Yuvavahini

JUL 31, 2016 6.34 AM IST

ಯುವವಾಹಿನಿ ಗೌರವ ಅಭಿನಂದನೆ- 2016

ತುಳು ಜನಪದ ಅಧ್ಯಯನ ಪ್ರಬೃತಿ ಡಾ| ನವೀನ್ ಕುಮಾರ್ ಮರಿಕೆ

ತುಳುನಾಡಿನ ಪ್ರಾಚೀನ ಶ್ರೇಷ್ಠ ಪರಂಪರೆಯಲ್ಲಿ ನಡೆದು ಬಂದ ರೀತಿ ರಿವಾಜುಗಳು, ಸಾಂಸ್ಕೃತಿಕ ಹರಹುಗಳು ಮತ್ತದರ ಶ್ರೇಷ್ಠತೆ, ವೈಶಿಷ್ಠತೆ ನಮ್ಮಲ್ಲೇ ಹೆಚ್ಚಿನವರಿಗೆ ಅರಿವಿಲ್ಲದಿರಬಹುದು ಅದರಲ್ಲೂ ಜನಜೀವನದ ಮಧ್ಯೆ ಇದ್ದು ತಮ್ಮ ಅಸಾಧಾರಣ ಶಕ್ತಿ ಸಾಮರ್ಥ್ಯಗಳಿಂದ ಅಸಹಾಯಕರಿಗೆ ಸಹಾಯಕರಾಗಿ ದುಷ್ಟರಿಗೆ ಸಿಂಹಸ್ಚಪ್ನರಾಗಿ ಭಕ್ತ ಜನರಿಗೆ ರಕ್ಷಕರಾಗಿ ಇದ್ದ ಕೆಲವು ಶಕ್ತಿಗಳು ಪವಾಡ ಪುರುಷರಾಗಿ ಭೂತಾರಾಧನೆಯ ಕೇಂದ್ರ ಬಿಂದುಗಳಾಗಿ ಇಂದಿಗೂ ಪ್ರಸ್ತುತರಾಗಿದ್ದಾರೆ.

ಅಂದಿನ ಅತಿಶಯ ಶಕ್ತಿವಂತ ನಂಬಿದವರಿಗೆ ಇಂಬುಕೊಟ್ಟ ತುಳು ಇತಿಹಾಸದ ದೈವಗಳಲ್ಲಿ ಜುಮಾದಿ ಎಲ್ಲರಿಗೂ ತಿಳಿದಿರುವಂತಹ ಪವಾಡ ಶೀಲ ಭೂತ ಪ್ರಸ್ತುತ ಹಾಗೂ ಭವಿಷ್ಯತ್ ಎಲ್ಲವೂ ಹೀಗೆ ತುಳುನಾಡಿನ ಆದಿ ದೈವ ಜನಾದಿಯ ಬಗ್ಗೆ ಒಂದು ಆಳವಾದ ಸಾಂಸ್ಕೃತಿಕ ಅಧ್ಯಯನ ಮಾಡಿ 2014 ರಲ್ಲಿ ಕಣ್ಣೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದ ಡಾ| ನವೀನ್ ಕುಮಾರ್ ಮರಿಕೆಯವರು ಶೇಷ್ಠ ಸಾಧಕರಾಗಿ ಬಿಲ್ಲವ ಸಮುದಾಯದ ಹೆಮ್ಮೆಯ ಕುಡಿ ಎಂದೆನಿಸಿಕೊಂಡಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಂ.ಎ. ಸ್ನಾತಕೋತ್ತರ ಪದವಿಗಳಿಸಿ ದಶಕಕ್ಕೂ ಮಿಕ್ಕಿ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ, ಉಪನ್ಯಾಸಕರಾಗಿ ಮಾಡಿ ತನ್ನ ಅಧ್ಯಯನ ಶೀಲ ಬರವಣಿಗೆಯ ಮೂಲಕ ಎಲ್ಲರಿಗೂ ಪರಿಚಿತರಾಗಿರುವುದೇ ಅಲ್ಲದೆ ತನ್ನ ಸೃಜನ ಶೀಲ ಬರವಣಿಗೆಯಿಂದ ಸಾಹಿತ್ಯ ಸಂಸ್ಕೃತಿ ಆಸಕ್ತರ ಗಮನ ಸೆಳೆದಿದ್ದಾರೆ

ತುಳುನಾಡಿನಲ್ಲಿ ಕೊರಗತನಿಯ ಒಂದು ಅದ್ಯಯನ (2000), ’ಆಕಾಶದಲ್ಲಿ ಬೇಟೆ’ ಕಥಾ ಸಂಕಲನ 2001, ’ಗರುಡ ರೇಖೆ-2004 ಕಥಾಸಂಕಲನ’ ಮರಕೂರು ಜನನದ ದೈವಗಳು 2015 ಇವೆಲ್ಲಾ ಕೃತಿಗಳು ಇವರು ನಾಡಿನ ಸಂಸ್ಕೃತಿಗೆ ಸಲ್ಲಿಸಿದ ಅಕ್ಷರ ಗೌರವವೆನ್ನಬಹುದು ರಾಜ್ಯ ರಾಷ್ಟ್ರಮಟ್ಟದ ಅನೇಕ ಕಾರ್ಯಗಾರ, ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ, ’ಕತ್ತಲಿನಿಂದ’ ಕೃತಿಗೆ ತುಳು ಸಾಹಿತ್ಯ ಅಕಾಡಮಿ ಪುಸ್ತಕ ಬಹುಮಾನ 2016 ಪ್ರಶಸ್ತಿ, ಕರಾವಳಿಯ ಅನೇಕ ಸಂಘ ಸಂಸ್ಥೆಗಳಲ್ಲಿ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಕಾಶವಾಣಿಯಲ್ಲಿ ತುಳು, ವೈಚಾರಿಕ ಭಾಷಣಗಾರರಾಗಿ ಶೇಷ್ಠ ಸಾಧನೆ ಮಾಡಿದ ಡಾ| ನವೀನ್ ಕುಮಾರ್ ಮರಿಕೆಯವರು ಬಿಲ್ಲವ ಸಮುದಾಯದ ಅಭಿಮಾನದ ಗೌರವಕ್ಕೆ ಪಾತ್ರರಾಗಿದ್ದಾರೆ ಅವರಿಗೆ ಯುವವಾಹಿನಿಯ ಗೌರವ ಅಭಿನಂದನೆಗಳು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!