Yuvavahini

AUG 29, 2022 3.32 PM IST

ಯುವವಾಹಿನಿ (ರಿ.) ಮಂಗಳೂರು ಘಟಕ

ಡಿ ದೇವರಾಜ್ ಅರಸು ಜನ್ಮದಿನಾಚರಣೆ

ಮಂಗಳೂರು :- ರಾಜ್ಯ ಕಂಡ ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರಾದ ಹಿಂದುಳಿದ ವರ್ಗಗಳ ಸಮಾಜ ಸುಧಾರಕ ಡಿ. ದೇವರಾಜ್ ಅರಸುರವರ 107ನೇ ಜನ್ಮದಿನಾಚರಣೆಯನ್ನು ದಿನಾಂಕ 29 ಆಗಸ್ಟ್ 2022 ರ ಮಂಗಳವಾರ ಯುವವಾಹಿನಿ ಸಭಾಂಗಣದಲ್ಲಿ ಘಟಕದ ವತಿಯಿಂದ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಬಂದಂತಹ ಅತಿಥಿಗಳನ್ನು, ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು ಹಾಗೂ ಸದಸ್ಯರನ್ನು ಸಭೆಗೆ ಆದರ ಪೂರ್ವಕವಾಗಿ ಸ್ವಾಗತಿಸಿದರು. ಗತ ಸಭೆಯ ವರದಿಯನ್ನು ಜೊತೆ ಕಾರ್ಯದರ್ಶಿಯವರಾದ ನಾರಾಯಣ ಕರ್ಕೆರರವರು ವಾಚಿಸಿ ಅನುಮೋದನೆ ಪಡಕೊಂಡರು. ಗುರು ಪೂಜೆಯನ್ನು ಘಟಕದ ಮಾಜಿ ಅಧ್ಯಕ್ಷರಾದ ಶ್ರೀಯುತ ಶ್ರೀಧರಪೂಜಾರಿ ಯವರು ನಡೆಸಿಕೊಟ್ಟರು. ವಿಶೇಷ ಅತಿಥಿಯಾದ ನವನೀತ್ ಡಿ. ಹಿಂಗಾಣಿ ಹೈಕೋರ್ಟ್ ವಕೀಲರು ಬೆಂಗಳೂರುರವರ ಪರಿಚಯವನ್ನು ಮಾಜಿ ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿಯವರು ಸಭೆಗೆ ತಿಳಿಸಿದರು ಹಾಗೂ ಅವರನ್ನು ಘಟಕದ ಹಿರಿಯರಾದ ಪರಮೇಶ್ವರ್ ಪೂಜಾರಿಯವರು ಹೂ ನೀಡಿ ಸ್ವಾಗತಿಸಿದರು. ನವನೀತ್ ಹಿಂಗಾಣಿವರು ಮಾತನಾಡುತ್ತಾ, 1972 ರಿಂದ 1980ರವರೆಗೆ ಕರ್ನಾಟಕ ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿ ಯಾಗಿ ಹಿಂದುಳಿದ ವರ್ಗಗಳ ಸುಧಾರಕರಾಗಿ, ಭೂಸುಧಾರಣೆ, ಉಳುವನೇ ಹೊಲದೊಡೆಯ, ಮಿಶಾಲಾತಿ, ಸಂಘಟನೆ, ಮುಂತಾದ ಸಮಾಜ ಸುಧಾರಣೆಗಳನ್ನು ಮಾಡಿದರೆಂದರು. ಘಟಕದ ಅಧ್ಯಕ್ಷರು, ಮಾಜಿಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿ ನವನೀತ್ ಹಿಂಗಾಣಿಯವರನ್ನು, ಶಾಲು ಹೊದಿಸಿ, ಸ್ಮರಣಿಕೆ ಹೂ ನೀಡಿ ಗೌರವಿಸಲಾಯಿತು. ನಾಗೇಶ್ ಅಮೀನ್ ರವರು ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಕೊನೆಯಲ್ಲಿ ಉಪಾಧ್ಯಕ್ಷರಾದ ಗಣೇಶ್ ಸುವರ್ಣ ನವರು ಲೋಕ ಮಂತ್ರ ಪಠಿಸುವುದರೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು. ಎಲ್ಲರಿಗೂ ಶ್ರೀಧರ ಪೂಜಾರಿಯವರು ಒದಗಿಸಿ ಕೊಟ್ಟ ಲಘುಉಪಾಹಾರ ನೀಡಿ ಸತ್ಕರಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!