Yuvavahini

AUG 25, 2024 3.03 PM IST

ಯುವವಾಹಿನಿ (ರಿ) ಕೆಂಜಾರು - ಕರಂಬಾರು ಘಟಕ

ಕೃಷ್ಣ ವೇಷ ಸ್ಪರ್ಧೆ

ಕೆಂಜಾರು: ಯುವವಾಹಿನಿ (ರಿ ) ಕೆಂಜಾರು – ಕರಂಬಾರು ಘಟಕದ ವತಿಯಿಂದ 6 ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ (ಮುದ್ದು ಕೃಷ್ಣ, ತುಂಟ ಕೃಷ್ಣ, ಬಾಲಕೃಷ್ಣ, ರಾಧಾ-ಕೃಷ್ಣ ಹಾಗೂ ಯಶೋಧ ಕೃಷ್ಣ) ಒಟ್ಟು 5 ವಿಭಾಗಗಳಲ್ಲಿ ಶ್ರೀ ದೇವಿ ಭಜನಾ ಮಂದಿರ ಕೆಂಜಾರು- ಕರಂಬಾರು ಇದರ ಹೊರಾಂಗಣದ ಮುಕ್ತ ವೇದಿಕೆಯಲ್ಲಿ 25-08-2024 ರಂದು ಜರಗಿತು.

ಬೆಳಿಗ್ಗೆ 9.30 ಕ್ಕೆ ಶ್ರೀ ದೇವಿಗೆ ಪೂಜೆ ಸಲ್ಲಿಸಿ, ಉದ್ಘಾಟನಾ ಸಭಾ ಕಾರ್ಯಕ್ರಮ ಜರಗಿತು. ಘಟಕದ ಅಧ್ಯಕ್ಷ ವಿನೋದ್ ಕುಮಾರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕರಂಬಾರು ಕೋರ್ದಬ್ಬು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಘಟಕದ ಹಿರಿಯ ಮಾರ್ಗದರ್ಶಕರೂ ಆದ ಜಗನ್ನಾಥ ಸಾಲಿಯಾನ್ ಉದ್ಘಾಟಿಸಿದರು. ಬಜಪೆ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಇದರ ಉಪಾಧ್ಯಕ್ಷರಾದ ಶೇಖರ್ ಪೂಜಾರಿ ಕರಂಬಾರು, ಶ್ರೀ ದೇವಿ ಭಜನಾ ಮಂದಿರದ ಮಾಜಿ ಅಧ್ಯಕ್ಷರಾದ ಶೇಖರ್ ಬಂಗೇರ, ಕಾರ್ಯದರ್ಶಿ ಲೋಕೇಶ್ ಕುಂದರ್ , ಕಲೆ- ಸಾಂಸ್ಕೃತಿಕ – ಸಾಹಿತ್ಯ ನಿರ್ದೇಶಕಿ ಕುಮಾರಿ ತೃಪ್ತಿ, ಶ್ರೀಮತಿ ಶಕುಂತಲಾ, ಕಾರ್ಯದರ್ಶಿ ಮಿಥುನ್ ಕುಮಾರ್ ವೇದಿಕೆಯಲ್ಲಿದ್ದರು.

ಅಧ್ಯಕ್ಷರು ಬಂದಂತಹ ಅತಿಥಿಗಣ್ಯರನ್ನು ಸ್ವಾಗತಿಸಿದರು. ಉದ್ಘಾಟನಾ ಭಾಷಣ ಮಾಡಿದ ಜಗನ್ನಾಥ ಸಾಲಿಯಾನ್ ಅವರು ಯುವವಾಹಿನಿ ಕೆಂಜಾರು ಘಟಕವು ಹತ್ತು ಹಲವು ಸಮಾಜಮುಖಿ ಸೇವೆಗಳಲ್ಲಿ ತೊಡಗಿ ಇದೀಗ ಪುಟಾಣಿ ಮಕ್ಕಳಿಗೆ 6 ನೇ ಬಾರಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಸುತ್ತಿದ್ದು , ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಒಳ್ಳೆಯ ವೇದಿಕೆಯಾಗಿದೆ ಎಂದು ಶ್ಲಾಘಿಸಿದರು.

ತೀರ್ಪುಗಾರರಾಗಿ ನಮ್ಮ ಸಮಾಜದ ಶಿಕ್ಷಕಿಯಾಗಿರುವ ಶ್ರೀಮತಿ ನವೀನ ಕುಮಾರಿ, ಹಾಗೂ ಇನ್ನೋರ್ವ ಸಾಧಕಿ ಉಪನ್ಯಾಸಕಿ ಡಾ.ಶಿಲ್ಪ ದಿನೇಶ್ ಉತ್ತಮ ತೀರ್ಪು ನೀಡಿದರು. ಅವರು ತಮ್ಮ ಜೀವನದಲ್ಲಿ ಮಾಡಿದ ಸಾಧನೆಗೆ ಘಟಕದ ಪರವಾಗಿ ಇಬ್ಬರೂ ಸಾಧಕಿಯರನ್ನು ಗೌರವಿಸಿ ಸನ್ಮಾನಿಸಲಾಯಿತು.

ಒಟ್ಟು 5 ವಿಭಾಗದಲ್ಲಿ ಸುಮಾರು 44 ಸ್ಪರ್ಧಾಳುಗಳು ಭಾಗವಹಿಸಿದ್ದರು. ಪ್ರತಿ ವಿಭಾಗದಲ್ಲಿಯೂ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಯಿತು. ಸಮಾರೋಪ ಸಮಾರಂಭದಲ್ಲಿ ಹಿರಿಯ ಭಜನಾ ಗುರುಗಳಾದ ಯಾದವ ಸುವರ್ಣ ಬಜ್ಪೆ , ವೇದಿಕೆಯಲ್ಲಿದ್ದ ಗಣ್ಯರು ವಿಜೇತರಿಗೆ ಪ್ರಶಸ್ತಿ ವಿತರಿಸಿದರು.

ಕಾರ್ಯದರ್ಶಿ ಮಿಥುನ್ ಕುಮಾರ್ ಅವರು ವಂದನಾರ್ಪಣೆಗೈದರು. ಘಟಕದ ಮಾಜಿ ಅಧ್ಯಕ್ಷರಾದ ಗಣೇಶ್ ಅರ್ಬಿ ಇವರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!