Yuvavahini

MAY 07, 2024 4.02 PM IST

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಕಥೆ ಎಡ್ಡೆ ಉಂಡು – ನಾಟಕ ಪ್ರದರ್ಶನ

ಮೂಡುಬಿದಿರೆ: ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳ ಸಹಾಯಾರ್ಥವಾಗಿ ಶಾರದಾ ಆರ್ಟ್ಸ್ ಕಲಾವಿದರು (ರಿ.) ಮಂಜೇಶ್ವರ ಇವರು ಅಭಿನಯಿಸಿರುವ ವಿನೂತನ ಶೈಲಿಯ ಹಾಸ್ಯಮಯ ತುಳು ನಾಟಕ ಕಥೆ ಎಡ್ಡೆ ಉಂಡು ನಾಟಕ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 07-05-2024 ರಂದು ಸಂಜೆ 7 ಗಂಟೆಗೆ ಸರಿಯಾಗಿ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆಯಿತು.

ಘಟಕದ ಅಧ್ಯಕ್ಷ ರಾದ ಶಂಕರ್ ಎ. ಕೋಟ್ಯಾನ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಆಗಮಿಸಿದ ಎಲ್ಲಾ ಅತಿಥಿಗಳನ್ನು ಮಾಜಿ ಅಧ್ಯಕ್ಷ ಜಗದೀಶಚಂದ್ರ ಡಿ.ಕೆ. ಇವರು ಸ್ವಾಗತಿಸಿದರು. ಶಂಕರ್ ಎ. ಕೋಟ್ಯಾನ್ ಪುಷ್ಪ ನೀಡಿ ಗೌರವಿಸಿದರು. ನಾಟಕ ತಂಡದ ಸಂಚಾಲಕರಾದ ಕೃಷ್ಣ ಜೆ. ಮಂಜೇಶ್ವರ ಇವರನ್ನು ಶಾಲು, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಅಧ್ಯಕ್ಷರು ಪ್ರಸ್ತಾವಿಕವಾಗಿ ಮಾತನಾಡಿ ನಾಟಕದ ಉದ್ದೇಶ ಮತ್ತು ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಉದ್ಯಮಿ ಬೆಳುವಾಯಿ ಭಾಸ್ಕರ್ ಎಸ್. ಕೋಟ್ಯಾನ್ ಇವರು ದೀಪ ಬೆಳಗಿಸುವ ಮೂಲಕ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಕೆ. ಅಭಯಚಂದ್ರ ಜೈನ್ ಮಾತನಾಡಿ ಯುವವಾಹಿನಿಯ ಕಾರ್ಯವೈಖರಿಯ ಬಗ್ಗೆ ಪ್ರಶಂಸೆಯ ಮಾತು ಹೇಳಿ ಕಾರ್ಯಕ್ರಮಕ್ಕೆ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ
ಶ್ರೀಮತಿ ಭಾನುಮತಿ ಶೀನಪ್ಪ, ಉದ್ಯಮಿ ನಾರಾಯಣ ಪಿ. ಎಂ, ಸುದರ್ಶನ್ ಎಮ್. ಮೂಡಬಿದ್ರಿ, ಜಗದೀಶ್ಚಂದ್ರ ಡಿ ಕೆ, ನವಾನಂದ ಮೂಡಬಿದ್ರೆ, ಹರಿಪ್ರಸಾದ್ ಪಿ, ಸುಶಾಂತ್ ಕರ್ಕೇರ, ಪ್ರತಿಭಾ ಸುರೇಶ್, ಗಿರೀಶ್ ಕೋಟ್ಯಾನ್ ಹಾಗೂ ಕಾರ್ಯಕ್ರಮಕ್ಕೆ ಸಹಕರಿಸಿದ ಹಲವು ಗಣ್ಯಾತಿ ಗಣ್ಯರು ಭಾಗವಸಿದ್ದರು.

ಕಾರ್ಯಕ್ರಮದ ಮುಖ್ಯ ಉದ್ದೇಶವಾದ ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳ ಸಹಾಯಾರ್ಥವಾಗಿ ಘಟಕದ ವತಿಯಿಂದ ಸುಶಾಂತ್ ಕೆ ಪೂಜಾರಿ, ಕೌಶಿಲ್ ಬನ್ನಡ್ಕ, ವಿಕಾಸ್ ಶೆಟ್ಟಿ , ಇವರುಗಳಿಗೆ ಅನಾರೋಗ್ಯದ ಕಾರಣ ವೈದ್ಯಕೀಯ ನೆರವಿಗಾಗಿ ಸಹಾಯ ಧನ ಅತಿಥಿಗಳ ಸಮ್ಮುಖದಲ್ಲಿ ವಿತರಿಸಲಾಯಿತು.

ಕಾರ್ಯಕ್ರಮದ ನಿರೂಪಣೆಯನ್ನು ಕು.ಸೌಮ್ಯ ಕೋಟ್ಯಾನ್ ನೆರವೇರಿಸಿದರು. ನಾಟಕ ಪ್ರದರ್ಶನವು ರಾತ್ರಿ 8 ಗಂಟೆಗೆ ಸರಿಯಾಗಿ ಪ್ರಾರಂಭವಾಯಿತು. ಸುಮಾರು 900 ಕ್ಕೂ ಹೆಚ್ಚು ಮಂದಿ ನಾಟಕ ವೀಕ್ಷಿಸಿದರು. ನಾಟಕ ಪ್ರದರ್ಶನವು ಉತ್ತಮವಾಗಿ ಮೂಡಿ ಬಂದಿದ್ದು, ನಾಟಕಾಭಿಮಾನಿಗಳ ಪ್ರಸಂಶೆಗೆ ಪಾತ್ರವಾಯಿತು. ರಾತ್ರಿ 11.00ಕ್ಕೆ ಮುಕ್ತಾಯವಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!