Yuvavahini

DEC 16, 2023 10.00 AM IST

ಯುವವಾಹಿನಿ ಉಪ್ಪಿನಂಗಡಿ ಘಟಕದ ಪದಗ್ರಹಣ ಸಮಾರಂಭ

ಯುವವಾಹಿನಿಯಿಂದ ಸದೃಡ ಸಮಾಜ ನಿರ್ಮಾಣ : ಶ್ರೀಲತಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ

ಉಪ್ಪಿನಂಗಡಿ :  ಯುವಕರಿಗಾಗಿ ಯುವಕರಿಂದಲೇ ಸ್ಥಾಪನೆಯಾಗಿ ಇಂದು ಸಮಾಜಮುಖಿ ಕಾರ್ಯಗಳೊಂದಿಗೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ  ಹೆಮ್ಮೆಯ ಯುವವಾಹಿನಿ ಸಂಘಟನೆಯಿಂದ  ಸದೃಢ ಸಮಾಜ ನಿರ್ಮಾಣ ಮಾಡುವ ಮೂಲಕ ಮಹತ್ತರ ಹೆಜ್ಜೆಯನ್ನಿಡುತ್ತಿದೆ ಎಂದು  ಪುತ್ತೂರು ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ  ಶ್ರೀಲತಾ ಇವರು ತಿಳಿಸಿದರು.

ಅವರು ದಿನಾಂಕ 2023 ನೇ ಡಿಸೆಂಬರ್ 16, ಶನಿವಾರದಂದು ಉಪ್ಪಿನಂಗಡಿಯ ರೋಟರಿ ಭವನದಲ್ಲಿ ಜರಗಿದ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಮನೋಹರ್ ಕುಮಾರ್‌ರವರು ವಹಿಸಿ ಪ್ರಸಕ್ತ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
2023-24ನೇ ಸಾಲಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತ್‌ಗಳಲ್ಲಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಿಲ್ಲವ ಸಮಾಜದ ಬಂಧುಗಳನ್ನು ಹಾಗೂ ಬನ್ನೆಂಗಲ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಗುಣಕರ ಆಗ್ನಾಡಿ ಮತ್ತು ಪುತ್ತೂರು ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾದ ಲೋಕೇಶ್ ಬೆತ್ತೋಡಿ ಇವರನ್ನು ಗೌರವಿಸಿ ಅಭಿನಂದಿಸಲಾಯಿತು.

ನಿಕಟಪೂರ್ವ ಅಧ್ಯಕ್ಷರು ಹಾಗೂ ಆಯ್ಕೆ ಸಮಿತಿಯ ಸಂಚಾಲಕರಾದ ಕುಶಾಲಪ್ಪ ಹತ್ತುಕಳಸೆ ಇವರು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಸಭೆಗೆ ಪರಿಚಯಿಸಿದರು.
ಕೇಂದ್ರ ಸಮಿತಿಯ ಅಧ್ಯಕ್ಷರಾದ  ರಾಜೇಶ್ ಬಿ. ಇವರು ನೂತನ ತಂಡಕ್ಕೆ ಪ್ರಮಾಣ ವಚನ ಬೋಧಿಸಿ ಶುಭಹಾರೈಸಿದರು. ಘಟಕದ ನಾಲ್ಕು ಮಂದಿ ಸದಸ್ಯರುಗಳ ಮಕ್ಕಳು ಕ್ರೀಡಾ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸಭೆಯಲ್ಲಿ ಅಭಿನಂಧಿಸಲಾಯಿತು. ಅದೇ ರೀತಿ ಆರ್ಥಿಕವಾಗಿ ಹಿಂದುಳಿದ ಮೂರು ಮಂದಿ ವಿದ್ಯಾರ್ಥಿಗಳಿಗೆ ಒಟ್ಟು ₹25000/- ವಿದ್ಯಾ ನಿಧಿಯನ್ನು ವಿತರಿಸಲಾಯಿತು.
ಸಾಂತ್ವನ ನಿಧಿ ಯೋಜನೆಯಿಂದ ಹಿರೇಬಂಡಾಡಿ ಗ್ರಾಮದ ಸಂಜೀವ ಪೂಜಾರಿ ಇವರ ವೈದ್ಯಕೀಯ ಚಿಕಿತ್ಸೆಗಾಗಿ ಘಟಕದಿಂದ ₹8000/- ಹಾಗೂ ಉದ್ಯಮಿ ನಟೇಶ್ ಪೂಜಾರಿ , ಬೆಂಗಳೂರು ಇವರು ನೀಡಿದ ₹5000/- ಹೀಗೆ ಒಟ್ಟು ₹13000/- ವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

ನಾಣ್ಯಪ್ಪ ಪೂಜಾರಿ, ಶಿಲ್ಪಾ ದಂಪತಿಗಳ ಪುತ್ರ ಮಾ. ಧ್ರುವ ಪೆನ್ಸಿಲ್ ಆರ್ಟ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವನ್ನು ಬೆಂಗಳೂರಿನ ಉದ್ಯಮಿ ನಟೇಶ್‌ ಪೂಜಾರಿ ಬಿಡುಗಡೆಗೊಳಿಸಿ ಮುಖ್ಯ ಆತಿಥಿಗಳಾಗಿ ಭಾಗವಹಿಸಿ  ಶುಭಹಾರೈಸಿದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯವರಾದ  ಪ್ರವೀಣ್ ಓಂಕಲ್ ರವರು ನೂತನ ತಂಡಕ್ಕೆ ಶುಭಹಾರೈಸಿದರು.
ನೂತನ ಅಧ್ಯಕ್ಷರಾದ ಸೋಮಸುಂದರ ಕೊಡಿಪ್ಪಾನ ಇವರು ತಮ್ಮ ಅವಧಿಯಲ್ಲಿ ಉಪ್ಪಿನಂಗಡಿ ಯುವವಾಹಿನಿಯನ್ನು ಸಮಾಜಮುಖಿಯಾಗಿ ಬೆಳೆಸುವಲ್ಲಿ ಎಲ್ಲರ ಸಹಕಾರವನ್ನು ಯಾಚಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ರಾಜೇಶ್ .ಬಿ ಹಾಗೂ ಘಟಕದ ಅಧ್ಯಕ್ಷರಾದ ಮನೋಹರ್ ಹಾಗೂ ಮಾಧವ ಬಿ.ಕೆ ಇವರನ್ನು ಘಟಕದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.

ಘಟಕದ ಕಾರ್ಯದರ್ಶಿ ಮಾಧವ ಬಿ.ಕೆ ಪ್ರಸಕ್ತ ಸಾಲಿನ ಸಾಧನೆಗಳ ವರದಿ ಮಂಡಿಸಿದರು.  ಡಾ.ರಾಜಾರಾಮ್ ಕೆ.ಬಿ ಪ್ರಸ್ತಾಪಿಸಿದರು. ಅಭಿಜ್ನಾ ಪ್ರಾರ್ಥಿಸಿ, ಅಜಿತ್ ಕುಮಾರ್ ಸ್ವಾಗತಿಸಿ, ನೂತನ ಕಾರ್ಯದರ್ಶಿ ಅನಿತಾ ಸತೀಶ್ ಧನ್ಯವಾದ ಸಲ್ಲಿಸಿದರು. ಲೋಕೇಶ್ ಬೆತ್ತೋಡಿ ಕಾರ್ಯಕ್ರಮ ನಿರ್ವಹಸಿದರು. ನಾಣ್ಯಪ್ಪ ಪೂಜಾರಿ ಸಹಕರಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!