Yuvavahini

SEP 08, 2024 2.07 PM IST

ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಯುವವಾಹಿನಿ (ರಿ) ಪಡುಬಿದ್ರಿ ಘಟಕದ ಪದಗ್ರಹಣ : ವಿದ್ಯಾರ್ಥಿವೇತನ ವಿತರಣೆ : ಸಾಧನಾ ಸನ್ಮಾನ

ಪಡುಬಿದ್ರಿ : ಅವಿಭಜಿತ ಜಿಲ್ಲೆಯಲ್ಲಿ ವಿದ್ಯೆ, ಉದ್ಯೋಗ, ಸಂಪರ್ಕದ ತತ್ವದಲ್ಲಿ ಆದರ್ಶತೆ ಮೆರೆದ ಸಂಸ್ಥೆ ಯುವವಾಹಿನಿ. ಈ ಸಂಘಟನೆ ತೆರೆಮರೆಯಲ್ಲಿ ಹಲವಾರು ಕಾರ್ಯಗಳನ್ನು ಮಾಡುತ್ತಿದೆ. ಯುವಕರು ಸಮಾಜದಲ್ಲಿ ತಪ್ಪು ದಾರಿಗೆ ಹೋಗದೆ ಸರಿ ದಾರಿಯಲ್ಲಿ ಸಾಗುವ ಪಥ ತೋರಿಸುವ ಸಂಸ್ಥೆಯಾಗಿದೆ ಎಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರು ವೈ. ಸುಧೀರ್ ಕುಮಾರ್ ನುಡಿದರು.

ಯುವವಾಹಿನಿ (ರಿ) ಪಡುಬಿದ್ರಿ ಘಟಕದ 2024-25ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು 08-09-2024 ರಂದು ಪಡುಬಿದ್ರಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದರು.

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ದ್ವಿತೀಯ ಉಪಾಧ್ಯಕ್ಷರು ಅಶೋಕ್ ಕುಮಾರ್ ಪಡ್ಪು ಪ್ರತಿಜ್ಞಾ ವಿಧಿ ಬೋಧಿಸಿದರು.

ಅಧಿಕಾರ ಹಸ್ತಾಂತರ :

ಘಟಕದ ಅಧ್ಯಕ್ಷರು ಅಶ್ವಥ್ ಎಸ್. ನಿಯೋಜಿತ ಅಧ್ಯಕ್ಷರು ಶಶಿಕಲಾ ಯಶೋಧ‌ರ್ ಮತ್ತು ಕಾರ್ಯದರ್ಶಿ ನಿಖಿಲ್ ಪೂಜಾರಿ ನಿಯೋಜಿತ ಕಾರ್ಯದರ್ಶಿ ಸುಜಾತ ಪ್ರಸಾದ್ ರವರಿಗೆ ಅಧಿಕಾರ ಹಸ್ತಾಂತರಿಸಿದರು.

ವಿದ್ಯಾರ್ಥಿವೇತನ/ಸಾಧನಾ ಸನ್ಮಾನ :

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 3ನೇ ರ‍್ಯಾಂಕ್, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸಮಥ್೯ ಆರ್ ಜೋಶಿ, ರಾಜ್ಯದಲ್ಲಿ 5ನೇ ರ‍್ಯಾಂಕ್ ಪಡೆದ ಚಿನ್ಮಯಿ ಪೈ, ಸ್ನಾತ್ತಕೋತ್ತರ ಆಯುರ್ವೇದ ವೈದ್ಯಕೀಯ ಶಿಕ್ಷಣದಲ್ಲಿ 6ನೇ ರ‍್ಯಾಂಕ್ ಗಳಿಸಿದ ಐಶ್ವರ್ಯ ಸಿ ಅಂಚನ್, ಜೇಸಿ ಸಾಧನಶ್ರೀ ಪ್ರಶಸ್ತಿ ಪುರಸ್ಕೃತ ಯಶೋದ, ಎಂಬಿಎ ಪದವಿ ಗಳಿಸಿದ ಪವಿತ್ರಾ, ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿ ತೇರ್ಗಡೆಯಾದವರನ್ನು ಸನ್ಮಾನಿಸಲಾಯಿತು. ಕಲಿಕಾ ಪ್ರೋತ್ಸಾಹಕ ವಿದ್ಯಾರ್ಥಿವೇತನ ವಿತರಿಸಲಾಯಿತು. ಕೇಂದ್ರ ಸಮಿತಿ ಉಪಾಧ್ಯಕ್ಷರು, ಘಟಕದ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷರು ಅಶ್ವಥ್ ಎಸ್. ವಹಿಸಿದ್ದರು.

ವೇದಿಕೆಯಲ್ಲಿ ಹೊಸಪೇಟೆಯ ಯುವ ವಕೀಲ ಅಶೋಕ್ ಎಸ್. ಪೂಜಾರಿ, ಯುವ ಉದ್ಯಮಿ ಜೇಸಿ ರಾಷ್ಟ್ರ ಪ್ರಶಸ್ತಿ ವಿಜೇತ ಸುಭಾಷ್ ಕುಮಾರ್ ನಂದಳಿಕೆ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಭಾರತಿ ಭಾಸ್ಕರ್ ಉಪಸ್ಥಿತರಿದ್ದರು.

ಸುಜಾತ ಹರೀಶ್ ಮತ್ತು ಸುಗಂಧಿ ಶ್ಯಾಮ್ ಪ್ರಾರ್ಥಿಸಿದರು.
ಅಶ್ವಥ್ ಎಸ್. ಸ್ವಾಗತಿಸಿದರು.
ಕಾರ್ಯದರ್ಶಿ ನಿಖಿಲ್ ಪೂಜಾರಿ ವರದಿ ವಾಚಿಸಿದರು.
ಚೈತ್ರ ಮನೋಹರ್ ಮತ್ತು ಉಷಾ ಕಾರ್ಯಕ್ರಮ ನಿರೂಪಿಸಿದರು.
ಸುಜಾತ ಪ್ರಸಾದ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!