Yuvavahini

SEP 11, 2024 5.16 AM IST

ಯುವವಾಹಿನಿ (ರಿ) ಮೂಡುಬಿದಿರೆ ಘಟಕ

ಮದ್ಯಮುಕ್ತ ಮೆಹೆಂದಿ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಯುವವಾಹಿನಿ ತಂಡ

ಮೂಡುಬಿದಿರೆ : ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯ ಉದ್ದೇಶವನ್ನು ಇಟ್ಟುಕೊಂಡ ಯುವವಾಹಿನಿ (ರಿ.) ಮೂಡುಬಿದರೆ ಘಟಕವು ಪ್ರಾರಂಭಿಸಿದ ಮದ್ಯ ಮುಕ್ತ ಮೆಹಂದಿ ಕಾರ್ಯಕ್ರಮದ ಅಡಿಯಲ್ಲಿ ಯುವವಾಹಿನಿಯ 34 ನೇ ಘಟಕ ಗ್ರಾಮಚಾವಡಿ ಕೊಣಾಜೆ ಇದರ ಅಧ್ಯಕ್ಷರಾದ ಹರೀಶ್ ಪೂಜಾರಿ ಇವರ ಧರ್ಮಪತ್ನಿಯ ತಮ್ಮನಾದ ಪಾಲಡ್ಕದ ಪೂಜಾರಿಬೆಟ್ಟು ನಿವಾಸಿ ಗ್ರಾಮಚಾವಡಿ ಘಟಕದ ಸದಸ್ಯ ಸುಕೇಶ್ ಪೂಜಾರಿ ಇವರು ತನ್ನ ಮದುವೆಯ ಮೆಹಂದಿ ಕಾರ್ಯಕ್ರಮವನ್ನು ತನ್ನ ಹುಟ್ಟೂರಾದ ಪಾಲಡ್ಕದ (ಮೂಡುಬಿದಿರೆ) ಮನೆಯಲ್ಲಿ ಬಹಳ ಸಾಂಪ್ರದಾಯಕವಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರು ಮತ್ತು ಪ್ರಸ್ತುತ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ. ಹಾಗೂ ಸಾಮಾಜಿಕ ಜಾಲತಾಣ ಸಂಪಾದಕರಾದ ನವಾನಂದ ಮೂಡುಬಿದರೆ ಗ್ರಾಮಚಾವಡಿ ಘಟಕದ ಅಧ್ಯಕ್ಷ ಹರೀಶ್ ಪೂಜಾರಿ, ಉಪ್ಪಿನಂಗಡಿ ಘಟಕದ ನಿಕಟಪೂರ್ವ ಅಧ್ಯಕ್ಷರು ಮನೋಹರ್ ಪೂಜಾರಿ, ಘಟಕದ ಕಾರ್ಯದರ್ಶಿ ಗಿರೀಶ್ ಕೋಟ್ಯಾನ್ ಹಾಗೂ ಜೊತೆ ಕಾರ್ಯದರ್ಶಿ ವಿನೀತ್ ಕೋಟೆಬಾಗಿಲ್, ಸದಸ್ಯ ಹರೀಶ್ ಕುಶಲ ಪಾಲಡ್ಕ ಇವರೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ. ಇವರು ಈ ಸಂದರ್ಭದಲ್ಲಿ ಮದ್ಯಮುಕ್ತ ಮೆಹಂದಿ ಕಾರ್ಯಕ್ರಮದ ಉದ್ದೇಶ ಏನು ಮತ್ತು ಮದ್ಯಯುಕ್ತ ಮೆಹೆಂದಿ ಅದರಿಂದ ಸಮಾಜದಲ್ಲಿ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ ಶುಭ ಹಾರೈಸಿದರು. ಕಾರ್ಯದರ್ಶಿ ಗಿರೀಶ್ ಕೋಟ್ಯಾನ್ ಇವರು ಮದುಮಗ ಸುಕೇಶ್ ಪೂಜಾರಿ ಇವರಿಗೆ ನಾರಾಯಣ ಗುರುಗಳ (ಭಾವಚಿತ್ರ ) ಫೋಟೋ ನೀಡಿ ಶುಭ ಹಾರೈಸಿದರು.
ಗ್ರಾಮಚವಾಡಿ ಘಟಕದ ಸದಸ್ಯೆ ಶ್ರೀಮತಿ ಸುರೇಖಾ ಹರೀಶ್ ಪೂಜಾರಿ ಇವರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!