Yuvavahini

SEP 18, 2022 2.20 PM IST

ಯುವವಾಹಿನಿ (ರಿ.) ಪಡುಬಿದ್ರಿ ಘಟಕ

ಪದಪ್ರಧಾನ ಸಮಾರಂಭ -2022

ಪಡುಬಿದ್ರಿ : ಯುವವಾಹಿನಿ ಸಂಸ್ಥೆ ಹಲವಾರು ಸಮಾಜಮುಖಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತಾ ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿರುವುದು ಸಂತಸವಾಗಿದೆ. ಪಡುಬಿದ್ರಿ ಘಟಕದ ಮುಂದಿನ ಕಾರ್ಯಕ್ರಮಗಳು ಶುಭವಾಗಲಿ ಎಂದು ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷರಾದ ಶೀನ ಪೂಜಾರಿ ಹೇಳಿದರು. ಅವರು ದಿನಾಂಕ 18 ಸೆಪ್ಟೆಂಬರ್ 2022 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2022-23 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಮಾತನಾಡಿ, ಸಂಸ್ಥೆಯ ಪದವಿಯ ಕಾರ್ಯಾವಧಿ ಕೊನೆಯಾದಾಗ ಪದಾಧಿಕಾರಿಗಳು ಸಂತಸದಿಂದಿರದೆ ಹೊಸ ತಂಡಕ್ಕೆ ಬೆನ್ನೆಲುಬಾಗಿ ಮುಂದೆಯೂ ಸಹಕಾರ ನೀಡಿ ಹೊಸ ಕಾರ್ಯಯೋಜನೆ ನಿರ್ವಹಿಸಬೇಕು. ಹಳೆ ಬೇರು ಹೊಸ ಚಿಗುರು ಎಂಬ ಮಾತಿನಂತೆ ಪಡುಬಿದ್ರಿ ಯುವವಾಹಿನಿ ಘಟಕ ಕ್ರಿಯಾಶೀಲ ಘಟಕವಾಗಿದೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವುದರೊಂದಿಗೆ ಯುವವಾಹಿನಿಯ ಘಟಕಗಳಲ್ಲಿ ಪ್ರತಿಷ್ಠಿತವಾಗಿದೆ ಎಂದರು. ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ, ಮಾತನಾಡಿ ಯುವವಾಹಿನಿ ಶಿಸ್ತುಬದ್ಧ ವ್ಯವಸ್ಥೆ ಸಮಯ ಪರಿಪಾಲನೆ ಸಂಸ್ಥೆಯ ಗರಿಮೆಯಾಗಿದೆ. ಸಮಾಜ ಚಿಂತನೆ ನಮ್ಮಲ್ಲಿರಲಿ, ಯುವವಾಹಿನಿಯ ನಿಯಮದಂತೆ ಒಂದು ವರ್ಷದ ಅಧಿಕಾರಾವಧಿಯಲ್ಲಿ ಸಾಧ್ಯವಾದಷ್ಟು ಕಾರ್ಯಕ್ರಮಗಳು ಜರಗಲಿ ಎಂದು ಶುಭ ಹಾರೈಸಿದರು. ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಶೈಕ್ಷಣಿಕ ಆರ್ಥಿಕ ಸಹಾಯ, ಕಲಿಕಾ ಪರಿಕರ ವಿತರಿಸಲಾಯಿತು. ಘಟಕಕ್ಕೆ ಸೇರ್ಪಡೆಗೊಂಡ ನೂತನ ಸದಸ್ಯರನ್ನು ಗೌರವಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಮತ್ತು ಘಟಕದ ಅಧ್ಯಕ್ಷರಾದ ಯಶೋದರನ್ನು ಸನ್ಮಾನಿಸಲಾಯಿತು.
ಅಧಿಕಾರ ಹಸ್ತಾಂತರ : ಘಟಕದ ಅಧ್ಯಕ್ಷರಾದ ಯಶೋದ ನಿಯೋಜಿತ ಅಧ್ಯಕ್ಷರಾದ ಶಾಶ್ವತ್ ರವರಿಗೆ ಮತ್ತು ಘಟಕದ ಕಾರ್ಯದರ್ಶಿ ವಿಧಿತ್ ನಿಯೋಜಿತ ಕಾರ್ಯದರ್ಶಿ ಡಾ | ಐಶ್ವರ್ಯ ಸಿ ಅಂಚನ್ ರವರಿಗೆ ಅಧಿಕಾರ ಹಸ್ತಾಂತರಿಸಿದರು. ಸಾಹಿತ್ಯ ಸೌರಭದ ಅಂಗವಾಗಿ ನಡೆದ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಚಿತ್ರಾಕ್ಷಿ ಕೆ ಕೋಟ್ಯಾನ್, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಪಡುಬಿದ್ರಿ ಅಧ್ಯಕ್ಷರಾದ ಯಶೋದ ವಹಿಸಿ, ಸ್ವಾಗತಿಸಿದರು. ಮಾಜಿ ಅಧ್ಯಕ್ಷರಾದ ಸುಜಿತ್ ಕುಮಾರ್ ಪ್ರಸ್ತಾವನೆಗೈದರು. ಕಾರ್ಯದರ್ಶಿ ವಿಧಿತ್ ಕುಮಾರ್ ವರದಿ ವಾಚಿಸಿದರು. ಚಿತ್ರಾಕ್ಷಿ ಕೆ ಕೋಟ್ಯಾನ್ ನೂತನ ಪದಾಧಿಕಾರಿಗಳ ಪಟ್ಟಿ ವಾಚಿಸಿದರು. ಪ್ರಸಾದ್ ವೈ ಕೋಟ್ಯಾನ್ ಮತ್ತು ತೃಪ್ತಿ ಕಾರ್ಯಕ್ರಮ ನಿರೂಪಿಸಿದರು. ಡಾ | ಐಶ್ವರ್ಯ ಸಿ ಅಂಚನ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!