Yuvavahini

SEP 15, 2024 4.44 AM IST

ಯುವವಾಹಿನಿ (ರಿ.) ಮೂಡುಬಿದಿರೆ ಘಟಕದಿಂದ ಬಹುಮಾನ - ವಿದ್ಯಾರ್ಥಿ ವೇತನ - ಐಡಿ ಕಾರ್ಡ್ ಹಸ್ತಾಂತರ

ಯುವವಾಹಿನಿಯ ಸಿದ್ದತೆ ಮತ್ತು ಬದ್ದತೆ ಇತರರಿಗೆ ಮಾದರಿ : ನಾರಾಯಣ ಪಿ.ಎಂ

ಮೂಡುಬಿದಿರೆ: ದಿನೇ ದಿನೇ ಬಲಿಷ್ಠ ಸಂಘಟನೆಯಾಗಿ ಯಶಸ್ಸಿನತ್ತ ಮುನ್ನುಗ್ಗುತ್ತಿರುವ ಯುವವಾಹಿನಿಯ ಸದಸ್ಯರ ಸಿದ್ದತೆ ಮತ್ತು ಬದ್ದತೆ ಇತರರಿಗೆ ಮಾದರಿಯಾಗಿದೆ ಎಂದು ಉದ್ಯಮಿ ನಾರಾಯಣ ಪಿ.ಎಂ ತಿಳಿಸಿದರು.

ಅವರು ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 15-09-2024 ರಂದು ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆದ ಬಹುಮಾನ, ವಿದ್ಯಾರ್ಥಿ ವೇತನ ಹಾಗೂ ಸದಸ್ಯರ ಐಡಿ ಕಾರ್ಡ್ ವಿತರಣಾ ಸಮಾರಂಭವನ್ನು ದೀಪ ಬೆಳಗುವುದರ ಮೂಲಕ‌ ಉದ್ಘಾಟಿಸಿ ಮಾತನಾಡಿದರು. 

ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಶಂಕರ್ ಎ. ಕೋಟ್ಯಾನ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಬದುಕಿನಲ್ಲಿ ಎದುರಾಗುವ ಪ್ರತಿಕೂಲ ಪರಿಸ್ಥಿತಿಯನ್ನು ಮೆಟ್ಟಿ ನಿಂತು ಮುನ್ನಡೆದಾಗ ಯಶಸ್ಸು ಸಾಧ್ಯ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರಿನ ಸೈಂಟ್ ಅಲೋಶಿಯಸ್ ಪರಿಗಣಿತ ವಿ.ವಿ ಪ್ರಾಧ್ಯಾಪಕ ಡಾ. ರಾಕೇಶ್ ಕುಮಾರ್ ಅಭಿಪ್ರಾಯ ಪಟ್ಟರು.

ಯುವವಾಹಿನಿ ಮೂಡುಬಿದಿರೆ ಘಟಕದ ಯಶಸ್ವೀ ಸಮಾಜಮುಖಿ ಕಾರ್ಯಗಳು ಜನ ಮನ್ನಣೆ ಗಳಿಸಿದೆ ಎಂದು ಸಮಾರಂಭದ ಅತಿಥಿ ಮೂಡುಬಿದಿರೆ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಸುರೇಶ್ ಕೆ. ಪೂಜಾರಿ ತಿಳಿಸಿದರು.

106 ಸದಸ್ಯರ ಸೇರ್ಪಡೆಯ ಮೂಲಕ ಯುವವಾಹಿನಿ ಮೂಡಬಿದ್ರೆ ಘಟಕವು ಹೊಸ ಮೈಲಿಗಲ್ಲು ಸ್ಥಾಪಿಸಿದೆ ಎಂದು ಅತಿಥಿಯಾಗಿ ಭಾಗವಹಿಸಿದ್ದ ರೊಟರಿ ಕ್ಲಬ್ ವಲಯ ಸೇನಾನಿ ಪ್ರವೀಣ್ ಪಿರೇರಾ ತಿಳಿಸಿದರು.

ಬಹುಮಾನ ವಿತರಣೆ :


ಗುರುಸ್ಮರಣೆ ಕಾರ್ಯಕ್ರಮದಂದು ನಡೆದ ಚಿತ್ರಕಲೆ, ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯ ವಿಜೇತ 56 ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಜೀವಿತಾ ಶಂಕರ್, ಗೀತಾ ದಿನಕರ್, ಪ್ರಭಾಕರ್ ಚಾಮುಂಡಿಬೆಟ್ಟ, ಡಾ. ಶುಭಕರ್ ಅಂಚನ್ ವಿಜೇತ ವಿದ್ಯಾರ್ಥಿಗಳನ್ನು ಸಭೆಗೆ ಪರಿಚಯಿಸಿದರು.

ರೂ 1.20 ಲಕ್ಷ ವಿದ್ಯಾರ್ಥಿ ವೇತನ ವಿತರಣೆ :


40 ಮಂದಿ ಅರ್ಹ ವಿದ್ಯಾರ್ಥಿಗಳಿಗೆ ಒಟ್ಟು ರೂ 1.20 ಲಕ್ಷ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಯುವಸ್ಪಂದನ ಯೋಜನೆಯ ಅಧ್ಯಕ್ಷ ನವಾನಂದ, ಯೋಜನೆಯ ಮೂಲಕ ವಿದ್ಯಾರ್ಥಿ ವೇತನ ಪಡೆದ ಅರ್ಹ ವಿದ್ಯಾರ್ಥಿಗಳ ಆಯ್ಕೆಯ ಬಗ್ಗೆ ಪ್ರಸ್ತಾವನೆ ಮಾಡಿದರು. ಯೋಜನೆಯ ಸಂಚಾಲಕರಾದ ದಯಾನಂದ ಮಾಸ್ತಿಕಟ್ಟೆ ಅರ್ಹ ವಿದ್ಯಾರ್ಥಿಗಳನ್ನು ಸಭೆಗೆ ಪರಿಚಯಿಸಿದರು.

ಗುರುತಿನ‌ ಚೀಟಿ ವಿತರಣೆ :


ಯುವವಾಹಿನಿಗೆ ಆಕರ್ಷಿತರಾಗಿ ನೂತನವಾಗಿ ಸೇರ್ಪಡೆಗೊಂಡ 106 ಸದಸ್ಯರಿಗೆ ಯುವವಾಹಿನಿಯ ಸದಸ್ಯತ್ವ ಸಂಖ್ಯೆಯನ್ನೊಳಗೊಂಡ ಗುರುತಿನ ಚೀಟಿ ವಿತರಿಸಲಾಯಿತು.

ಗೌರವ ಅಭಿನಂದನೆ :


ಮೂಡುಬಿದಿರೆ ಪುರಸಭೆಗೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ನಾಗರಾಜ ಪೂಜಾರಿ ಹಾಗೂ ಬಾಲ ಪ್ರತಿಭೆ ಸುನಿಕ್ಷಾ ಮಾರ್ನಾಡ್ ಇವರುಗಳನ್ನು ಅಭಿನಂದಿಸಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ‌ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ, ಯುವಸ್ಪಂದನ ಅಧ್ಯಕ್ಷ ನವಾನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಂಕರ್ ಎ. ಕೋಟ್ಯಾನ್ ಪ್ರಸ್ತಾವನೆಯ ಮೂಲಕ ಸ್ವಾಗತಿಸಿದರು. ಕಾರ್ಯದರ್ಶಿ ಗಿರೀಶ್ ಕೋಟ್ಯಾನ್ ವಂದಿಸಿದರು. ಸುಧಾಕರ್ ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!