Yuvavahini

JUL 10, 2024 8.45 AM IST

ಯುವವಾಹಿನಿ(ರಿ.) ಕೂಳೂರು ಘಟಕ

ಪರಿಸರ ಸಂರಕ್ಷಣೆಯ ಮೊದಲ ಹೆಜ್ಜೆ ಮನೆಯಿಂದಲೇ

ಮಂಗಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 10-07-2024 ಬುಧವಾರದಂದು ಪ್ರಕೃತಿ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಮತ್ತು ಹೆತ್ತವರ ಪಾತ್ರ ಎನ್ನುವ ವಿಚಾರದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ, ನಮ್ಮ ಟಿ.ವಿ ಚಾನೆಲ್ ನಲ್ಲಿ ಪ್ರಸಾರವಾಗುವ ನಮ್ಮ ರುಚಿ ಕಾರ್ಯಕ್ರಮದ ನಿರೂಪಕಿ ಸುಕನ್ಯಾ ಇವರು ಆಗಮಿಸಿದ್ದರು. ಇವರನ್ನು ಕೋಶಾಧಿಕಾರಿ ವಿಘ್ನೇಶ್ ಹೂ ಕೊಟ್ಟು ಸಭೆಗೆ ಸ್ವಾಗತಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಇವರು ಪರಿಸರ ಸಂರಕ್ಷಣೆ ಎಂದರೆ ಕೇವಲ ಗಿಡ ಮರಗಳನ್ನು ನೆಟ್ಟು ಬೆಳೆಸುವುದಲ್ಲ. ನೆಟ್ಟ ಗಿಡಗಳನ್ನು ನೀರು ಹಾಕಿ ಪೋಷಿಸಬೇಕು. ಪರಿಸರ ಸಂರಕ್ಷಣೆಯ ಮೊದಲ ಹೆಜ್ಜೆ ಮನೆಯಿಂದಲೇ ಆರಂಭಿಸಬೇಕು. ನಮ್ಮ ಮನೆಯಲ್ಲಿ ಗಿಡ ನೆಟ್ಟು ಪೋಷಿಸಬೇಕು. ಗಿಡ ನೆಡಲು ಜಾಗ ಇಲ್ಲದವರು ಡ್ರಮ್ ಗಳಲ್ಲೂ ಬೆಳೆಸಬಹುದು. ನಮ್ಮನ್ನು ನೋಡಿ ಇತರರೂ ಕೂಡ ಪರಿಸರ ಸಂರಕ್ಷಣೆ ಮಾಡುವಂತಾಗಬೇಕು. ಮನಸ್ಸಿದ್ದರೆ ನಮಗೆ ಜಾಗ ಇಲ್ಲದಿದ್ದರೂ ಗಿಡ ಮರ ಬೆಳೆಸಬಹುದು. ಟೆರೇಸ್ ಗಾರ್ಡನ್ ಕೂಡಾ ಮಾಡಬಹುದು. ಆದಷ್ಟು ಸಾವಯವ ಆಹಾರ ಬೆಳೆಸಬೇಕು. ನಮ್ಮ ಮನೆಯ ಸುತ್ತಮುತ್ತ ಪರಿಸರವನ್ನು ಶುಚಿತ್ವಗೊಳಿಸುವುದು.

ಹೊರಗಡೆ ಹೋದಾಗ ಕಸವನ್ನು ಎಲ್ಲೆಂದರಲ್ಲಿ ಹಾಕದೆ ಅದನ್ನು ಕಸದ ಡಬ್ಬಿಯಲ್ಲಿಯೇ ಹಾಕುವುದು. ಇದು ನಾನು ನನ್ನ ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡಿರುವೆ. ನಮ್ಮ ಕೈಲಾದ ಸಣ್ಣ ಸಣ್ಣ ಸೇವೆಯನ್ನು ಸಮಾಜಕ್ಕೆ ಪ್ರಕೃತಿಗೆ ಕೊಡುವ ಮೂಲಕ ನಾವು ಯಾವ ರೀತಿ ಪರಿಸರವನ್ನು ರಕ್ಷಣೆ ಮಾಡಬಹುದು ತಿಳಿಸಿದ ಸುಕನ್ಯಾ ಇವರನ್ನು ಮಾಜಿ ಅಧ್ಯಕ್ಷರುಗಳು ಜೊತೆ ಸೇರಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಸಸಿ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಂಚಾಲಕರಾದ ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾದ ಮಧುಶ್ರಿ ಪ್ರಶಾಂತ್ ಸಂಪನ್ಮೂಲ ವ್ಯಕ್ತಿಯವರ ಪರಿಚಯವನ್ನು ಸಭೆಯ ಮುಂದೆ ಇಟ್ಟರು. ಈ ಸಂದರ್ಭ ಘಟಕದ ಅಧ್ಯಕ್ಷರಾದ ಇಂದಿರಾ ಸುರೇಶ್, ನಿಕಟ ಪೂರ್ವ ಅಧ್ಯಕ್ಷರಾದ ಯಶವಂತ್ ಪೂಜಾರಿ, ಎರಡನೇ ಉಪಾಧ್ಯಕ್ಷರಾದ ಗೀತಾ ವಸಂತ್, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ನಯನ ರಮೇಶ್, ದೀಕ್ಷಿತ್ ಸಿ ಎಸ್,ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸರಸ್ವತಿ ಎಸ್. ಕೆ. , ಕಾರ್ಯದರ್ಶಿ ನಯನ ಕೋಟ್ಯಾನ್, ಜೊತೆ ಕಾರ್ಯದರ್ಶಿ ಕೀರ್ತನ , ಕೋಶಾಧಿಕಾರಿ ವಿಘ್ನೇಶ್, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!