Yuvavahini

FEB 18, 2024 4.23 PM IST

ಯುವವಾಹಿನಿ (ರಿ.) ಕೆಂಜಾರು ಕರಂಬಾರು ಘಟಕದ ಪದಪ್ರದಾನ ಸಮಾರಂಭ

ವೈವಿಧ್ಯತೆಗೆ ಯುವವಾಹಿನಿ ಮಾದರಿ : ಯೋಗೀಶ್ ಕೈರೋಡಿ

ಕೆಂಜಾರು-ಕರಂಬಾರು: ಧಾರ್ಮಿಕತೆ ಎಂಬುವುದು ಜನಜೀವನದ ಭಾಗ. ವಸ್ತುವಿನಲ್ಲಿ ವಿವಿಧ ನೆಲೆಯ ಗುಣಮಟ್ಟ ಇರುವಂತೆ ಧಾರ್ಮಿಕತೆಯಲ್ಲಿಯೂ ಉತ್ತಮ,ಉನ್ನತ ಹಾಗೂ ದುರ್ಬಲ ಎಂಬ ಮೂರು ಗುಣಮಟ್ಟವಿದೆ. ಉತ್ತಮ ಹಾಗೂ ಉನ್ನತ ಧಾರ್ಮಿಕತೆಯ ಪಾಲಕರು ಫಲಾನುಭವಿಗಳಾಗಬೇಕು. ದುರ್ಬಲ ಧಾರ್ಮಿಕತೆಯಿಂದ ಯುವಜನತೆಯನ್ನು ಪಾರುಗೊಳಿಸುವ ಹೊಣೆ ಯುವವಾಹಿನಿಗಿರಲಿ. ಒಂದು ವರ್ಷದ ಅವಧಿಯಲ್ಲಿ ಅಲ್ಪಾವಧಿ ಯೋಜನೆಗಳನ್ನು ಕಾರ್ಯಗತಗೊಳಿಸುವ ಚಿಂತನೆ ಸಹಜವಾಗಿ ನೂತನ ಪದಾಧಿಕಾರಿಗಳಿಗಿರುತ್ತದೆ. ಅಲ್ಪಾವಧಿಯೊಂದಿಗೆ ದೂರದೃಷ್ಟಿಯ ಕಾರ್ಯಕ್ರಮಗಳಿಗೂ ಆದ್ಯತೆ ಇರಲಿ. ಸಂಘಟನೆ ಸ್ವರೂಪ ಮತ್ತು ಕಾರ್ಯಕ್ರಮದ ವೈವಿಧ್ಯಕ್ಕೆ ಯುವವಾಹಿನಿ ನಾಡಿಗೆ ಮಾದರಿ ಎಂದು ಮೂಡುಬಿದಿರೆ ಆಳ್ವಾಸ್ ಕಾಲೇಜು ಉಪನ್ಯಾಸಕ ಯೋಗೀಶ್ ಕೈರೋಡಿರವರು ತಿಳಿಸಿದರು.

ಅವರು ದಿನಾಂಕ 18.02.2024 ರಂದು ಕೆಂಜಾರು ಕರಂಬಾರು ಶ್ರೀ ದೇವಿ ಭಜನಾ ಮಂದಿರದಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ 2024-25ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಕೆಂಜಾರು ಕರಂಬಾರು ಘಟಕದ ಅಧ್ಯಕ್ಷರಾದ ಭರತೇಶ್ ಪೂಜಾರಿಯವರು ವಹಿಸಿದ್ದರು.

ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಬಿಲ್ಲವ ಸಂಘ ಬಜಪೆ-ಕರಂಬಾರು ಅಧ್ಯಕ್ಷರು ಶಿವರಾಮ್ ಪೂಜಾರಿಯವರು ನೆರವೇರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್.ಕೆ .ಪೂಜಾರಿ ನೂತನ ಕಾರ್ಯಕಾರಿ ಸಮಿತಿಗೆ ಪದಪ್ರದಾನ ಮಾಡಿದರು.

ಬಿಲ್ಲವ ಸಂಘ ತೋಕೂರು-ಕೆಂಜಾರು ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ, ಶೇಖರ್ ಬಂಗೇರ ಅಧ್ಯಕ್ಷರು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರು, ನೂತನ ಅಧ್ಯಕ್ಷರಾದ ವಿನೋದ್ ಅರ್ಬಿ ಹಾಗೂ ಪ್ರಧಾನ ಕಾರ್ಯದರ್ಶಿ ರೂಪೇಶ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ,ವಿದ್ಯಾನಿಧಿ ವಿತರಣೆ
ರಾಷ್ಟ್ರಪತಿ ಸೇವಾ ಪದಕ ಪಡೆದ ಬಜಪೆ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ರಾಮ ಪೂಜಾರಿ ಮೇರಮಜಲು ಹಾಗೂ ಉದ್ಯಮಿ ನಾರಾಯಣ ಪೂಜಾರಿ ಬೊಗೋರಿದಡಿ ಅವರನ್ನು ಸನ್ಮಾನಿಸಲಾಯಿತು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಿಸಲಾಯಿತು.

ಘಟಕದ ಮಾಜಿ ಅಧ್ಯಕ್ಷರಾದ ಜಿತೇಶ್ ಸಾಲ್ಯಾನ್ ಪ್ರಾಸ್ತವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ರೂಪೇಶ್ ಪೂಜಾರಿ ವಾರ್ಷಿಕ ವರದಿ ಮಂಡಿಸಿದರು. ಶ್ರೀ ದೇವಿ ಭಜನಾ ಮಂದಿರದ ಅರ್ಚಕರು ಲೋಕೇಶ್ ಪೂಜಾರಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದರು

ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿದರು. ಸ್ಥಾಪಕ ಅಧ್ಯಕ್ಷರು ನಿರೂಪಿಸಿದರು. ನೂತನ ಕಾರ್ಯದರ್ಶಿ ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!