Yuvavahini

SEP 05, 2024 1.56 PM IST

ಯುವವಾಹಿನಿ (ರಿ) ಕೊಣಾಜೆ ಗ್ರಾಮಚಾವಡಿ - ಶಿಕ್ಷಕರ ದಿನಾಚರಣೆ

ಶಿಕ್ಷಣ – ಶಿಕ್ಷಕರ ವೃತ್ತಿಯ ಬಗ್ಗೆಯೂ ಒಲವು ಹೆಚ್ಚಾಗಲಿ: ಗಂಗಾಧರ ಪೂಜಾರಿ

ಕೊಣಾಜೆ : ಪ್ರಸ್ತುತ ಕಾಲದಲ್ಲಿ ತಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಆಗಬೇಕೆಂದು ಬಯಸುವವರೇ ಹೆಚ್ಚು. ಆದರೆ ಶಿಕ್ಷಕರಾಗಬೇಕೆನ್ನುವವರು ಬಹಳ ಕಡಿಮೆ. ಎಲ್ಲಾ ವೃತ್ತಿಯ ಮೂಲ ಬೇರು ಆಗಿರುವ ಶಿಕ್ಷಕ ವೃತ್ತಿಯೇ ಅತ್ಯಂತ ಶ್ರೇಷ್ಠವಾದುದು. ಇಂತಹ ಶ್ರೇಷ್ಠ ವೃತ್ತಿಯ ಬಗ್ಗೆಯೂ ಹೆಚ್ಚು ಒಲವು ಅಗತ್ಯ ಎಂದು ನಿವೃತ್ತ ಶಿಕ್ಷಕರಾದ ಗಂಗಾಧರ ಪೂಜಾರಿ ಅವರು ಹೇಳಿದರು.‌

ಅವರು ಕೊಣಾಜೆ ಗ್ರಾಮ ಚಾವಡಿಯ ಯುವವಾಹಿನಿ (ರಿ) ಘಟಕದ ವತಿಯಿಂದ ಗುರುವಾರ 05-09-2024 ರಂದು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು.

ಮನೆಯೇ ಮೊದಲ ಪಾಠ ಶಾಲೆ. ಹಿಂದೆ ಕೂಡು ಕುಟುಂಬದಲ್ಲಿ ಹಿರಿಯರಿಂದ ಕಿರಿಯರಿಗೆ ಜೀವನದ ಶಿಕ್ಷಣದ ಅನುಭವ ಸಿಗುತ್ತಿದ್ದು, ಆದರೆ ಇಂದು ವಿಭಕ್ತ ಕುಟುಂಬದಿಂದ ಇಂತಹ ಅನುಭವ ದೂರವಾಗಿದೆ. ಯಾವುದೇ ಗುರಿಯನ್ನು ತಲುಪಬೇಕಾದರೆ ಗುರುವಿನ ಮಾರ್ಗದರ್ಶನ ಅತೀ ಅಗತ್ಯ ಎಂದರು.

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರು ರವೀಂದ್ರ ಬಂಗೇರ ಮುಖ್ಯ ಅತಿಥಿಯಾಗಿ ಮಾತನಾಡಿ, ಗುರುಗಳ ಮಾರ್ಗದರ್ಶನವಿಲ್ಲದೆ ನಾವು ಮುನ್ನಡೆಯಲು ಸಾಧ್ಯವಿಲ್ಲ. ಇಂತಹ ಗುರು ವೃತ್ತಿಯಲ್ಲಿರುವವರನ್ನು ಯುವವಾಹಿನಿ ಘಟಕವು ಗ್ರಾಮಚಾವಡಿಯಲ್ಲಿ ಅಭಿನಂದಿಸುವ ಕಾರ್ಯ ಮಾಡಿರುವುದು ಅಭಿನಂದನೀಯ ಎಂದರು.‌

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಗ್ರಾಮಚಾವಡಿ ಯುವವಾಹಿನಿ ಘಟಕದ ಅಧ್ಯಕ್ಷರು ಹರೀಶ್ ಪೂಜಾರಿ ಯುವವಾಹಿನಿ ಘಟಕದ ವತಿಯಿಂದ ಶಿಕ್ಷಕರನ್ನು ಗೌರವಿಸಲಾಗಿದೆ. ಮುಂದಿನ ದಿನಗಳಲ್ಲಿ ಘಟಕದ ವತಿಯಿಂದ ಅನೇಕ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಸುವರ್ಣ ,‌ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರು ನಾಗೇಶ್ ಅಮೀನ್ ಮುಲ್ಲಕಾಡು,‌ ಸಮಾಜ ಸೇವಾ ನಿರ್ದೇಶಕಿ ಬಬಿತಾ ಯಾದವ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿಕ್ಷಕರು ಸುನೀತಾ, ಸುರೇಖಾ ಹರೀಶ್ ಪೂಜಾರಿ, ಅನಿತಾ ಜಯಂತ್, ಡಾ.ಸಂಜಿತ್ ಎಸ್ ಅಂಚನ್ , ಸೌಮ್ಯ, ದಯಾವತಿ, ರೋಹಿತ್ ಪೂಜಾರಿ, ಗುರುರಾಜ್ ಪರಂಡೆ, ಅವರನ್ನು ಯುವವಾಹಿನಿ ಗ್ರಾಮಚಾವಡಿ ಘಟಕದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಸಮಾಜ ಸೇವಾ ನಿರ್ದೇಶಕಿ ಬಬಿತಾ ಸ್ವಾಗತಿಸಿದರು.

ಸಂಘಟನಾ‌ ಕಾರ್ಯದರ್ಶಿ ಸುರೇಶ್ ಪೂಜಾರಿ ವಂದಿಸಿದರು.

ಅಜಿತ್ ಹಾಗೂ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.‌

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!