Yuvavahini

SEP 08, 2022 9.21 AM IST

ಯುವವಾಹಿನಿ (ರಿ.) ಮಂಗಳೂರು ಘಟಕ

ಕೇದಾರನಾಥದಲ್ಲಿ ರಾರಾಜಿಸಿದ ಯುವವಾಹಿನಿ ಮತ್ತು ತುಳುನಾಡ ಬಾವುಟ

ಮಂಗಳೂರು:- ಯುವವಾಹಿನಿ ಮಂಗಳೂರು ಘಟಕದ ವತಿಯಿಂದ ಸುಮಾರು 26 ಜನ ಯಾತ್ರಾರ್ಥಿಗಳು, 2 ಜನ ಟೂರ್ ಮ್ಯಾನೇಜರ್, 3 ಜನ ಬಾಣಸಿಗರನ್ನು ಒಳಗೊಂಡ 31 ಜನರ ತಂಡವು ಸಪ್ಟೆಂಬರ್ 8ರಿಂದ ಸೆಪ್ಟೆಂಬರ್ 19ರವರೆಗೆ 11 ದಿವಸಗಳ ಚಾರುಧಾಮ ಕೇದರನಾಥ ಯಾತ್ರೆ ಮಂಗಳೂರಿನಿಂದ ಹೊರಟಿತು. ದೆಹಲಿ, ಹರಿದ್ವಾರ, ಗಂಗಾ ಆರತಿ, ಯಮುನೋತ್ರಿ, ಉತ್ತರ ಕಾಶಿ ವಿಶ್ವನಾಥ ಮಂದಿರ, ಗಂಗಾ ನದಿ, ಸೀತಾಪುರ, ಕೇದಾರನಾಥ ದೇವಾಲಯ, ಬದರಿನಾಥ ದೇವಾಲಯ, ಭೀಮನ ಸೇತುವೆ, ಗಣೇಶ ಗುಹೆ, ವ್ಯಾಸ ಗುಹೆ, ಪಿಪಿಎಲ್ ಕೋಟು, ಋಷಿಕೇಶ, ಮುಂತಾದ ಪುಣ್ಯ ಕ್ಷೇತ್ರಗಳ ದರ್ಶನ ಮಾಡಿಕೊಂಡು ಸೆಪ್ಟೆಂಬರ್ 19ರಂದು ವಾಪಸ್ ಮಂಗಳೂರು ತಲುಪಿತು. ಸೆಪ್ಟೆಂಬರ್ 15ರಂದು ಕಾಲ್ನಡಿಗೆಯಲ್ಲಿ ಕೇದಾರನಾಥ ಕ್ಷೇತ್ರಕ್ಕೆ ಹೊರಟ ಯಾತ್ರಿ ತಂಡವು ವಿಶ್ವದ ಎತ್ತರದ ಸ್ಥಳವಾದ ಕೇದಾರನಾಥ ಕ್ಷೇತ್ರದಲ್ಲಿ ಯುವವಾಹಿನಿಯ ಹಾಗೂ ಪರಶುರಾಮ ಸೃಷ್ಟಿ ತುಳುನಾಡಿನ ಧ್ವಜವನ್ನು ಬಾನೆತ್ತರಕ್ಕೆ ಹಾರಿಸಿ, ಹೊಸ ಇತಿಹಾಸ ಬರೆಯಿತು. ಘಟಕದ ಪ್ರವಾಸ ಸಂಚಾಲಕರಾದ ಪ್ರವೀಣ್ ಸಾಲ್ಯಾನ್ ಕೀರೋಡಿ ಮತ್ತು ಲೋಹಿತ್ ಕಲ್ಪನೆ ಯವರ ಮುಂದಾಳುತ್ವದಲ್ಲಿ 31 ಜನರ ಯಾತ್ರಿ ತಂಡವು ಶಿಸ್ತು ಬದ್ಧವಾಗಿ, ಅತ್ಯಂತ ಯಶಸ್ವಿಯಾಗಿ ಪ್ರವಾಸವನ್ನು ಮುಗಿಸಿದ್ದು, ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ಮತ್ತು ಸದಸ್ಯರು ಯಾತ್ರಾರ್ಥಿಗಳನ್ನು ಅಭಿನಂದಿಸಿದರು. ಬೊಳ್ಳಿ ಟೂರಿಸಂನ ಮಾಲಕರಾದ ಅರುಣ್ ಮತ್ತು ಅವರ ಸಿಬ್ಬಂದಿ ವರ್ಗದವರು ಸಂಪೂರ್ಣ ಸಹಕಾರವನ್ನು ನೀಡಿದರು. ಪ್ರಸಿದ್ಧ ವಾಸ್ತುತಜ್ಞರಾದ ರಾಜ್ ಕುಮಾರ್, ಕೇಂದ್ರ ಸಮಿತಿ ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಯಶವಂತ್ ಪೂಜಾರಿ, ಎಸ್ ಪಿವೈಎಸ್ಎಸ್ ನ ಯೋಗಗುರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ, ರಾಜೇಶ್ ಅಮೀನ್, ಯೋಗೀಶ್ ಕುಮಾರ್, ಸದಾನಂದ ಕುಳಾಯಿ ದಂಪತಿಗಳು, ಗೋಪಾಲ ಪೂಜಾರಿ ರೇಖಾ ದಂಪತಿಗಳು, ಮತ್ತಿತರ ಬಂಧುಗಳು ಈ ಚಾರುಧಾಮ ಯಾತ್ರೆಯಲ್ಲಿ ಬಾಗವಹಿಸಿದ್ದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!