Yuvavahini

MAR 10, 2024 5.41 PM IST

ಯುವವಾಹಿನಿ(ರಿ.)ಕೊಲ್ಯ ಘಟಕದ ವತಿಯಿಂದ

ಹಣಕಾಸು ನಿರ್ವಹಣೆ ಕಾರ್ಯಗಾರ

ಕೊಲ್ಯ : “ಮೇಲಕ್ಕೆ ಎಸೆಯಲ್ಪಟ್ಟ ಮಗುವಿಗೆ ಅಮ್ಮ ಹಿಡಿಯುತ್ತಾಳೆಂಬ ಬಲವಾದ ನಂಬಿಕೆ ಇರುವಂತೆ ಮ್ಯೂಚುವಲ್ ಫಂಡ್ ಹಣ ಹೂಡಿಕೆಯಲ್ಲಿ ನಂಬಿಕೆಯೇ ಬಹು ದೊಡ್ಡ ಭದ್ರತೆ” ನಮಗೆ ಬರುವ ಆದಾಯದಲ್ಲಿ ಮೊದಲು ಒಂದಿಷ್ಟು ಉಳಿತಾಯ ಮಾಡಿ ನಂತರ ನಮ್ಮ ಖರ್ಚು ವೆಚ್ಚಗಳನ್ನು ಸರಿದೂಗಿಸಿದರೆ ಮುಂದೆ ಹಣಕಾಸು ನಿರ್ವಹಣೆ ಕ್ಷೇತ್ರದಲ್ಲಿ ಉತ್ತಮ ಹೂಡಿಕೆದಾರರಾಗಲು ಸಾಧ್ಯ ಎಂದು ಬೆಂಗಳೂರು ಮೂಲದ ಖ್ಯಾತ ಸಂಪನ್ಮೂಲ ವ್ಯಕ್ತಿ ಡಾ. ಬಾಲಾಜಿ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.

ಹೂಡಿಕೆ ಕ್ಷೇತ್ರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಕಾಲದಲ್ಲಿ ಯಾವ ರೀತಿ ನಮ್ಮಲ್ಲಿರುವ ಬಂಡವಾಳವನ್ನು ಯಶಸ್ವಿಯಾಗಿ ಹೂಡಿಕೆ ಮಾಡಿ ಉತ್ತಮ ಇಳುವರಿಯನ್ನು ಪಡೆಯಬಹುದು ಎಂದು ಈ ಸಂದರ್ಭದಲ್ಲಿ ಸರಿಸುಮಾರು ಎರಡು ಗಂಟೆಗಳ ಕಾಲ ಮಹತ್ವಪೂರ್ಣವಾದ, ಪರಿಣಾಮಕಾರಿಯಾದ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಯವರಿಂದ ಪಡೆಯಲಾಯಿತು.

ಯುವವಾಹಿನಿ (ರಿ.) ಕೊಲ್ಯ ಘಟಕ ಹಾಗೂ ರೋಟರಿ ಸಮುದಾಯದಳ ಕೊಲ್ಯ ಸೋಮೇಶ್ವರ ಸಹಯೋಗದಲ್ಲಿ ಎಚ್.ಡಿ.ಎಫ್.ಸಿ ಮ್ಯೂಚುವಲ್ ಫಂಡ್ ನ ಸಹಯೋಗದಲ್ಲಿ ಹಣಕಾಸು ನಿರ್ವಹಣೆ ಕಾರ್ಯಾಗಾರವು ನುರಿತ ಸಂಪನ್ಮೂಲ ವ್ಯಕ್ತಿ ಡಾ. ಬಾಲಾಜಿ ರಾವ್ ರವರ ಮಾರ್ಗದರ್ಶನದಲ್ಲಿ ಪರಿವಾರ್ ರೆಸಿಡೆನ್ಸಿ ಬೀರಿ ಸಂಕೋಳಿಗೆಯಲ್ಲಿ ದಿನಾಂಕ 10-03-2024 ರಂದು ಆದಿತ್ಯವಾರ ಜರಗಿತು.

ಯುವವಾಹಿನಿ ಕೊಲ್ಯ ಘಟಕದ ಅಧ್ಯಕ್ಷರು ಲತೀಶ್ ಎಂ. ಸಂಕೋಳಿಗೆ ಪ್ರಸ್ತುತ ವಿದ್ಯಮಾನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹಣಕಾಸಿನ ವಿನಿಯೋಗವನ್ನು ಯಶಸ್ವಿಯಾಗಿ ಹೂಡಿಕೆ ಮಾಡಿ ಉತ್ತಮ ಭವಿಷ್ಯವನ್ನು ನಿರ್ಮಾಣ ಮಾಡಲು ಈ ರೀತಿಯ ಕಾರ್ಯಕ್ರಮಗಳು ಬಹಳ ಅರ್ಥಪೂರ್ಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಕ್ತ ಸಂವಾದ

ಕಾರ್ಯಾಗಾರದ ನಂತರ ಮ್ಯೂಚುವಲ್ ಫಂಡ್ ನ ಹೂಡಿಕೆ ಮತ್ತು ಮಾರುಕಟ್ಟೆ ಏರಿಳಿತಗಳ ಕುರಿತು ಮುಕ್ತ ಸಂವಾದ ನಡೆಯಿತು. ರೋಟರಿ ಕ್ಲಬ್ ಮಂಗಳೂರು ಪೂರ್ವದ ಅಧ್ಯಕ್ಷರು ರೊ. ಜಯರಾಂ ಶೆಟ್ಟಿ, ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರದ ಅಧ್ಯಕ್ಷರಾದ ಆನಂದ ಮಲಯಾಳಕೋಡಿ, ಲೈಫ್ ಟೈಮ್ ಅಸೆಟ್ ಸ್ಟ್ರಾಟೆಜೀಸ್ ಪ್ರೈ. ಲಿ. ನಿರ್ದೇಶಕರಾದ ಚಂದ್ರಶೇಖರ ಅಮೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೊಲ್ಯ ಘಟಕದ ಸಾಂಸ್ಕೃತಿಕ ನಿರ್ದೇಶಕರಾದ ಸೌಮ್ಯ ಯೋಗೀಶ್ ಪ್ರಾರ್ಥನೆ ನೆರವೇರಿಸಿದರು.ಯುವವಾಹಿನಿ ಅಧ್ಯಕ್ಷರು ಲತೀಶ್.ಎಂ ಸಂಕೋಳಿಗೆ ಪ್ರಸಾವನೆಗೈದು ಸ್ವಾಗಿತಿಸಿದರು.ಕಾರ್ಯದರ್ಶಿ ಜೀವನ್ ಕೊಲ್ಯ ಸಂಪನ್ಮೂಲ ವ್ಯಕ್ತಿಯ ವ್ಯಕ್ತಿ ಪರಿಚಯ ಮಾಡಿದರು. ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರದ ಅಧ್ಯಕ್ಷರು ಆನಂದ್ ಮಲಯಾಳ ಕೋಡಿ ಧನ್ಯವಾದ ಸಮರ್ಪಣೆಗೈದರು. ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದರಶ್ಮಿ ಸನಿಲ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!