Yuvavahini

JUL 03, 2022 3.54 PM IST

ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು ಮಂಗಳೂರು ಮಹಿಳಾ ಘಟಕದ ವತಿಯಿಂದ

ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ.

ದಿನಾಂಕ 03.07.2022ರ ಭಾನುವಾರ ಯುವವಾಹಿನಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವು ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಛಾಯಾಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ದೀಪ ಬೆಳಗಿಸುವುದರ ಮೂಲಕ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಮಟ್ಟುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವು ಮಹಿಳಾ ಘಟಕದ ಪದಾಧಿಕಾರಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲಾ ಅತಿಥಿ ಅಭ್ಯಾಗತರನ್ನು ಗೌರವಪೂರ್ವಕವಾಗಿ ಸ್ವಾಗತಿಸಿದರು. ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ಅರವಿಂದ ಡಿ ಬಾಲೇರಿಯವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರಕಾರವು ಜೀವನೋಪಾಯಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿ, ಕಾರ್ಯಕ್ರಮವನ್ನು ಆಯೋಜಿಸಿರುವ ಘಟಕಗಳಿಗೆ ಅಭಿನಂದನೆ ಸಲ್ಲಿಸಿದರು. ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುನೀತಾ ಗೋಪಾಲಕೃಷ್ಣರವರು ಪ್ರಾಸ್ತಾವಿಕ ಮಾತನಾಡಿದರು.

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟುರವರು ಮಂಗಳೂರು ಘಟಕ ಮತ್ತು ಮಹಿಳಾ ಘಟಕವನ್ನು ಅಭಿನಂದಿಸುತ್ತಾ , ಮುಂದಿನ ದಿನಗಳಲ್ಲಿ ಶಿಬಿರಾರ್ಥಿಗಳು ಸ್ವ ಉದ್ಯೋಗ ನಡೆಸಲು ಈ ಕಾರ್ಯಕ್ರಮವು ಉತ್ತಮ ಪ್ರೇರಣೆಯಾಗಲಿಯೆಂದರು. ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಹಾಗೂ ಉದ್ಯಮಶೀಲತಾ ತರಬೇತುದಾರರಾದ ರೇಖಾ ಗೋಪಾಲ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳು ಹಾಗೂ ತರಬೇತುದಾರರಾದ ಸತೀಶ್ ಮಾಬೇನ್, ಮೋಹನಾಂಗಯ್ಯ ಸ್ವಾಮಿ ಸತೀಶ್ ಅತ್ತಾವರ ಸರಕಾರದಿಂದ ದೊರೆಯುವ ಸವಲತ್ತುಗಳು, ಸರಕಾರದ ಯೋಜನೆಗಳು, ಕಾರ್ಯನಿರ್ವಹಿಸುವ ಕ್ರಮಗಳು, ಬ್ಯಾಂಕಿನಿಂದ ದೊರೆಯುವ ಸಾಲ ಸೌಲಭ್ಯಗಳು ಹಾಗೂ ಸಬ್ಸಿಡಿಗಳ ಬಗ್ಗೆ ವಿವರವಾದ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು. ಮಂಗಳೂರು ಘಟಕದ ಕಾರ್ಯದರ್ಶಿ ಅಶೋಕ್ ಅಂಚನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಿಡಾಕ್ ನ ಜಿಲ್ಲಾ ಸಂಯೋಜಕರಾದ ಕುಮಾರಿ ಪ್ರವಿಶ್ಯರವರು ಕಾರ್ಯಕ್ರಮವನ್ನು ಆಯೋಜಿಸಿದರು. ವಿದ್ಯಾರವರು ಶಿಬಿರಾರ್ಥಿಗಳ ನೊಂದಣಿ ಮಾಡಿದರು. ಮಹಿಳಾ ಘಟಕದ ಕಾರ್ಯದರ್ಶಿಯವರಾದ ಸುಭಾಷಿಣಿಯವರು ಎಲ್ಲರಿಗೂ ವಂದನಾರ್ಪಣೆ ಸಲ್ಲಿಸಿದರು. 56 ಜನ ಶಿಬಿರಾರ್ಥಿಗಳು ಉದ್ಯಮಶೀಲತೆ ತಿಳುವಳಿಕೆ ಕಾರ್ಯಕ್ರಮದ ಪ್ರಯೋಜನವನ್ನು ಪಡಕೊಂಡರು. ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಲಕ್ಷ್ಮಿ ನಾರಾಯಣ್ ರವರು ಕಾರ್ಯಕ್ರಮದ ಅನುಕೂಲತೆಗಳ ವಿವರ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಸರ್ವರಿಗೂ ವಂದನಾರ್ಪಣೆಯನ್ನು ಸಲ್ಲಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!