ಯುವವಾಹಿನಿ(ರಿ) ಕೇಂದ್ರ ಸಮಿತಿ * ಯುವವಾಹಿನಿ (ರಿ) ಉಡುಪಿ ಘಟಕ

ಅಕ್ಷತಾ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಪ್ರತಿಭೆಗೆ ಸರಹದ್ದುಗಳಿಲ್ಲ-ಕಾರ್ಯಕ್ಷೇತ್ರಗಳೆಂಬ ಇತಿಮಿತಿ ಇರುವುದಿಲ್ಲ ಎಂಬ ಮಾತಿಗೆ ಸ್ಪಷ್ಟ ನಿದರ್ಶನ-ಬಜಪೆಯ ಶ್ರೀ ಪಿ.ಮೋಹನ್ ಕುಮಾರ್ ಹಾಗೂ ಕನಕಾ ಎಂ ದಂಪತಿಗಳ ಸುಪುತ್ರಿ ಕು| ಅಕ್ಷತಾ. ಪ್ರಾಥಮಿಕ, ಪ್ರೌಢ ಶಿಕ್ಷಣದ ನಂತರ ವಾಣಿಜ್ಯ ಕ್ಷೇತ್ರದತ್ತ ಮುಖ ಮಾಡಿದ ಈಕೆ ಬಿ.ಕಾಂ ಪದವಿಯನ್ನು ಮುಗಿಸಿ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ (ಮಾನವ ಸಂಪನ್ಮೂಲ) ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು.

ಕಲೆಯಲ್ಲಿ ದಿ| ವಿ.ಪಿ.ಕಾರಂತ, ಶ್ರೀ ಪಿ. ಮೋಹನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ವೈವಿಧ್ಯಮಯ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಕರ್ನಾಟಕ ಸಂಗೀತದತ್ತ ಒಲವು ತೋರಿಸಿ ಶ್ರೀಮತಿ ತುಳಸಿ ಇವರಿಂದ ತರಬೇತಿ ಪಡೆಯುತ್ತಿದ್ದಾರೆ.

ಧರ್ಮಸ್ಥಳ ಶಾಂತಿವನ ಟ್ರಸ್ಟ್ ನಡೆಸುವ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯಲ್ಲಿ ನಾಲ್ಕು ಬಾರಿ ಪ್ರಥಮ ಪ್ರಶಸ್ತಿ ಗಳಿಸಿದ ಅಕ್ಷತ ಕೊರಿಯಾದಲ್ಲಿ ನಡೆದ 11ನೆಯ ಅಂತಾರಾಷ್ಟ್ರೀಯ ಕಲಾ ವಿನಿಮಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ 2005 ಹಾಗೂ 2008 ರಲ್ಲಿ ಶಂಕರ್‍ಸ್ ಇಂಟರ್‌ನ್ಯಾಷನಲ್ ಮಕ್ಕಳ ಸ್ಪರ್ಧೆಯಲ್ಲಿ ರಜತ ಪದಕ ಗಳಿಸಿದ್ದಾರೆ. ನವ ದೆಹಲಿಯ ಸೆಂಟರ್ ಫಾರ್ ಕಲ್ಚರಲ್ ರಿಸೋರ್ಸ್ ಆಂಡ್ ಟ್ರೈನಿಂಗ್‌ನ ದೃಶ್ಯ ಕಲೆಯಲ್ಲಿ ಫೆಲೋಶಿಪ್ ಪಡೆದು ಹೈದರಾಬಾದ್‌ನಲ್ಲಿ ಅಅಖಖಿ ನಡೆಸಿದ ರಾಷ್ಟ್ರಮಟ್ಟದ ಪ್ರತಿಭಾ ಉತ್ಸವದಲ್ಲಿ ಜನಮನ ಗೆದ್ದಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ವಿಚಾರ.

ರಾಜ್ಯ, ರಾಷ್ಟ್ರ ಮಟ್ಟದ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಜಾನಪದ ನೃತ್ಯ, ಸಂಗೀತ ಹಾಗೂ ಕಲೆಯಲ್ಲಿ ಹಲವು ಪ್ರಶಸ್ತಿ ಗಳಿಸುತ್ತಾ ಮುನ್ನಡೆಯುತ್ತಿರುವ ಈ ಯುವ ಶಿಕ್ಷಕಿಯ ಸಾಧನೆಯನ್ನು ಗುರುತಿಸಿ ಯುವ ಸಾಧನಾ ಪುರಸ್ಕಾರವನ್ನು ನೀಡಲು ಯುವವಾಹಿನಿ ಹೆಮ್ಮೆ ಪಡುತ್ತಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!