Yuvavahini

JUL 10, 2022 3.17 PM IST

ಯುವವಾಹಿನಿ ಬಂಟ್ವಾಳ ವತಿಯಿಂದ 

ಸೇಸಪ್ಪ ಕೋಟ್ಯಾನ್ ದಂಪತಿಗಳಿಗೆ ಅಭಿನಂದನೆ

ಬಂಟ್ವಾಳ : ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಕೆ.ಸೇಸಪ್ಪ ಕೋಟ್ಯಾನ್ ದಂಪತಿಗಳನ್ನು ಅಭಿನಂದಿಸಲಾಯಿತು. ಸಾರ್ಥಕ ಐವತ್ತು ವರುಷಗಳ ಶುಭಯಾನದ ಸವಿನೆನಪಿನ ಸಲುವಾಗಿ ಕೆ.ಸೇಸಪ್ಪ ಕೋಟ್ಯಾನ್, ಚಂದ್ರಾವತಿ ದಂಪತಿಗಳಿಗೆ ಯುವವಾಹಿನಿ ಬಂಟ್ವಾಳ ಘಟಕದ ಪರವಾಗಿ ಅಭಿಮಾನದ ಸಿಂಚನ ಸಮರ್ಪಿಸಲಾಯಿತು.

ದಿನಾಂಕ‌ 10.07.2022 ರಂದು ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಅಭಿನಂದಿಸಲಾಯಿತು.

ಸೂರ್ಯನಂತೆ ಜಗವ ಬೆಳಗದಿದ್ದರೂ ಹಣತೆಯಾಗಿ ಅಲ್ಪ ಕತ್ತಲೆ ಕಳೆದರೂ ಸಾಕೆನ್ನುತ್ತೇವೆ. ಆದರೆ ನಕ್ಷತ್ರದಂತೆ ಬೆಳಗಿ ಸಮಾಜದ ಕತ್ತಲೆ ನೀಗಿದ ಬಿಳಿ ಪಂಚೆ, ಬಿಳಿ ಅಂಗಿಯೊಳಗಿನ ಶುಭ್ರ ಸ್ವಚ್ಚ ಬಿಳಿ ಮನಸ್ಸಿನ ಸೇಸಪಣ್ಣ, ಉದ್ಯೋಗದಾತರಾಗಿ, ಸಮಾಜಸೇವಕನಾಗಿ, ಸಮುದಾಯದ ಶಕ್ತಿಯಾಗಿ, ಧಾರ್ಮಿಕ ಕ್ಷೇತ್ರದ ಭಯ ಭಕ್ತಿಯ ಸೇವಕನಾಗಿ , ಎಲ್ಲರೊಳೊಗೊಂದಾಗಿ ಬೆರೆವವರು ಬೆಸೆವವರು. ಸಾಧನೆ ಮೆರೆದು ಇತಿಹಾಸದ ಪುಟದಲ್ಲಿ ಅಜರಾಮರರಾದ ಅದೆಷ್ಟೋ ಸಾಧಕರು ನಮಗೆ ಪ್ರೇರಣೆಯಾಗುತ್ತಾರೆ. ಆದರೆ ತನ್ನ ಬದುಕಿನುದ್ದಕ್ಕೂ ತನ್ನದೇ ಆದ ಜೀವನ ಶೈಲಿ ಮೆರೆದು ಆದರ್ಶಪ್ರಾಯರಾದ ಸೇಸಪ್ಪ ಕೋಟ್ಯಾನರು ಮಾಡಿದ ಸಾಧನೆ, ನೀಡಿದ ಸೇವೆ, ನಡೆದ ಹಾದಿ ಹೇಳುತ್ತಾ ಸಾಗಿದರೆ ಅದೇ ಒಂದು ಮಹಾಗ್ರಂಥವಾದೀತು. ಬಗೆದಷ್ಟು ಮೊಗೆವ, ಮೊಗೆದಷ್ಟು ತೆಗೆವ, ಹೇಳಿದಷ್ಟು ಹೆಚ್ಚುವ, ಚಿಂತಿಸಿದಷ್ಟು ಹೊಳೆವ ಪದಗಳಿಗೆ ನಿಲುಕದ, ನಿಲುಕಿದರೂ ವರ್ಣಿಸಲಾಗದ ಅಪ್ಪಟ ಅಪರಂಜಿ ಸೇಸಪ್ಪಣ್ಣ. ಬಿಲ್ಲವ ಸಮಾಜದ ಮುಂದಾಳು, ಯುವವಾಹಿನಿಯ ಅಭಿಮಾನಿ, ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾಗಿ ಅನನ್ಯ ಸೇವೆ ನೀಡಿದ ಸೇಸಪ್ಪ‌ ಕೋಟ್ಯಾನ್ ಇವರ ಮುಂದಿನ ಬದುಕು ಆರೋಗ್ಯ ನೆಮ್ಮದಿಯಿಂದ ಕೂಡಿರಲಿ ಎಂಬ ಶುಭ ಹಾರೈಕೆಗಳೊಂದಿಗೆ

ಅಧ್ಯಕ್ಷರು ಮತ್ತು ಸದಸ್ಯರು
ಯುವವಾಹಿನಿ(ರಿ)
ಬಂಟ್ವಾಳ ತಾಲೂಕು ಘಟಕ

 

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!