Yuvavahini

SEP 10, 2022 2.36 PM IST

ಯುವವಾಹಿನಿ (ರಿ.) ಕೊಲ್ಯ ಘಟಕ

ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 168ನೇ ಜನ್ಮ ದಿನಾಚರಣೆ

ಕೊಲ್ಯ :- ಅಭಯ ಆಶ್ರಯ ಅಸೈಗೋಳಿ ಇದರ ಓಂ ಧ್ಯಾನ ದೇಗುಲದ ದಿವ್ಯ ಸಾನಿಧ್ಯದಲ್ಲಿ ಸಾಕಾರಗೊಂಡ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 168 ನೆಯ ಜನ್ಮ ದಿನಾಚರಣೆಯು ವಿಶ್ವ ಬಿಲ್ಲವರ ಸೇವಾ ಚಾವಡಿ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ತಾರೀಕು 10 ಸೆಪ್ಟೆಂಬರ್ 2022ನೇ ಶನಿವಾರ ಸಂಜೆ ಅಸೈಗೊಳಿ ಅಭಯಾಶ್ರಯದ ಪ್ರಶಾಂತವಾದ ತಾಣದಲ್ಲಿ ಇತ್ತೀಚೆಗೆ ನೂತನವಾಗಿ ಲೋಕಾರ್ಪಣೆಗೊಂಡ ಓಂ ಧ್ಯಾನ ದೇಗುಲದ ದಿವ್ಯ ಸಾನಿಧ್ಯದಲ್ಲಿ ಆಶ್ರಮದ ಹಿರಿಯ ಸದಸ್ಯರ ಸಮಕ್ಷಮದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 168 ನೆಯ ಜನ್ಮ ದಿನವನ್ನು ಭಕ್ತಿಯಿಂದ ಆಚರಿಸಲಾಯಿತು. ಆಶ್ರಮದ ಅಧ್ಯಕ್ಷರಾದ ಶ್ರೀನಾಥ್ ಹೆಗ್ಡೆ ಉಪಾಧ್ಯಕ್ಷರಾದ ಉದಯ ಶಂಕರ ಶೆಟ್ಟಿ ಹಾಗೂ ಆಶ್ರಮದ ಹಿರಿಯ ನಿವಾಸಿ ಗೋಪಾಲ ಶೆಟ್ಟಿ , ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷರಾದ ಸುಂದರ ಸುವರ್ಣ, ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರವಿ ಕೊಂಡಾಣ, ಕೊಲ್ಯ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಮೋಹನ್ ಮಾಡೂರು, ಕೊಲ್ಯ ಘಟಕದ ಕಾರ್ಯದರ್ಶಿ ನಿತಿನ್ ಕರ್ಕೇರ, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಕು. ಭಾರತಿ ಸನಿಲ್ ಉಳ್ಳಾಲ, ವಿಶ್ವ ಬಿಲ್ಲವರ ಸೇವಾ ಚಾವಡಿ (ರಿ.) ಇದರ ಪ್ರಮುಖರಾದ ಅಜಿತ್ ಪೂಜಾರಿ ಪಜೀರು, ಸಂಗೀತ ಕಲಾವಿದೆ ಲಾವಣ್ಯ ಸುಧಾಕರ್, ಹಿರಿಯರಾದ ನಾರಾಯಣ ಪೂಜಾರಿ ಚಿಪ್ಲುಕೋಟೆ, ಕೊಲ್ಯ ಬಿಲ್ಲವ ಸಂಘದ ಹಿರಿಯ ಸದಸ್ಯರಾದ ಮುತ್ತಪ್ಪ ಪೂಜಾರಿ, ಯೋಗ ಗುರುಗಳಾದ ಬಾಳಪ್ಪ ಪೂಜಾರಿ, ಬಿಲ್ಲವ ಅಸೋಸಿಯೇಶನ್ ಬೆಂಗಳೂರು ಇದರ ಸ್ಥಾಪಕ ಸದಸ್ಯರಾದ ವೆಂಕಟೇಶ ಬಂಗೇರ, ರೋಟರಿ ಸಮುದಾಯ ದಳ ಕೊಲ್ಯ ಇದರ ಮಾಜಿ ಅಧ್ಯಕ್ಷರಾದ ಹರೀಶ್ ಶೆಟ್ಟಿ ನೀಲಿಪಾಲು ಇವರು ನಾರಾಯಣ ಗುರುವರ್ಯರ ಭಾವ ಚಿತ್ರಕ್ಕೆ ಸಾಮೂಹಿಕವಾಗಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗಾಯಕಿ ಲಾವಣ್ಯ ಸುಧಾಕರ್ ಮತ್ತು ತಂಡದವರು ಗುರುಶ್ಲೋಕ, ಗುರುಪ್ರಾರ್ಥನೆ, ಗುರು ಜ್ಞಾನ ಸಂಗೀತವನ್ನು ನೆರವೇರಿಸಿಕೊಟ್ಟರು. ಶಾಸ್ತ್ರೀಯ ಸ್ವರ ತರಂಗ , ಸಂಗೀತದ ನಾದ ಮಿನದನದೊಂದಿಗೆ ಓಂ ಧ್ಯಾನದೇಗುಲದೊಳಗಿನ ದೈವೀ ಶಕ್ತಿ ಯ ಕಂಪನದ ಅನುಭೂತಿಯಲೆಯಲ್ಲಿ ಪಾಲ್ಗೊಂಡ ಸರ್ವರೂ, ಶಾಂತ ಚಿತ್ತ ಮಗ್ನರಾಗಿ ಆಲಿಸಿದ ಗುರು ಭಕ್ತಿ ಸಂಗೀತವು ಗುರುಗಳ ಪಾದಕ್ಕರ್ಪಿತವಾಯಿತು. ಓಂ ಧ್ಯಾನ ದೇಗುಲವು ಬ್ರಹ್ಮ ಶ್ರೀ ನಾರಾಯಣ ಗುರುವರ್ಯ ಆಲಯದಂತಾಯಿತು. ಕಾರ್ಯಕ್ರಮದಲ್ಲಿ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಕು.ಭಾರತಿ ಸನಿಲ್ ಉಳ್ಳಾಲ ಇವರು ಗುರು ಸಂದೇಶ ಸಾರಿದರು. ಅಭಯಾಶ್ರಯ ಸಂಸ್ಥೆಯ ಅಧ್ಯಕ್ಷರಾದ ಶ್ರೀನಾಥ್ ಹೆಗ್ಡೆ ಇವರು ನಾರಾಯಣ ಗುರುವರ್ಯರ ತತ್ವ ಸಂದೇಶಗಳ ಪಾವಿತ್ರ್ಯತೆಯನ್ನು ಮನನ ಮಾಡಿದರು. ಮಂಗಳ ಭಜನೆಯೊಂದಿಗೆ ಗುರುಗಳ ಭಾವಚಿತ್ರಕ್ಕೆ ಕೊಲ್ಯ ಘಟಕದ ಶುಭ್ರ ವಸ್ತ್ರಧಾರಿ ಮಹಿಳಾ ಸದಸ್ಯೆಯರು ಮಹಾ ಮಂಗಳಾರತಿಗೈದರು, ಬಳಿಕ ಸರ್ವರೂ ಗುರುಗಳಿಗೆ ಸಾಮೂಹಿಕ ಮಂಗಳಾರತಿ ನರವೇರಿಸಿ ಭಕ್ತಿಯ ಪುಷ್ಪಾರ್ಚನೆಗೈದು ಗುರುವರ್ಯರ ಅನುಗ್ರಹ ಪಡೆದು, ಗುರು ಪ್ರಸಾದ ಸ್ವೀಕರಿಸಿ ಪುಣೀತರಾದರು. ಘಟಕದ ಮಾಜಿ ಅಧ್ಯಕ್ಷರಾದ ಕುಸುಮಾಕರ ಕುಂಪಲ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿ ಆಗಮಿಸಿದ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಘಟಕದ ಅಧ್ಯಕ್ಷರಾದ ಸುಂದರ ಸುವರ್ಣ ಇವರು, ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸರ್ವರಿಗೂ ಹಾಗೂ ಕಾರ್ಯಕ್ರಮವನ್ನು ಆಯೋಜಿಸಲು ಅವಕಾಶವಿತ್ತ ಅಸೈಗೋಳಿ ಅಭಯಾಶ್ರಯದ ಅಧ್ಯಕ್ಷರು ,ಪದಾಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ಧನ್ಯವಾದಗೈಯ್ಯುವ ಮೂಲಕ ಸುಶ್ರಾವ್ಯ ಗುರು ಭಕ್ತಿ ಸಂಗೀತ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟ ಲಾವಣ್ಯ ಸುಧಾಕರ್ ಮತ್ತು ತಂಡದರವನ್ನು ಗೌರವಿಸಿ ಘಟಕದ ಪರವಾಗಿ ಸ್ಮರಣಿಕೆ ನೀಡಿದರು.ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸರ್ವರಿಗೂ ಅಭಯಾಶ್ರಯದ ಆಡಳಿತ ಮಂಡಳಿಯು ಉಪಾಹಾರದ ವ್ಯವಸ್ಥೆಯನ್ನು ಮಾಡುವುದರ ಮೂಲಕ ಅತಿಥಿ ಸತ್ಕಾರವನ್ನು ನೆರವೇರಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!