Yuvavahini

AUG 22, 2024 3.14 AM IST

ಯುವವಾಹಿನಿ (ರಿ) ಶಕ್ತಿನಗರ ಘಟಕ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಶಕ್ತಿನಗರ : ದಿನಾಂಕ : 22-08-2024 ರಂದು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕುಂಟಲ್ಪಾಡಿ ಇಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಬಹಳ ವಿಜೃಂಭಣೆಯಿಂದ ನಡೆಸಲಾಯಿತು.

ಪೂಜೆಯ ಮುಂದಾಳತ್ವವನ್ನು ಯುವ ವಾಹಿನಿ (ರಿ) ಶಕ್ತಿನಗರ ಘಟಕದ ನಾರಾಯಣ ಗುರುತತ್ವ ಪ್ರಚಾರಕರಾದ ಶ್ರೀ ಯೋಗೀಶ್ ಸುವರ್ಣ ಇವರು ವಹಿಸಿಕೊಂಡಿದ್ದರು.

ಮೊದಲಿಗೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕುಂಟಾಲ್ಪಾಡಿ ಇಲ್ಲಿ ಮುಂಜಾನೆ ಗಣಹೋಮವನ್ನು ನಡೆಸಿ ಮಂದಿರವನ್ನು ಶುದ್ಧೀಕರಿಸಲಾಯಿತು. ನಂತರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿಯನ್ನು ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಇವರ ಮನೆಯಲ್ಲಿ ಪ್ರತಿಷ್ಠಾಪಿಸಲಾಯಿತು. ಮಧ್ಯಾಹ್ನ 2 ಗಂಟೆಯಿಂದ ಭಜನೆ ಸತ್ಸಂಗ ಕಾರ್ಯಕ್ರಮ ನಡೆಯಿತು.

ನಾಲ್ಕು ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೂಜೆಯನ್ನು ನಡೆಸಿ ಬಂದಂತಹ ಎಲ್ಲ ಭಕ್ತರಿಗೂ ಪ್ರಸಾದವನ್ನು ವಿತರಿಸಿ ನಂತರ ಅಲ್ಲಿಂದ ಗುರುಗಳ ಮೂರ್ತಿಯನ್ನು ಟ್ಯಾಬ್ಲೋ ಮುಖಾಂತರ ಶಕ್ತಿನಗರ ಮಹಾಕಾಳಿ ರಸ್ತೆಗೆ ಕೊಂಡೊಯ್ದು ನಂತರ ಅಲ್ಲಿ ಕಾಲ್ನಡಿಗೆಯಿಂದ ಬೃಹತ್ ಶೋಭಾ ಯಾತ್ರೆಯನ್ನು ನಡೆಸಲಾಯಿತು.

ಈ ಶೋಭಾ ಯಾತ್ರೆಯಲ್ಲಿ 40 ಮಕ್ಕಳ ಕುಣಿತ ಭಜನೆ ತಂಡ ಹಾಗೂ ಚಂಡೆ ತಾಳದೊಂದಿಗೆ ಬಹಳ ಅದ್ದೂರಿಯಿಂದ ಶೋಭಾ ಯಾತ್ರೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ನಮ್ಮೊಂದಿಗೆ ಶೋಭಾ ಯಾತ್ರೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ ಕಾಮತ್ ಹಾಗೂ ಪದವು ವಾರ್ಡ್ ಕಾರ್ಪೊರೇಟರ್ ಆದ ಶ್ರೀ ಕಿಶೋರ್ ಕೊಟ್ಟಾರಿ ಹಾಗೂ ಶಕ್ತಿನಗರ ವಾರ್ಡ್ ಕಾರ್ಪೊರೇಟರ್ ಆದ ವನಿತಾ ಪ್ರಸಾದ್ ಮತ್ತು ಗುಂಡಲಿಕೆ ವಾರ್ಡ್ ಕಾರ್ಪೊರೇಟರ್ ಆದ ಶ್ರೀಮತಿ ಶಕೀಲಾ ಕಾವಾ ಹಾಗೂ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್.ಕೆ.ಪೂಜಾರಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾದ ಶ್ರೀ ದೀಕ್ಷಿತ್ ಸಿ.ಎಸ್ ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರಕರಾದ ಮೋಹನ್ ಮಾಡೂರ್ ಪಾಲ್ಗೊಂಡಿದ್ದರು.

ಶೋಭಾ ಯಾತ್ರೆಯು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿ ಇಲ್ಲಿ ಆಗಮಿಸಿದ ನಂತರ ಮಹಾಮಂಗಳಾರತಿಯನ್ನು ನಡೆಸಿ ಬಂದಂತಹ ಅತಿಥಿಗಳಿಗೆ ಗುರುಗಳ ಪ್ರಸಾದವನ್ನು ನೀಡಿ ಯುವವಾಹಿನಿ (ರಿ) ಶಕ್ತಿನಗರ ಘಟಕದ ಅಧ್ಯಕ್ಷರಾದ ಗಣೇಶ್ ಕೆ ಮಹಾಕಾಳಿಯವರು ಶಾಲು ಹೊದಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಗಣೇಶ್ ಕೆ ಮಹಾಕಾಳಿ, ಒಂದನೇ ಉಪಾಧ್ಯಕ್ಷರಾದ ತುಕಾರಾಂ ಕುಂಟಲ್ಪಾಡಿ, ಎರಡನೇ ಉಪಾಧ್ಯಕ್ಷರಾದ ಸುಜಾತ ನವೀನ್ , ಕಾರ್ಯದರ್ಶಿಗಳಾದ ಅಕ್ಷತಾ ಚರಣ್ ಕೋಶಾಧಿಕಾರಿಗಳಾದ ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರುಗಳಾದ ಶ್ರೀನಿವಾಸ್ ಪೂಜಾರಿ, ಭಾರತಿ ಗಣೇಶ್, ಜಯರಾಮ್ ಪೂಜಾರಿ, ಉಪಸ್ಥಿತರಿದ್ದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ಗುರು ಪೂಜೆಯಲ್ಲಿ ಸುಮಾರು 400ಕ್ಕೂ ಹೆಚ್ಚು ಜನರು ಪಾಲ್ಗೊಂಡು ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದವನ್ನು ಪಡೆದು ಅನ್ನ ಪ್ರಸಾದವನ್ನು ಸ್ವೀಕರಿಸಿ ಗುರುಗಳ ಕೃಪೆಗೆ ಪಾತ್ರರಾದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!