Yuvavahini

SEP 18, 2022 2.43 PM IST

ಯುವವಾಹಿನಿ (ರಿ.) ಉಡುಪಿ ಘಟಕ

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯದ ಮುಂದಾಗಬೇಕು :- ಮಂಜುನಾಥ್

ಉಡುಪಿ :- ಸಾಮಾಜಿಕ ಕಾಳಜಿಯೊಂದಿಗೆ ಸಮಾಜದ ದುರ್ಬಲರಿಗೆ ನೆರವು ಚಾಚುವ ಯುವವಾಹಿನಿಯ ಸಮಾಜಮುಖಿ ಚಿಂತನೆಯು ನನಗೆ ಇಷ್ಟವಾಗಿದ್ದು ತಮ್ಮ ಬಿಡುವಿನ ಸಮಯದಲ್ಲಿ ನಾನು ಕೂಡ ಯುವವಾಹಿನಿಯಲ್ಲಿ ತೊಡಗಿಸಿಕೊಳ್ಳುವ ಭರವಸೆಯ ಬಗ್ಗೆ ಮಾತನಾಡುತ್ತಾ, ನಮ್ಮ ಮನೆಯ ಮಕ್ಕಳನ್ನು ಇತಿಮಿತಿಯಲ್ಲಿ ಬೆಳೆಸಬೇಕು, ಮಾದಕ ವ್ಯಸನದಿಂದ ದೂರವಿರಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯ ಕೈ ಜೋಡಿಸಬೇಕು ಎಂದು ಉಡುಪಿಯ ಸೈಬರ್ ಕ್ರೈಂ ಇನ್ಸ್‌ಪೆಕ್ಟರ್ ಮಂಜುನಾಥ್ ರವರು ನುಡಿದರು. ಅವರು ದಿನಾಂಕ 18 ಸೆಪ್ಟೆಂಬರ್ 2022ರ ಭಾನುವಾರ ಯುವವಾಹಿನಿ ಉಡುಪಿ ಘಟಕದ ಯುವವಾಹಿನಿ ಸಭಾಂಗಣದಲ್ಲಿ ಜರಗಿದ 2022 – 23 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಮಂಜುನಾಥ ಆಯುರ್ವೇದ ಆಸ್ಪತ್ರೆ ಉಡುಪಿ, ಇದರ ವೈದ್ಯಕೀಯ ಅಧೀಕ್ಷಕರಾದ ಡಾ. ನಾಗರಾಜ್. ಎಸ್, ಮಾತನಾಡಿ ಯುವ ಜನತೆಗ ಒಳ್ಳೆಯ ವಿದ್ಯಾಭ್ಯಾಸ ಮಾಡಿ, ಸ್ವತಂತ್ರರಾಗಿ ಉತ್ತಮ ಸಮಾಜ ಕಟ್ಟಲು ಸಲಹೆ ನೀಡಿದರು. ಪದಗ್ರಹಣದ ಸಭಾಧ್ಯಕ್ಷತೆಯನ್ನು ಪ್ರವೀಣ್ ಡಿ ಪೂಜಾರಿಯವರು ವಹಿಸಿ, ಆಗಮಿಸಿದ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿ, ಗತ ವರ್ಷದಲ್ಲಿ ಸಮಾಜಮುಖಿ ಚಿಂತನೆಯ ಕಾರ್ಯಕ್ರಮಗಳನ್ನು ನಡೆಸಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯೊಂದಿಗೆ ಪದ ಪ್ರದಾನ ವನ್ನು ಯಶಸ್ವಿಯಾಗಿ ನಡೆಸಿ, ಕಳೆದ ವರ್ಷದಲ್ಲಿ ಉತ್ತಮ ಕಾರ್ಯಕ್ರಮ ನೀಡಿದ ಪ್ರವೀಣ್ ಡಿ ಪೂಜಾರಿ ನೇತೃತ್ವದ ತಂಡಕ್ಕೆ ಅಭಿನಂದನೆ ಸಲ್ಲಿಸಿ , ನೂತನ ಅಧ್ಯಕ್ಷರಾದ ಮಹಾಬಲ ಅಮೀನ್ ಇವರ ತಂಡಕ್ಕೆ ಶುಭ ಕೋರಿದರು. ಮಾಜಿ ಅಧ್ಯಕ್ಷರಾದ ರಘುನಾಥ್ ಮಾಬಿಯನ್ ರವರು ಪ್ರಾಸ್ತಾವಿಕ ಮಾತನಾಡಿ ಉಡುಪಿ ಘಟಕ ನಡೆದು ಬಂದ ಹಾದಿಯ ವಿವರಗಳನ್ನು ನೀಡಿದರು.
ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯವರಾದ ದೀಪಕ್ ಕುಮಾರ್ ಎರ್ಮಾಳ್ ನೂತನ ತಂಡಕ್ಕೆ ಶುಭಾಶಯ ಕೋರಿದರು. ವಿವಿಧ ಘಟಕದಿಂದ ಸದಸ್ಯರು ಪಾಲ್ಗೊಂಡು, ಕಾರ್ಕಳ ಘಟಕ ಪರವಾಗಿ ಅಧ್ಯಕ್ಷರಾದ ತಾರಾನಾಥ್ ಕೋಟ್ಯಾನ್ ಶುಭ ಕೋರಿದರು. ನಿರ್ಗಮಿತ ಅಧ್ಯಕ್ಷರಾದ ಪ್ರವೀಣ್ ಡಿ ಪೂಜಾರಿ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ನೂತನ ಅಧ್ಯಕ್ಷರಾದ ಮಹಾಬಲ ಅಮೀನ್ ರವರು ಮಾತನಾಡಿ ಎಲ್ಲ ಮಾಜಿ ಅಧ್ಯಕ್ಷರುಗಳ ಹಾಗೂ ಸದಸ್ಯರ ಸಹಕಾರ ಬಯಸಿದರು. ದಯಾನಂದ ಕರ್ಕೇರರವರು ಕಾರ್ಯದರ್ಶಿಯ ನೆಲೆಯಲ್ಲಿ ಗತ ವರ್ಷದ ವರದಿಯನ್ನು ಮಂಡಿಸಿದರು. ಸಭಾಧ್ಯಕ್ಷರಾದ ಪ್ರವೀಣ್. ಡಿ. ಪೂಜಾರಿಯವರು ಬಂದಂತಹ ಅತಿಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ನೂತನ ಕಾರ್ಯದರ್ಶಿ ವಿನೋದ್ ಮಂಚಿ ವಂದನಾರ್ಪಣೆಗೈದರು. ಶ್ರೀಲಕ್ಷ್ಮೀ ಹಾಗೂ ಸಾರಿಕಾರವರು ಕಾರ್ಯಕ್ರಮ ನಿರೂಪಿಸಿದರು.
ಘಟಕದ ಸಲಹೆಗಾರರಾದ ಶಂಕರ್ ಪೂಜಾರಿ ದ್ವಾರಕಾ, ಸಂಗಮ್ ಹೋಟೆಲ್‌ನ ಮಾಲೀಕರಾದ ಸುರೇಂದ್ರ ಕೋಟ್ಯಾನ್, ಪಡುಬಿದ್ರಿ ಘಟಕದ ಸದಸ್ಯರು, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್, ಸ್ಥಾಪಕ ಅಧ್ಯಕ್ಷರಾದ ಚಂದ್ರಶೇಖರ್ ಉದ್ಯಾವರ, ಮಾಜಿ ಅಧ್ಯಕ್ಷರು, ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಸಹ ಭೋಜನದ ಮುಖಾಂತರ ಕಾರ್ಯಕ್ರಮ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!