Yuvavahini

FEB 11, 2024 3.33 PM IST

ಯುವವಾಹಿನಿ (ರಿ.) ಕೂಳೂರು ಘಟಕ ಸ್ನೇಹ ಸಮ್ಮಿಲನ 2024

ಯುವವಾಹಿನಿ (ರಿ.) ಕೂಳೂರು ಘಟಕದ ಮೂರು ಧ್ಯೇಯಗಳಲ್ಲಿ ಒಂದಾದ ಸಂಪರ್ಕ ಇದರ ನೆಲೆಯಲ್ಲಿ ಯುವವಾಹಿನಿ ಸದಸ್ಯರ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ದಿನಾಂಕ 11-02-2024 ಆದಿತ್ಯವಾರದಂದು ಸ್ನೇಹ ಸಮ್ಮಿಲನ 2024 ಕಾರ್ಯಕ್ರಮವನ್ನು Relax leisure park ಬ್ರಹ್ಮಾವರದಲ್ಲಿ ಆಯೋಜಿಸಲಾಗಿತ್ತು.

ಬೆಳಿಗ್ಗೆ 7.45 ಗಂಟೆಗೆ ಸರಿಯಾಗಿ ನಮ್ಮ ಬಸ್ಸಿನ ಸಾರಥಿ ನಮ್ಮನ್ನೆಲ್ಲ ಕೂರಿಸಿಕೊಂಡು ಕೂಳೂರಿನಿಂದ ಹೊರಟು 9.30 ಗೆ ರೆಸಾರ್ಟ್ ತಲುಪಿದೆವು. ಅಲ್ಲಿ ಬೆಳಗ್ಗಿನ ಉಪಹಾರ ಮುಗಿಸಿ ಅಲ್ಲಿಂದ ಬೋಟ್ ಮೂಲಕ island ತಲುಪಿದೆವು. ಬೋಟ್ ನಲ್ಲಿ ಸದಸ್ಯರೆಲ್ಲ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಅಲ್ಲಿ ತಲುಪಿದ ಬಳಿಕ ಅಧ್ಯಕ್ಷರು ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಘಟಕದ ಎರಡನೇ ಉಪಾಧ್ಯಕ್ಷರಾದ ಗೀತಾ ವಸಂತ್, ಮಾಜಿ ಅಧ್ಯಕ್ಷರಾದ ನಯನ ರಮೇಶ್ , ದೀಕ್ಷಿತ್ ಸಿ ಎಸ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಕಾರ್ಯದರ್ಶಿ ನೈನಾ ಕೋಟ್ಯಾನ್ , ಸಂಚಾಲಕರಾದ ಸುಮಾ ಶಿವು ಕೋಡಿಕಲ್, relax leisure park na ಮೇಡಂ ಜ್ಯೋತ್ಸ್ನಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು, ಸದಸ್ಯರು ಹಾಗೂ ಸದಸ್ಯರ ಕುಟುಂಬದವರು ಉಪಸ್ಥಿತರಿದ್ದರು. ನಂತರ ಸದಸ್ಯರ 2 ತಂಡಗಳನ್ನು ರಚಿಸಿ, ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ತಂಡದ ನಾಯಕರಾಗಿ ಒಂದು ತಂಡಕ್ಕೆ ಅಧ್ಯಕ್ಷರಾದ ಇಂದಿರಾ ಸುರೇಶ್ ಹಾಗೂ ಇನ್ನೊಂದು ತಂಡಕ್ಕೆ ಮಾಜಿ ಅಧ್ಯಕ್ಷರಾದ ನಯನ ರಮೇಶ್ ಇವರನ್ನು ಆಯ್ಕೆ ಮಾಡಲಾಯಿತು. ಬೆಳಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ನಡೆದ ಆಟೋಟ ಸ್ಪರ್ಧೆ ಕಾರ್ಯಕ್ರಮವನ್ನು ಘಟಕದ ಕ್ರೀಡಾ ನಿರ್ದೇಶಕರಾದ ಹೇಮಂತ್, ವಾರ್ತಾ ಮತ್ತು ಪ್ರಚಾರ ನಿರ್ದೇಶಕರಾದ ರಕ್ಷಾ ಹಾಗೂ ಸದಸ್ಯರಾದ ಪ್ರದೀಪ್ ವಿಭಿನ್ನವಾದ ಹೊಸ ಹೊಸ ಆಟಗಳನ್ನು ಆಡಿಸಿದರು. ವಿಶೇಷವಾಗಿ relax leisure park na ಮೇಡಂ ಜೋತ್ಸ್ನ ರವರು ನಮ್ಮ ಜೊತೆ ಸೇರಿ ಮನರಂಜನೆ ನೀಡಿದರು.

ಸ್ಪರ್ದೆಯಲ್ಲಿ ಭಾಗವಹಿಸಿದ ಎರಡು ತಂಡಕ್ಕೂ ಪ್ರಥಮ ಹಾಗೂ ದ್ವಿತೀಯ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಮಧ್ಯದಲ್ಲಿ ಅಲ್ಲಿ ಬಂದ ಪ್ರವಾಸಿಗರ ತಂಡದವರು ನಮ್ಮ ಜೊತೆ ಸೇರಿ ಹಾಡು ಹಾಡಿಕೊಂಡು ಎಲ್ಲರ ಜೊತೆ ಹೆಜ್ಜೆ ಹಾಕಿ ಕುಣಿದರು. ಕಾರ್ಯಕ್ರಮದಲ್ಲಿ ಸದಸ್ಯರಿಗಾಗಿ ನಿಧಿ ಶೋಧ ನಡೆಸುವ ಟಾಸ್ಕ್ ನೀಡಲಾಯಿತು. ಇದರಲ್ಲಿ ಘಟಕದ ಸದಸ್ಯರಾದ ಪುಷ್ಪ ಹಾಗೂ ಕ್ರೀಡಾ ನಿರ್ದೇಶಕರಾದ ಹೇಮಂತ್ ಗೆಲುವು ಸಾಧಿಸಿದರು. ಇವರಿಗೆ ಅಧ್ಯಕ್ಷರು ಬಹುಮಾನ ವಿತರಿಸಿದರು. ಮಧ್ಯಾಹ್ನ 3.00 ಗಂಟೆಯ ನಂತರ ಸದಸ್ಯರು ಎಲ್ಲರೂ ನೀರಿನಲ್ಲಿ ಆಟ ಆಡಿ ಮನರಂಜಿಸಿದರು. ಅಂತಿಮದಲ್ಲಿ ವಿಶೇಷವಾಗಿ ರೈನ್ ಡ್ಯಾನ್ಸ್ ಗೆ ಎಲ್ಲರೂ ಹೆಜ್ಜೆ ಹಾಕಿದರು. ಈ ಕಾರ್ಯಕ್ರಮದಲ್ಲಿ 80 ಮಂದಿ ಸದಸ್ಯರು ಮತ್ತು ಕುಟುಂಬದವರು ಪಾಲ್ಗೊಂಡಿದ್ದರು. ಅಂತಿಮದಲ್ಲಿ ಬಂದ ಸದಸ್ಯರು ಮತ್ತು ಕುಟುಂಬದವರು ಕಾರ್ಯಕ್ರಮದ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡರು. ಸದಸ್ಯರಿಗೆ ಬೆಳಿಗ್ಗೆ ಉಪಹಾರ, ಮಧ್ಯಾಹ್ನದ ಊಟ ಹಾಗೂ ಸಂಜೆ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ 5.30 ಗಂಟೆಗೆ ಅಲ್ಲಿಂದ ಹೊರಟು 7.30 ಗಂಟೆಗೆ ಮಂಗಳೂರು ಬಂದು ತಲುಪಿದೆವು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!