Yuvavahini

JUL 31, 2016 11.54 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು * ಯುವವಾಹಿನಿ(ರಿ) ಉಡುಪಿ ಘಟಕ

ಯುವವಾಹಿನಿ ಅಕ್ಷರ ಪುರಸ್ಕಾರ ; ಸಾಟಿ ಇಲ್ಲದ ಸಾಧನೆಯ ಕು| ಏಳ್ಮುಡಿ ವರ್ಷಾ ಪಿ.

IAS ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು, IISC ಬೆಂಗಳೂರಿನಲ್ಲಿ ಕಲಿಯುವುದು ಇದು ಹೆಚ್ಚಿನ ಜನರಿಗೆ ನನಸಾಗದ ಕನಸು. ಯುವ ಜನರಿಗಂತೂ ಇದು ಕನಸಿನ ಲೋಕದ ಸಾಧನೆ. ಸುಲಭದಲ್ಲಿ ನಿಲುಕುವಂಥದಲ್ಲ. ಆದರೆ ಇಂದು ಬಿಲ್ಲವ ಸಮುದಾಯ ಇಡೀ ಅಭಿಮಾನಪಡತಕ್ಕ ಸಾಧನೆಯ ಹಾದಿಯಲ್ಲಿದೆ. ಬಿಲ್ಲವ ಕುವರಿ ಪುತ್ತೂರಿನ ಏಳ್ಮುಡಿ ಮನೆ ಶ್ರೀ ರಮೇಶ್ ಪೂಜಾರಿ ಶ್ರೀಮತಿ ಯಶೋಧ ದಂಪತಿಗಳ ಸುಪುತ್ರಿ ಕು| ವರ್ಷಾ ಪಿ.

ಪಿ.ಯು.ಸಿಯಲ್ಲಿ ಎಲ್ಲ 4 ಐಚ್ಚಿಕ ವಿಷಯಗಳಲ್ಲಿ 100% (ಒಟ್ಟು 600/591) ಅಂಕ ಗಳಿಸಿ ಕರ್ನಾಟಕದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಇಂಜಿನಿಯರಿಂಗ್ ವಿಭಾಗಕ್ಕೆ ರಾಜ್ಯಕ್ಕೆ 244ನೇ ರ್‍ಯಾಂಕ್, ವೈದ್ಯಕೀಯ ವಿಭಾಗದಲ್ಲಿ ರಾಜ್ಯಕ್ಕೆ 202ನೆ ರ್‍ಯಾಂಕ್ ಗಳಿಸಿ, ISMHನಲ್ಲಿ 96ನೇ ರ್‍ಯಾಂಕ್, B.Sc ಕೃಷಿಯಲ್ಲಿ 41ನೇ ರ್‍ಯಾಂಕ್ ಪಡೆದ ಮಹೋನ್ನತ ಸಾಧನೆ ಮೆರೆದ ವರ್ಷ ನಮ್ಮ ಸಮುದಾಯಕ್ಕೆ ಇಡೀ ಅವಿಭಜಿತ ದ.ಕ ಜಿಲ್ಲೆಗೆ ಹರ್ಷಧಾರೆಯ ಸಿಂಚನವನ್ನು, ಸಂತಸದ ಸಂಚಲನವನ್ನುಂಟು ಮಾಡಿದ್ದಾರೆ.

ಒಂದೋ ಐ.ಎ.ಎಸ್ ಅಧಿಕಾರಿಯಾಗಬೇಕು ಇಲ್ಲವೇ Indian Institute of Scienceನಲ್ಲಿ ವಿಜ್ಞಾನಿಯಾಗಬೇಕೆಂಬ ಹಂಬಲದಿಂದ ಇವರು ಸದ್ಯಕ್ಕೆ ಬೆಂಗಳೂರಿನ Indian Institute of Scienceನಲ್ಲಿ ಕಲಿಯುತ್ತಿದ್ದಾರೆ. ಓIಖಿಏ,NITK, BMS(Bangalore)ನಂತಹ ಪ್ರತಿಷ್ಠಿತ ರಾಷ್ಟ್ರಮಟ್ಟದ ವೃತ್ತಿ ಶಿಕ್ಷಣದ ಸಂಸ್ಥೆಗಳಿಗೆ ಅರ್ಹತೆ ಪಡೆದಿದ್ದರೂ IISCಯಲ್ಲಿ ವಿದ್ಯಾಭ್ಯಾಸ ಮಂದುವರಿಸಿ ಅದರೊಂದಿಗೆ ತನ್ನ ಕನಸಿನ IAS ಹುದ್ದೆಗೆ ಬೇಕಾದ ತಯಾರಿಯನ್ನೂ ಮಾಡಿಕೊಂಡಿದ್ದಾರೆ ಕು| ವರ್ಷಾ ಪಿ.

ಅಖಿಲ ಭಾರತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ KVPYಯಲ್ಲಿ ರಾಷ್ಟ್ರಮಟ್ಟದಲ್ಲಿ 577ನೇ ರ್‍ಯಾಂಕ್ ಗಳಿಸಿದ ವರ್ಷಾ ಅವರು ಭಾರತೀಯ ವಿಜ್ಞಾನ ಸಂಸ್ಥೆ- Indian Institute of Science(TATA Institute)ನಲ್ಲಿ ವ್ಯಾಸಂಗಕ್ಕೆ ಅರ್ಹತೆ ಪಡೆದು ಇದೀಗ ಅಲ್ಲೇ ತನ್ನ ಸಾಧನೆಯನ್ನು ಮುಂದುವರೆಸಿದ್ದಾರೆ.

ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಉಳ್ಳವರಿಗೆ ಕು| ವರ್ಷಾ ಅವರು 1 ರಿಂದ 7ನೇ ತರಗತಿಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಎಂಬುದು ಗಮನಿಸತಕ್ಕ ವಿಚಾರ. SSLCಯಲ್ಲಿ 625 ಕ್ಕೆ 614 ಅಂಕ ಗಳಿಸಿ ತಾಲೂಕಿನಲ್ಲಿ 2 ವರ್ಷದ ಹಿಂದೆ ಪ್ರಥಮ ಸ್ಥಾನವನ್ನು ಕು| ವರ್ಷಾರವರು ಗಳಿಸಿರುವುದನ್ನು ಇಲ್ಲಿ ಗಮನಿಸಬಹುದು.

ಮುಂದಿನ ದಿನಗಳಲ್ಲಿ ಕು| ವರ್ಷಾ ಅವರ ಸಾಧನೆ ಇದೇ ರೀತಿ ಮುಂದುವರಿಯಲಿ, ಆಕೆಯ IAS ಅಧಿಕಾರಿಯಾಗುವ ಕನಸು ನನಸಾಗಲಿ, ಆ ಮೂಲಕ ಬಿಲ್ಲವ ಸಮುದಾಯಕ್ಕೆ ಇನ್ನೊರ್ವ IAS ಅಧಿಕಾರಿ ಸಿಗಲಿ ಎಂಬುದು ಯುವವಾಹಿನಿಯ ಎಲ್ಲ ಸದಸ್ಯರ, ಪದಾಧಿಕಾರಿಗಳ ಆಶಯ. ಅದರೊಂದಿಗೆ ವಿಶೇಷ ಅಕ್ಷರ ಪುರಸ್ಕಾರದೊಂದಿಗೆ ಅಭಿನಂದನೆ.

All the best Varsha, we are proud of your achievements.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!