Yuvavahini

MAY 29, 2022 4.45 PM IST

ಯುವವಾಹಿನಿ(ರಿ.) ಮಾಣಿ ಘಟಕ

ಮನೆ ಮನೆಗೆ ಗುರುತತ್ವ ಸಂಚಾರ

ಮಾಣಿ :- “ಒಂದೇ ಜಾತಿ ಒಂದೇ ಮತ ಒಂದೇ ದೇವರು” ಎನ್ನುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತಾ ಬಂದಿದೆ. ಗುರುಗಳ ತತ್ವ ಸಂದೇಶಗಳು ಪ್ರತಿಯೊಬ್ಬರಿಗೂ ತಿಳಿಯಬೇಕು, ಪ್ರತಿ ಮನೆಗೂ ತಲುಪಬೇಕು ಎನ್ನುವ ದೃಷ್ಟಿಯಿಂದ “ಮನೆ ಮನೆಗೆ ಗುರು ತತ್ವ ಸಂಚಾರ” ಎನ್ನುವ ಕಾರ್ಯಕ್ರಮವನ್ನು ಮಾಣಿ ಘಟಕದ ವತಿಯಿಂದ ಕಳೆದ ಸಾಲಿನಲ್ಲಿ ಆಯೋಜಿಸಲಾಗಿತ್ತು. ಈ ಸಾಲಿನ ಎರಡನೇ ಕಾರ್ಯಕ್ರಮವನ್ನು ಜನಾರ್ಧನ ಪೂಜಾರಿ ಅರೆಬೆಟ್ಟು,ವೀರಕಂಭ ಇವರ ಮನೆಯಲ್ಲಿ ದಿನಾಂಕ 29-05-2022ರಂದು ನಡೆಸಲಾಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಮನೆಯ ಯಜಮಾನರಾದ ಜನಾರ್ಧನರವರು ಗುರುಗಳ ಶ್ಲೋಕದೊಂದಿಗೆ, ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ನಂತರ ಗುರುಗಳ ತತ್ವ, ಸಂದೇಶ ಮತ್ತು ಗುರುಗಳು ಸಮಾಜಕ್ಕೆ ನೀಡಿದ ಕೊಡುಗೆಯ ಬಗ್ಗೆ ಸದಸ್ಯರಿಗೆ ಮನ ಮುಟ್ಟುವಂತೆ ಘಟಕದ ಕೋಶಾಧಿಕಾರಿಯಾದ ರಾಜೇಶ್ ಎಸ್ ಬಲ್ಯ ರವರು ತಿಳಿಸಿದರು. ಬಿಲ್ಲವ ಗ್ರಾಮ ಸಮಿತಿ ವೀರಕಂಬ ಇದರ ಅಧ್ಯಕ್ಷರಾದ ಜಯಪ್ರಕಾಶ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು ರವರು ಇದೊಂದು ಉತ್ತಮ ಕಾರ್ಯಕ್ರಮ, ಗುರುಗಳ ಸಂದೇಶ ಎಲ್ಲರಿಗೂ ತಲುಪಬೇಕು ಮತ್ತು ಇಂತಹ ಕಾರ್ಯಕ್ರಮ ಇನ್ನಷ್ಟು ಆಗಬೇಕು ಎಂದರು.

ನಂತರ ಕಾರ್ಯಕ್ರಮವನ್ನು ಮಾಡಲು ಅವಕಾಶ ಮಾಡಿಕೊಟ್ಟ ಜನಾರ್ಧನ ಪೂಜಾರಿ ಮತ್ತು ಅವರ ಕುಟುಂಬದವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಗೌರವ ಸಲಹೆಗಾರರಾದ ಯಶೋಧರ ಮಾಣಿ,ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಪ್ರವೀಣ್ ಕೋಟ್ಯಾನ್, ಸತೀಶ್ ಬಾಯಿಲ, ದೈವ ಪಾತ್ರಿಯಾದ ಶೇಖರ ಅರೆಬೆಟ್ಟು,ಅರೆಬೆಟ್ಟು ಗುತ್ತುವಿನ ರತ್ನಾಕರ ಭಂಡಾರಿ,ರಾಮಚಂದ್ರ ಪೂಜಾರಿ,ಬಿಲ್ಲವ ಗ್ರಾಮ ಸಮಿತಿ ಕಲ್ಲಡ್ಕ ವಲಯದ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ,ವೆಂಕ್ಕಪ್ಪ ಪೂಜಾರಿ ಗೋಳಿಮಾರ್,ಕೊರಗಪ್ಪ ಪೂಜಾರಿ ಕೇಪುಲಕೋಡಿ ರವರು ಉಪಸ್ಥಿತರಿದ್ದರು. ಘಟಕದ ಸಂಘಟನಾ ಕಾರ್ಯದರ್ಶಿ ಜನಾರ್ಧನ ಪೂಜಾರಿ ಕೊಡಂಗೆ ವಂದನಾರ್ಪಣೆಗೈದರು. ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಶಾಂತ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!