Yuvavahini

SEP 20, 2022 2.01 PM IST

ಯುವವಾಹಿನಿ (ರಿ.) ಮಂಗಳೂರು ಘಟಕ

ಅಭಿಯಂತರರ (ಇಂಜಿನಿಯರ್) ದಿನ ಆಚರಣೆ

ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ದಿನಾಂಕ 20 ಸೆಪ್ಟೆಂಬರ್ 2022ರಂದು (ಅಭಿಯಂತರರ)ಇಂಜಿನಿಯರ್ ದಿನವನ್ನು ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಸಭೆಗೆ ಮೊದಲು ಭಜನೆಯೊಂದಿಗೆ ಗುರುಪೂಜೆ ಮಾಡಿ ಎಲ್ಲಾ ಸದಸ್ಯರಿಗೆ ಪ್ರಸಾದ ನೀಡಲಾಯಿತು. ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಬಂದಂತಹ ಎಲ್ಲಾ ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು, ಸದಸ್ಯರನ್ನು ಹಾಗೂ ಚಾರುಧಾಮ ಯಾತ್ರೆಯ ಯಾತ್ರಾರ್ಥಿಗಳನ್ನು ಆತ್ಮೀಯವಾಗಿ ಸಭೆಗೆ ಸ್ವಾಗತಿಸಿದರು. ಸಭೆಯಲ್ಲಿ ವಿಶ್ವ ವಿಖ್ಯಾತ ಮಂಗಳೂರು ದಸರಾ ಮಹೋತ್ಸವದಲ್ಲಿ ಘಟಕವು ಹಮ್ಮಿಕೊಂಡಿದ್ದ, ಕೌಂಟರ್ ಸೇವೆ, ಉಚಿತ ಶರಬತ್ತು ಸೇವೆ ಹಾಗೂ ಶಿವಗಿರಿ ತೀರ್ಥಾಟನಾ ಅರಿವಿನ ನಡಿಗೆ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆದು, ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಎಲ್ಲರು ಸಹಕರಿಸುವಂತೆ ಅಧ್ಯಕ್ಷರು ತಿಳಿಸಿದರು.
ಚಾರುಧಾಮ ಯಾತ್ರಾರ್ಥಿಗಳು ತಮ್ಮ ಅನಿಸಿಕೆ, ಅನುಭವಗಳನ್ನು ಸಭೆಯಲ್ಲಿ ಹಂಚಿಕೊಂಡರು. ಯಾತ್ರೆಗೆ ಸಹಕರಿಸಿದ ಪ್ರಸಿದ್ಧ ವಾಸ್ತುಶಾಸ್ತ್ರಜ್ಞ ರಾಜಕುಮಾರ್ ಹಾಗೂ ಬೊಳ್ಳಿ ಟೂರಿಸಂನ ಮಾಲಕರಾದ ಅರುಣ್ ರವರನ್ನು ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಎಲ್ಲಾ ಯಾತ್ರಾರ್ಥಿಗಳಿಗೆ ಹೂ ನೀಡಿ ಗೌರವಿಸಲಾಯಿತು. (ಅಭಿಯಂತರರ) ಇಂಜಿನಿಯರ್ ದಿನದ ಪ್ರಯುಕ್ತ ಚಾರುಧಾಮ ಯಾತ್ರೆಯಲ್ಲಿ ಬಾಗವಹಿಸಿದ್ದ ಅಭಿಯಂತರಾದ ರಾಜೀವ್ ಅಮೀನ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ರಾಜೀವ್ ರವರು ಇಂಜಿನಿಯರ್ ದಿನದ ಆಚರಣೆಯ ಬಗ್ಗೆ ಸಭೆಯಲ್ಲಿ ಮಾತನಾಡಿ ಸಂತೋಷ ವ್ಯಕ್ತಪಡಿಸಿದರು. ಘಟಕದಲ್ಲಿರುವ ಅಭಿಯಂತರುಗಳಾದ ಗಳಾದ ಗಣೇಶ್ ವಿ. ಕೋಡಿಕಲ್, ಅಶೋಕ್ ಕುಮಾರ್, ಸಾಧು ಪೂಜಾರಿ, ಪ್ರಕಾಶ್ ಕುಮಾರ್, ಶ್ರವಣ್ ಕೂಳೂರು, ತಿಲಕ್ ರಾಜ್ ಸುವರ್ಣ ರವರನ್ನು ಗೌರವಿಸಲಾಯಿತು. ಘಟಕದ ಪ್ರಚಾರ ನೀರ್ದೆಶಕರಾಗಿದ್ದು, ಇಂಜಿನಿಯರಿಂಗ್ ವಿದ್ಯಾಭ್ಯಾಸದೊಂದಿಗೆ ಮನೆಯ ಜವಾಬ್ದಾರಿಯನ್ನು ವಹಿಸಿಕೊಂಡು, ಪಾರ್ಟ್ ಟೈಮಲ್ಲಿ ಕೆಲಸ ಮಾಡಿಕೊಂಡು, ಅದರೊಟ್ಟಿಗೆ ಬಿಡುವಿನ ಸಮಯದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ, ಈಗ ಉದ್ಯೋಗದ ನಿಮಿತ್ತ ಬೆಂಗಳೂರುಗೆ ಹೋಗಲಿರುವ ವಿಖ್ಯಾತ್ ಕೆ. ಎಸ್. ರವರನ್ನು ಶಾಲು ಹೊದಿಸಿ, ಫಲ ಪುಷ್ಪ, ಗುರುಪೂಜೆಯ ಪ್ರಸಾದ ನೀಡಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಘಟಕದ ಶೈಕ್ಷಣಿಕ ದತ್ತು ಸ್ವೀಕಾರ ನಿಧಿಗೆ ಆರ್ಥಿಕ ಸಹಾಯ (ದೇಣಿಗೆ) ನೀಡಿದ ಶೋಭಾ ಮಾಲೆಮಾರ್ ಮತ್ತು ಸತೀಶ್ ಎ. ರವರನ್ನು ಗೌರವಿಸಲಾಯಿತು.
ಕಾರ್ಯದರ್ಶಿ ಅಶೋಕ್ ಅಂಚನ್ ರವರು ಗತ ಸಭೆಯ ವರದಿಯನ್ನು ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡರು. ಪ್ರವಾಸದ ಸಂಚಾಲಕರಾದ ಪ್ರವೀಣ್ ಸಾಲ್ಯಾನ್ ಕಿರೋಡಿಯವರು ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಎಲ್ಲರಿಗೂ ಘಟಕದ ವತಿಯಿಂದ ಸವಿಯಾದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!