Yuvavahini

AUG 07, 2022 3.01 PM IST

ಯುವವಾಹಿನಿ (ರಿ.) ಮಾಣಿ ಘಟಕ : ಆಟಿದ ತಿರ್ಲ್

ತುಳುವರ ಬದುಕಿನ ಸಂಸ್ಕೃತಿ, ತಮ್ಮ ದಿನನಿತ್ಯದ ಕೆಲಸ – ಕಾರ್ಯ :- ಡಾ. ಯೋಗೀಶ್ ಕೈರೋಡಿ

ಮಾಣಿ :- ತುಳುವರ ಬದುಕಿನ ಪ್ರತಿಯೊಂದು ಕಾರ್ಯವು ಕೆಲಸಕ್ಕೆ ಕೇಂದ್ರಿತವಾಗಿದ್ದು,ಕೆಲಸದ ಪ್ರತಿಯೊಂದು ಕ್ರಮವೇ ಆಚರಣೆಯ ಒಂದು ಭಾಗವೇ ಆಗಿರುತ್ತದೆ.ತುಳುನಾಡಿನ ಹಳೆಯ ವಸ್ತುಗಳೇ ಒಂದೊಂದು ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಯೋಗೀಶ್ ಕೈರೋಡಿಯವರು ನುಡಿದರು. ಅವರು ದಿನಾಂಕ 07 ಆಗಸ್ಟ್ 2022 ರ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ಯುವವಾಹಿನಿ(ರಿ.) ಮಾಣಿ ಘಟಕ ಹಮ್ಮಿಕೊಂಡ “ಆಟಿದ ತಿರ್ಲ್” ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು . ಕಾರ್ಯಕ್ರಮವನ್ನು ನೆಲ ಶುಧ್ಧಿಕರಿಸಿ,ಸುತ್ತಿಗೆ ಇಟ್ಟು ,ದೀಪ ಬೆಳಗಿಸುವುದರ ಮೂಲಕ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ.) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ ರವರು ಉದ್ಘಾಟಿಸಿ ಮಾತನಾಡಿದ ಅವರು ಹಿಂದೆ ಆಟಿ ತಿಂಗಳಿನಲ್ಲಿ ಬಹಳ ಕಷ್ಟ ಪಡುತ್ತಿದ್ದರು,ಊರಿನ ಅನಿಷ್ಟಗಳು ದೂರ ಮಾಡಲು ಆಟಿ ಕೆಳೆಂಜವು ಮನೆ ಮನೆಗೆ ಬರುತ್ತಿದ್ದವು,ಆದರೆ ಈಗಿನ ಕಾಲದಲ್ಲಿ ಈ ಸಂಪ್ರದಾಯ ಮರೆಯಾಗುತ್ತಿದೆ,ಹಾಗಾಗಿ ನಮ್ಮ ಸಂಸ್ಕೃತಿಯನ್ನು ಉಳಿಸಬೇಕು ಎಂದರು.ತದನಂತರ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ರಾಜೇಶ್ ಬಿ.ಸಿ ರೋಡ್ ರವರು ಆಟಿ ತಿಂಗಳಿನಲ್ಲಿ ಮಾಡುತ್ತಿದ್ದ ತಿನಿಸುಗಳನ್ನು ನೆನೆಪಿಸುತ್ತ, ಆಗಿನ ಕಾಲದಲ್ಲಿ ಮನೆಯಲ್ಲೇ ಮಾಡುತ್ತಿದ್ದ ತಿನಿಸುಗಳನ್ನು ಇಂದು ಕಾರ್ಯಕ್ರಮಗಳನ್ನು ಮಾಡಿ ಎಲ್ಲ ತಿನಿಸುಗಳನ್ನು ತಂದು ತಿನ್ನುತ್ತಿದ್ದೇವೆ. ಕೇವಲ ಕಾರ್ಯಕ್ರಮಕ್ಕೆ ಇದನ್ನು ಮೀಸಲಾಗಿರಿಸದೆ, ಮನೆಯಲ್ಲಿಯೂ ತಯಾರಿಸಿ,ಅದು ಮಕ್ಕಳಿಗೂ ತಿಳಿಯುವಂತಾಗಬೇಕು ಎಂದರು. ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು ರವರು ಘಟಕವು ಪ್ರತಿ ವರ್ಷ ಆಟಿ ತಿಂಗಳಿನ ವಿಶೇಷತೆಗಳನ್ನು ಬಿಂಬಿಸುವ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ,ಈಗಿನ ಜನಾಂಗಕ್ಕೆ ಆಟಿ ತಿಂಗಳಿನ ಬಗ್ಗೆ ತಿಳಿಯಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆಯ ವಹಿಸಿಕೊಂಡು ಮಾತನಾಡಿದರು. ವೇದಿಕೆಯಲ್ಲಿ ಘಟಕದ ಗೌರವ ಸಲಹೆಗಾರರಾದ ಯಶೋಧರ ಮಾಣಿ,ಕಾರ್ಯಕ್ರಮದ ಸಂಚಾಲಕರಾದ ಸತೀಶ್ ಕೊಪ್ಪರಿಗೆ, ಸಹ ಸಂಚಾಲಕರಾದ ಪವಿತ್ರ ಪ್ರವೀಣ್ ರವರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಆಟಿ ತಿಂಗಳಿನ ತಿನಿಸುಗಳು ವಿಶೇಷ ಆರ್ಕಷಣೆಯಾಗಿತ್ತು ಮತ್ತು ಘಟಕದ ಸದಸ್ಯರು ತಿನಿಸುಗಳನ್ನು ತಮ್ಮ ಮನೆಯಲ್ಲೇ ತಯಾರಿಸಿ ಕಾರ್ಯಕ್ರಮಕ್ಕೆ ತಂದ ಎಲ್ಲ ಸದಸ್ಯರಿಗೆ ಘಟಕದ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ,ಯುವವಾಹಿನಿ(ರಿ.) ಸುಳ್ಯ ಘಟಕದ ಮಾಜಿ ಅಧ್ಯಕ್ಷರಾದ ಪ್ರವೀಣ್ ನೆಟ್ಟಾರು ರವರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನ ಪ್ರಾರ್ಥನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಸದಸ್ಯೆಯಾದ ಜಯಶ್ರೀ ಪ್ರಾರ್ಥಿಸಿದರು,ಕಾರ್ಯದರ್ಶಿ ರೇಣುಕ ಕಣಿಯೂರು ರವರು ಸ್ವಾಗತಿಸಿ,ಕಾರ್ಯಕ್ರಮದ ಸಂಚಾಲಕರಾದ ಸತೀಶ್ ಕೊಪ್ಪರಿಗೆ ವಂದಿಸಿದರು.
ಘಟಕದ ಸದಸ್ಯರ ಮಕ್ಕಳಾದ ಪ್ರಗತಿ ಮತ್ತು ಭವಿಷ್ಯ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!