Yuvavahini

JUN 23, 2024 3.05 PM IST

ಅರಿವು - 2024

ಪರಿಶ್ರಮ ಹಾಗೂ ಶಿಸ್ತುಬದ್ಧ ಜೀವನದಿಂದ ಸಾಧನೆ ಸಾಧ್ಯ: ತಾರಾನಾಥ ಪೂಜಾರಿ

ಮೂಡಬಿದ್ರೆ: ಗುರುಗಳ ಹಿಂಬಾಲಕರಾಗಿ ಬದುಕಿದರೆ ಸಾಲದು, ಅದರೊಂದಿಗೆ ಗುರುಗಳ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಎಷ್ಟರಮಟ್ಟಿಗೆ ಅಳವಡಿಸಿಕೊಂಡಿದ್ದೇವೆ ಎಂಬುವುದನ್ನು ಅರಿವುದು ಮುಖ್ಯ ಎಂದು ರಾಜ್ಯ ಹೈಕೋರ್ಟಿನ ನಿರ್ದೇಶಿತ ಹಿರಿಯ ನ್ಯಾಯವಾದಿ ಇರುವೈಲು ತಾರನಾಥ ಪೂಜಾರಿ ರವರು ಹೇಳಿದ್ದಾರೆ.

ಅರಿವು – 2024, ಸನ್ಮಾನ, ಯುವಸಿರಿ ಪ್ರಶಸ್ತಿ ಪುರಸ್ಕಾರ ಪ್ರಧಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ತಮ್ಮ ಅನಿಸಿಕೆಯನ್ನು ನೀಡಿದರು. ವಿದ್ಯೆಯ ಮೇಲೆ ಹಿಡಿದ ಸಾಧಿಸಲು ಎಷ್ಟು ಬುದ್ಧಿವಂತರಾದರೂ ಪ್ರಯೋಜನವಿಲ್ಲ. ಅದಕ್ಕಿಂತ ಮುಖ್ಯವಾಗಿ ಪರಿಶ್ರಮ, ಶಿಸ್ತು , ಪ್ರಯತ್ನ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಾನು ಇಂಥ ವೇದಿಕೆಯಿಂದ ಪ್ರೋತ್ಸಾಹವನ್ನು ಪಡೆದಿದ್ದೇನೆ. ವಿದ್ಯಾರ್ಥಿಗಳು ಸಿಕ್ಕ ಪ್ರೋತ್ಸಾಹವನ್ನು ಸದುಪಯೋಗ ಪಡೆದುಕೊಂಡರೆ ಯಶಸ್ಸು ಪಡೆಯಲು ಸಾಧ್ಯ, ವಿದ್ಯಾರ್ಥಿಗಳಿಗೆ ಯುವವಾಹಿನಿಯು ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು.
ಯುವವಾಹಿನಿ(ರಿ.) ಮೂಡಬಿದ್ರೆ ಘಟಕದ ಅಧ್ಯಕ್ಷ ಶಂಕರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಭಾನುವತಿ ಶೀನಪ್ಪ ಉದ್ಘಾಟಿಸಿ, ಶುಭ ಹಾರೈಸಿದರು. ಚಿಂತಕ ಹಾಗೂ ಶಿಕ್ಷಣ ತಜ್ಞ ಅರವಿಂದ ಚೊಕ್ಕಾಡಿ ಗುರು ಸಂದೇಶ ನೀಡಿ, ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಶಿಕ್ಷಣದ ಅಭಿರುಚಿಯ ಬಗ್ಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತಯಾರಿಯ ಮಾರ್ಗದರ್ಶನ ನೀಡಿದರು.
2023-24ನೇ ಸಾಲಿನ ಎಸ್.ಎಸ್.ಎಲ್.ಸಿ ವಿಭಾಗದಲ್ಲಿ ಶೇಕಡ 90 ಕಿಂತ ಅಧಿಕ ಅಂಕಗಳಿಸಿದ ಬಿಲ್ಲವ ಸಮಾಜದ 30 ವಿದ್ಯಾರ್ಥಿಗಳಿಗೆ ನಗದು ಸಹಿತ ಯುವಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎಸ್ ಎಸ್ ಎಲ್ ಸಿ ಯಲ್ಲಿ ಮೂಡಬಿದ್ರೆ ತಾಲೂಕು ವ್ಯಾಪ್ತಿಯಲ್ಲಿ ಪ್ರಥಮ ಸ್ಥಾನ ಪಡೆದ ಮಾನ್ಯ ಎನ್ ಪೂಜಾರಿ ಹಾಗೂ ಪಿಯುಸಿಯ ಮೂರು ವಿಭಾಗಗಳಲ್ಲಿ ಅತ್ಯಧಿಕ ಅಂಕ ಪಡೆದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿಶುವಲ್ ಆರ್ಟ್ಸ್ ಪದವಿಯಲ್ಲಿ ದ್ವಿತೀಯ ಸ್ಥಾನ ಪಡೆದ ಶ್ರವಣ್ ಪೂಜಾರಿ, ಯುವವಾಹಿನಿ ಮೂಡಬಿದ್ರೆ ಘಟಕದ ಮಾಜಿ ಅಧ್ಯಕ್ಷ ಹರಿಪ್ರಸಾದ್ .ಪಿ., ಜಿಮ್ ಟ್ರೈನರ್ ಹಾಗೂ ರೆಫ್ರಿಯಾಗಿರುವ ಸ್ವಾಮಿ ಪ್ರಸಾದ್ ಇವರನ್ನು ಅಭಿನಂದಿಸಲಾಯಿತು.

ಯುವ ಸ್ಪಂದನ ಯೋಜನೆಯನ್ನು 2019ರಲ್ಲಿ ಆರಂಭಿಸಿ, ಮೂರು ವರ್ಷಗಳ ಕಾಲ ಅದರ ಯಶಸ್ವಿ ಅಧ್ಯಕ್ಷರಾಗಿದ್ದ ಜಗದೀಶ್ಚಂದ್ರ ಡಿ.ಕೆ ಇವರನ್ನು ಸನ್ಮಾನಿಸಲಾಯಿತು. ಇವರಿಗೆ ಆ ಸಮಯದಲ್ಲಿ ಸಹಕಾರ ನೀಡಿದ ಸಂತೋಷ್ ಪಣಪಿಲ ಹಾಗೂ ಶೋಭಾ ಸುರೇಶ್ ಇವರನ್ನು ಅಭಿನಂದಿಸಲಾಯಿತು.
ಈ ವರ್ಷ ಯುವಸ್ಪಂದನ ಸೇವಾ ಯೋಜನೆಯ ವಿದ್ಯಾರ್ಥಿ ವೇತನಕ್ಕೆ 60ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ಸದ್ಯದಲ್ಲಿಯೇ ಯುವವಾಹಿನಿಯ ತಂಡ ವಿದ್ಯಾರ್ಥಿಗಳ ಮನೆಗೆ ತೆರಳಿ, ವಾಸ್ತವಾಂಶವನ್ನು ಅರಿತು ನೆರವು ನೀಡುವುದಾಗಿ ಪ್ರಕಟಿಸಲಾಯಿತು. ಮೂಡಬಿದ್ರೆ ಬಿಲ್ಲವ ಸಂಘದ ಅಧ್ಯಕ್ಷ ಸುರೇಶ್ ಕೆ ಪೂಜಾರಿ, ಅಶೋಕ್ .ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವ ಸ್ಪಂದನ ಯೋಜನೆಯ ಅಧ್ಯಕ್ಷ ನವಾನಂದ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.
ಡಾ. ಯೋಗೇಶ್ ಕೈರೋಡಿ ಮತ್ತು ಪ್ರಭಾಕರ್ ಚಾಮುಂಡಿಬೆಟ್ಟ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಗಿರೀಶ್ ಕೋಟ್ಯಾನ್ ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!