Yuvavahini

NOV 19, 2022 3.06 PM IST

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ಗುರುಗಳ ತತ್ವಾದರ್ಶವೇ ಯುವ ಸಮುದಾಯಕ್ಕೆ ಪ್ರೇರಣೆ:- ರಕ್ಷಿತ್ ಶಿವರಾಮ್

ಉಪ್ಪಿನಂಗಡಿ :- ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಬೆಳಕಿನಡಿಯಲ್ಲಿ ಕಳೆದ 35 ವರ್ಷಗಳಿಂದ ಸಮಾಜಮುಖಿ ಚಿಂತನೆಗಳೊಂದಿಗೆ ಸಾಗುತ್ತಿರುವ ಯುವವಾಹಿನಿಯ ಯುವಸಮುದಾಯಕ್ಕೆ ಗುರುಗಳ ಪ್ರೇರಣೆಯೇ ದಾರಿದೀಪ ಎಂದು ಬೆಳ್ತಂಗಡಿಯ ಬೆಸ್ಟ್ ಫೌಂಡೇಶನ್ ಇದರ ಅಧ್ಯಕ್ಷರಾದ ರಕ್ಷಿತ್ ಶಿವರಾಮ್ ತಿಳಿಸಿದರು. ಅವರು ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ಇವರ ಮನೆಯಲ್ಲಿ ದಿನಾಂಕ 19 ನವೆಂಬರ್2022 ರಂದು ಜರಗಿದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಘಟಕವನ್ನು ತಮ್ಮ ಅಧ್ಯಕ್ಷಾವಧಿಯಲ್ಲಿ ಯಶಸ್ವಿಯಾಗಿ ಮುನ್ನಡೆಸಿದ ಜಯವಿಕ್ರಮ್ ದಂಪತಿಗಳನ್ನು ಮಾತಪಿತರಾದ ದೇವರಾಜ್ ಕಲ್ಲಾಪು ದಂಪತಿಗಳೊಂದಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡುವುದರ ಮೂಲಕ ಗೌರವಿಸಲಾಯಿತು.
ಗೌರವ ಸ್ವೀಕರಿಸಿ ಮಾತನಾಡಿದ ಜಯವಿಕ್ರಮ್ ಕಲ್ಲಾಪು ತಾನು ಯಾವುದೇ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಳ್ಳಲು ಮೂಲ ಕಾರಣ ಯುವವಾಹಿನಿ ಸಂಸ್ಥೆ, ಇದರಿಂದಾಗಿ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಅವಕಾಶ ದೊರಕಿತು ಎಂದರು. ಹಾಗೆಯೇ ತಮ್ಮ ಅಧ್ಯಕ್ಷವಧಿಯಲ್ಲಿ ಘಟಕವನ್ನು ಅತ್ಯುತ್ತಮ ಮಟ್ಟದಲ್ಲಿ ನಡೆಸಲು ಸಹಕರಿಸಿದ ಸರ್ವರ ಸಹಕಾರವನ್ನು ಮತ್ತೊಮ್ಮೆ ನೆನೆಪಿಸಿದರು.. ಈ ಸಂದರ್ಭದಲ್ಲಿ ನಮ್ಮ ಸಮಾಜದ ನಿವೃತ್ತ ಯೋಧ ರೋಹಿತ್ ಸುಣ್ಣಾಜೆ ಮತ್ತು ಬಾಲಪ್ರತಿಭೆ ಸೃಜನಾ ಅವರನ್ನು ಗುರುತಿಸಲಾಯಿತು. ಘಟಕದ ಗೌರವ ಸಲಹೆಗಾರರಾದ ವರದರಾಜ್. ಎಂ, ಘಟಕದ ಅಧ್ಯಕ್ಷರಾದ ಕುಶಾಲಪ್ಪ ಹತ್ತು ಕಳಸೆ, ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ರಾಜರಾಮ್ ಕೆ.ಬಿ , ಮಾಜಿ ಅಧ್ಯಕ್ಷರಾದ ಗುಣಕರ್ ಅಗ್ನಾಡಿ , ಕೃಷ್ಣಪ್ಪ ಪೂಜಾರಿ , ಚಂದ್ರಶೇಖರ್ ಸನೀಲ್, ಜಯಾನಂದ ಕಲ್ಲಾಪು, ರವೀಂದ್ರ ದಲ್ಕಾಜೆ, ಗುಣಕರ ಮುಗ್ಗಗುತ್ತು, ಶೇಖರ್ ಗೌಂಡತ್ತಿಗೆ, ಜನಾರ್ಧನ ನೂಜ, ಯುವ ಬ್ರಿಗೇಡ್ ನ ಪವನ್ ಸಾಲ್ಯಾನ್, ಹಿರಿಯರಾದ ಉಮಾನಾಥ ಕೋಟ್ಯಾನ್, ಜಯ ಬಂಗೇರ ಪಾಂಡವರಕಲ್ಲು, ವಿಶ್ವನಾಥ ಸುಣ್ಣಾಜೆ, ಗಿರಿಧರ ಪೂಜಾರಿ ಫುದ್ದೋಟ್ಟು, ವೆಂಕಪ್ಪ ಪೂಜಾರಿ, ದೇವಪ್ಪ ದಾಸ್, ಕಿಶೋರ್ ಚಂದ್, ವಿನಯ್ ಕುಮಾರ್, ಪವಿತ್ರ ಪ್ರಕಾಶ್, ಘಟಕದ ಕಾರ್ಯದರ್ಶಿ ಉದಯ್ ಪೂಜಾರಿ,ಜೊತೆ ಕಾರ್ಯದರ್ಶಿ ಅನಿತಾ ಸತೀಶ್ , ಘಟಕದ ಉಪಾಧ್ಯಕ್ಷರಾದ ಮನೋಹರ್ ಆಟಲ್ , ಮನೋಜ್ ಸಾಲಿಯಾನ್ ಪದಾಧಿಕಾರಿಗಳಾದ ಉಮೇಶ್ , ತುಳಸೀಧರ್ ಬೆನೆಪ್ಪು, ಮನೋಹರ್ ಕೆಳಗಿನಮನೆ, ಮಾಧವ ಪೂಜಾರಿ, ಬಿಲ್ಲವ ಗ್ರಾಮ ಸಮಿತಿ ಬೆಳ್ಳಿಪಾಡಿಯ ಅಧ್ಯಕ್ಷರಾದ ವಸಂತ್ ಪೂಜಾರಿ, ಘಟಕದ ಸದಸ್ಯರಾದ ರಮ್ಯಾ ರಾಜರಾಮ್,ನಯನ ಮನೋಹರ್, ರೂಪಲತಾ ಚಂದ್ರಶೇಖರ್, ಗಂಗಾಧರ್ ಪುರಿಯ,ವಿಕ್ರಮ್ ಪೂಜಾರಿ, ಮೇಷಾ,ಕು.ಅಕ್ರತಿ,ಧೃಣಿತಾ,ವಿನುತಾ,ಆರ್ಥಿಕ್,ರಿತೀಶಾ,ಧ್ರುವಿ,ಅನುಜ್ಞಾ,ಅಭಿಜ್ಞಾ,ವನಿತಾ,ಸ್ನೇಹ,ಅಂಬಿಕಾ,ಸುಶ್ಮಿತಾ, ಸಂತೋಷ್ ಕೆಳಗಿನಮನೆ , ಚೇತನ್ ಪೊಲ್ಲಕೋಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕುಶಾಲಪ್ಪ ಹತ್ತುಕಳಸೆ ಸ್ವಾಗತಿಸಿ, ಘಟಕದ ಉಪಾಧ್ಯಕ್ಷರಾದ ಮನೋಜ್‌ ಸಾಲ್ಯಾನ್ ಧನ್ಯವಾದ ಸಮರ್ಪಿಸಿದರು. ಘಟಕದ ಉಪಾಧ್ಯಕ್ಷರಾದ ಮನೋಹರ್ ಆಟಲ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!