಂಸ್ಥೆಗೆ ಉತ್ತಮ ಭವಿಷ್ಯವಿದೆ ಎಂದು ಹಳೆಯಂಗಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಚಂದ್ರಶೇಖರ ನಾನಿಲ್ ಹೇಳಿದರು.
ಅವರು ದಿನಾಂಕ 20.03.2022 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ವಠಾರದಲ್ಲಿ ಹಳೆಯಂಗಡಿ ಯುವವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಘಟಕದ ನಿರ್ಗಮನ ಅಧ್ಯಕ್ಷರಾದ ಹರೀಶ್ ಆರ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಹಳೆಯಂಗಡಿ ಘಟಕದಿಂದ ಹಳೆಯಂಗಡಿ ಬಿಲ್ಲವ ಸಂಘದ ಕಟ್ಟಡ ಸಮಿತಿಗೆ ರೂ ಒಂದು ಲಕ್ಷ ವನ್ನು ಹಸ್ತಾಂತರಿಸಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಅವರು ನೂತನ ಅಧ್ಯಕ್ಷರಾದ ಕಿರಣ್ ಕುಮಾರ್ ಅವರ ತಂಡದ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಶೈಕ್ಷಣಿಕ ಸಾಧಕಿ ರಶ್ಮಿ ಆರ್., ಕ್ರೀಡಾ ಕ್ಷೇತ್ರದ ಸುಷ್ಮಾ ತಾರನಾಥ್ ಅಮೀನ್ ಪಿಎಚ್. ಡಿ. ಪದವೀಧರೆ ಡಾ. ಅನುಷಾ ಶರತ್ ಸಾಲಿಯಾನ್, ಲಯನ್ಸ್ ಕ್ಲಬ್ ನ ಸಾಧಕ ರಮೇಶ್ ಬಂಗೇರ ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ವಿನೋದ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು ಉದಯ ಅಮೀನ್ ಮಟ್ಟು ಅವರನ್ನು ಸಂದರ್ಭ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ನ ಪ್ರಾಂತೀಯ ಅಧ್ಯಕ್ಷರು ರಮೇಶ್ ಬಂಗೇರ,ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರು ಮೋಹನ್ ಸುವರ್ಣ, ಸಂಘದ ಗೌರವಾಧ್ಯಕ್ಷ ಗಣೇಶ್ ಬಂಗೇರ ಉಪಸ್ಥಿತರಿದ್ದರು. ದೀಪಕ್ ನಾನಿಲ್ ಸ್ವಾಗತಿಸಿದರು, ಶರತ್ ಸಾಲಿಯಾನ್ ಪ್ರಸ್ತಾವನಾಗೈದರು, ಕೇಂದ್ರ ಸಮಿತಿ ಯ ಸಂಘಟನ ಕಾರ್ಯದರ್ಶಿ ಅರುಣ್ ಕುಮಾರ್ ಹಾಗೂ ಭಾಸ್ಕರ್ ಸಾಲಿಯಾನ್ ಪರಿಚಯಿಸಿದರು. ಘಟಕದ ಕಾರ್ಯದರ್ಶಿ ಚೇತನ್ ವಾರ್ಷಿಕ ವರದಿ ವಾಚಿಸಿದರು. ಕಲ್ಲಾಡಿ ಹಿಮಕರ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!