Yuvavahini

NOV 06, 2022 2.35 PM IST

ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕ

ಪದಗ್ರಹಣ ಸಮಾರಂಭ 2022

ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2022-23ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ದಿನಾಂಕ 06 ನವೆಂಬರ್ 2022ರಂದು ಉರ್ವಾ ಸ್ಟೋರಿನ ಯುವವಾಹಿನಿ ಸಭಾಂಗಣದಲ್ಲಿ ಜರಗಿತು. ವೇದಿಕೆಯಲ್ಲಿ ಕಾರ್ಯಕ್ರಮ ಉದ್ಘಾಟಕರಾಗಿ ಪ್ರವೀಣ್ ಕುಮಾರ್ ಕೆಡೆಂಜಿ ಆಡಳಿತ ನಿದೇ೯ಶಕರು ಪುರುಷರತ್ನ ಬಯೋ ಪ್ರೊಡ್ಯೂಸರ್ ಕಂಪನಿ, ಕಡಬ ಇವರು ಭಾಗವಹಿಸಿ ಶುಭ ಹಾರೈಸಿದರು. ಹಾಗೂ ಮುಖ್ಯ ಅತಿಥಿಗಳಾದ ಸುಖಲಾಕ್ಷಿ ವೈ .ಸುವರ್ಣ ಪ್ರಧಾನ ಕಾರ್ಯದಶಿ೯ ಅಖಿಲ ಭಾರತ ಬಿಲ್ಲವ ಮಹಿಳಾ ಸಂಘ, ಪುಷ್ಪಾವತಿ ಕೆ.ಎ. ಅಧ್ಯಕ್ಷರು ಪ್ರಗತಿ ಮಹಿಳಾ ಮಂಡಲ ಉವ೯ಸ್ಟೋರ್ ಮಂಗಳೂರು , ರಘುರಾಮ್ ಕದ್ರಿ , ಪ್ರಾಂಶುಪಾಲರು, ಶ್ರೀ ಗೋಕರ್ಣನಾಥೇಶ್ವರ ಪದವಿ ಪೂವ೯ ಕಾಲೇಜು , ಘಟಕದ ಅಧ್ಯಕ್ಷೆ ಸುನಿತಾ ಗೋಪಾಲಕೃಷ್ಣ , ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ರಾಜೇಶ್ ಬಂಟ್ವಾಳ ಉಪಸ್ಥಿತರಿದ್ದು ಶುಭ ಹಾರೈಕೆ ಮಾಡಿದರು. ಘಟಕದ ಕಾರ್ಯದರ್ಶಿ ಚಿತ್ರಶ್ರೀ ಮನೋಜ್ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಘಟಕದ ಸದಸ್ಯರಾದ ರಮಣಿ, ಕಸ್ತೂರಿ, ಚಿತ್ರಾಕ್ಷಿ ಇವರು ಪ್ರಾರ್ಥಿಸಿದರು. ಘಟಕದ ಅಧ್ಯಕ್ಷರಾದ ಸುನಿತಾ ಗೋಪಾಲಕೃಷ್ಣರವರು ವೇದಿಕೆಯಲ್ಲಿದ್ದ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಪ್ರಸ್ತಾವನೆಯನ್ನು ಘಟಕದ ಮಾಜಿ ಅಧ್ಯಕ್ಷರಾದ ಉಮಾಶ್ರೀಕಾಂತ್ ಮಂಡಿಸಿದರು. ಘಟಕದ ಕಾರ್ಯದರ್ಶಿಯವರಾದ ಚಿತ್ರಶ್ರೀ ಮನೋಜ್ ರವರು 2021-22ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಘಟಕದ ವತಿಯಿಂದ ಐದು ಜನ ವಿದ್ಯಾರ್ಥಿಗಳಿಗೆ ವಿದ್ಯಾ ನಿಧಿ ವಿತರಣೆ ಮಾಡಲಾಯಿತು.

ಪ್ರಸ್ತುತ ಸಾಲಿನ ಚುನಾವಣಾಧಿಕಾರಿ , ಘಟಕದ ನಿಕಟ ಪೂವ೯ ಅಧ್ಯಕ್ಷರಾದ ರೇಖಾ ಗೋಪಾಲ ರವರು 2022 – 23 ನೇ ಸಾಲಿನ ನೂತನ ಪದಾಧಿಕಾರಿಗಳ ತಂಡವನ್ನು ವೇದಿಕೆಗೆ ಆಹ್ವಾನಿಸಿದರು. ಕೇಂದ್ರ ಸಮಿತಿಯ ಒಂದನೇ ಉಪಾಧ್ಯಕ್ಷರಾದ ರಾಜೇಶ್ ಬಂಟ್ವಾಳ ರವರು ಪ್ರತಿಜ್ಞಾವಿಧಿ ಬೋಧಿಸಿ, ಮಹಿಳಾ ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದರು. 2022 -23ನೇ ಸಾಲಿನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸರಸ್ವತಿ ಶ್ರೀನಿವಾಸ್ ರವರು ಮಾತನಾಡಿ ತನ್ನನ್ನು ಆಯ್ಕೆ ಮಾಡಿದ ಎಲ್ಲಾ ಪದಾಧಿಕಾರಿಗಳಿಗೆ, ಮಾಜಿ ಅಧ್ಯಕ್ಷರುಗಳಿಗೆ ಹಾಗೂ ಸದಸ್ಯರುಗಳಿಗೆ ಧನ್ಯವಾದ ಅರ್ಪಿಸಿದರು. ಮುಂದಿನ ದಿನಗಳಲ್ಲಿ ನಡೆಯಲಿರುವ ಘಟಕದ ಎಲ್ಲಾ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಹಕರಿಸುವಂತೆ ಸದಸ್ಯರುಗಳಲ್ಲಿ ಮನವಿ ಮಾಡಿಕೊಂಡರು. ನಿರ್ಗಮನ ಅಧ್ಯಕ್ಷರಾದ ಸುನೀತಾ ಗೋಪಾಲಕೃಷ್ಣರವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು. ತಮ್ಮ ಅಧ್ಯಕ್ಷತೆಯ ಅನುಭವವನ್ನು ಹಂಚಿಕೊಂಡು ಎಲ್ಲಾ ಮಾಜಿ ಅಧ್ಯಕ್ಷರುಗಳಿಗೆ, ಘಟಕದ ಸದಸ್ಯರೆಲ್ಲರಿಗೂ ನೆನಪಿನ ಕಾಣಿಕೆಯನ್ನು ನೀಡಿದರು. ಕೇಂದ್ರ ಸಮಿತಿಯ ಹಾಗೂ ವಿವಿಧ ಘಟಕಗಳಿಂದ ಆಗಮಿಸಿದ ಅಧ್ಯಕ್ಷರುಗಳು ಸದಸ್ಯರುಗಳು ನೂತನ ತಂಡಕ್ಕೆ ಶುಭ ಹಾರೈಸಿದರು. ಘಟಕದ ಮಹಿಳಾ ಸದಸ್ಯರುಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷರಾದ ವಿದ್ಯಾ ರಾಕೇಶ್ ರವರು ನಿರೂಪಿಸಿದರು. ನೂತನ ಕಾರ್ಯದರ್ಶಿ ಕಸ್ತೂರಿ ಮಹೇಶ್ ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!