Yuvavahini

SEP 15, 2024 5.52 AM IST

ಯುವವಾಹಿನಿ (ರಿ) ಕೊಲ್ಯ ಘಟಕದಿಂದ ಕೊಳಕೆ ಗದ್ದೆಯಲ್ಲಿ ಭತ್ತ ನಾಟಿ....

ಓ ಬೇಲೆ ಓ ಬೇಲೆ

ಪಾಪುದಡಿ : ಸುಂದರ ಹಚ್ಚ ಹಸಿರ ತೋಟಗಳ ನಡುವೆ ಯುವವಾಹಿನಿ (ರಿ) ಕೊಲ್ಯ ಘಟಕದ ಕೋಶಾಧಿಕಾರಿ ಯುವ ರೈತ ಲತೀಶ್ ಪಾಪುದಡಿ ಇವರ ಕೊಳಕೆ ಗದ್ದೆಯಲ್ಲಿ ದಿನಾಂಕ 15/09/2024 ರಂದು ಯುವವಾಹಿನಿ ಕೊಲ್ಯ ಘಟಕದ ಸದಸ್ಯರಿಂದ ಭತ್ತ ನಾಟಿ ಕೆಲಸ ನಡೆಯಿತು.

ಹಿರಿಯ ಮಹಿಳೆಯರು ಓ ಬೇಲೆ ಬೇಲೆ ಹಾಡುತ್ತಾ ಘಟಕದ ಸದಸ್ಯರಿಗೆ ಸ್ಫೂರ್ತಿ ನೀಡುತ್ತಾ ನಾಟಿ ಮಾಡುವ ಕ್ರಮವನ್ನು ವಿವರಿಸಿದರು. ಅದರಂತೆ ಎಲ್ಲರೂ ಗದ್ದೆಯಲ್ಲಿ ಭತ್ತದ ನೇಜಿ ನಾಟಿ ಮಾಡುತ್ತಾ ಕೃಷಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ಕೊಳಕೆ ನಾಟಿ ಕೆಲಸದಲ್ಲಿ ವಿಶೇಷ ಅತಿಥಿಗಳಾಗಿ ಡೆನ್ಮಾರ್ಕ್ ದೇಶದ ವಿದ್ಯಾರ್ಥಿಗಳು ನೇಜಿ ನಾಟಿಯಲ್ಲಿ ಕೈ ಜೋಡಿಸಿ ಕರಾವಳಿ ಕೃಷಿ ಕೆಲಸ, ಬತ್ತದ ನಾಟಿ ಕೆಲಸ, ರೈತರ ಕೆಲಸಗಳ ಬಗ್ಗೆ ವಿಶೇಷ ಮಾಹಿತಿ ಪಡೆದರು.

ಯುವವಾಹಿನಿ ಘಟಕದ ಸದಸ್ಯರೊಂದಿಗೆ ಉತ್ಸಾಹದಿಂದ ಭಾಗವಹಿಸಿ ನಾಟಿ ಕೆಲಸದಲ್ಲಿ ತಮ್ಮನ್ನು ಸಂತೋಷವಾಗಿ ತೊಡಗಿಸಿಕೊಂಡರು. ಬಿಸಿಲ ನಡುವೆ ಕೆಸರು ಗದ್ದೆಯಲ್ಲಿ ಚಿಕ್ಕ ಮಕ್ಕಳು ನಾಟಿ ಮಾಡುತ್ತ ಕೃಷಿ ಕೆಲಸದ ಮಹತ್ವ ತಿಳಿಯುತ್ತಾ ಸಂತೋಷ ಪಟ್ಟರು.

ಹಿರಿಯ ರೈತರು ರಾಮಣ್ಣ ಪಾಪುದಡಿ ಕೃಷಿಗಾರಿಕೆ ಮಹತ್ವದ ಬಗ್ಗೆ ಸದಸ್ಯರಿಗೆ ತಿಳಿ ಹೇಳಿದರು. ಭತ್ತದ ನೇಜಿ ನಾಟಿ ಮಾಡಿದ ಸದಸ್ಯರು ಕೃಷಿ ಕೆಲಸದ ಸಂತೃಪ್ತಿಯೊಂದಿಗೆ ದಿನ ಕಳೆದರು.

ಲತೀಶ್ ಪಾಪುದಡಿ ಕುಟುಂಬದವರು ಸದಸ್ಯರಿಗೆ ತಿಂಡಿ, ಊಟದ ವ್ಯವಸ್ಥೆ ಮಾಡಿದರು.

ಯುವವಾಹಿನಿ ಕೊಲ್ಯ ಘಟಕದ ಸದಸ್ಯರಿಗೆ ಭತ್ತದ ನಾಟಿಯ ಅನುಭವದ ಅವಕಾಶ ಕಲ್ಪಿಸಿದ ಪಾಪುದಡಿ ಕುಟುಂಬದವರಿಗೆ ಘಟಕದ ದ್ವಿತೀಯ ಉಪಾಧ್ಯಕ್ಷರು ಜೀವನ್ ಕೊಲ್ಯ ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!