Yuvavahini

SEP 22, 2024 4.24 AM IST

ಯುವವಾಹಿನಿ (ರಿ) ಸುರತ್ಕಲ್ ಘಟಕ

ಗುರುಸ್ಮರಣಿ ಕಾರ್ಯಕ್ರಮ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 170ನೇ ಜಯಂತಿಯ ಪ್ರಯುಕ್ತ ಶ್ರೀ ಗುರುಸ್ಮರಣೆ ಕಾರ್ಯಕ್ರಮವು ದಿನಾಂಕ 22-09-2024ರ ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.00ರ ವರೆಗೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಕಾಟಿಪಳ್ಳದಲ್ಲಿ ನಡೆಯಿತು.

ಬೆಳಿಗ್ಗೆ 8.30 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಂದಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಜನಾ ಸ್ಪರ್ಧೆಯನ್ನು ಪ್ರಾರಂಭ ಮಾಡಲಾಯಿತು.

ತೀರ್ಪುಗಾರರಾಗಿ ಶ್ರೀ ದೀನ್ ರಾಜ್ ಪೆರ್ಮುದೆ ಮತ್ತು ಕುಮಾರಿ ವೈಶಾಲಿ ಡಿ ಬಂಗೇರ ಉಡುಪಿ ಉಪಸ್ಥಿತರಿದ್ದರು. ಉತ್ತಮ ತೀರ್ಪು ನೀಡಿದ ಇವರಿಗೆ ಹೂ, ಶಾಲು, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಮಂಗಳೂರು ಮಹಿಳಾ ಘಟಕದ ವತಿಯಿಂದ ನಡೆದ ಕುಣಿತ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ 3ನೇ ಸ್ಥಾನ ಬಹುಮಾನ ಪಡೆದ ನಮ್ಮ ಘಟಕದ ಯುವ ತಂಡವನ್ನು ಹೂ ಶಾಲು, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಬೆಳಿಗ್ಗೆ 11 ರಿಂದ ಕುಮಾರಿ ಆದ್ಯ ಇವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭವಾಯಿತು. ಸಭಾಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಮುಖ್ಯ ಅತಿಥಿಗಳನ್ನು ಹೂ, ಶಾಲು, ಸ್ಮರಣಿಕೆ ನೀಡಿ ಸ್ವಾಗತಿಸುವುದರ ಮೂಲಕ ಸ್ವಾಗತ ಭಾಷಣ ಮಾಡಿದರು .

ಉದ್ಘಾಟಕರಾಗಿ ಶ್ರೀ ದೇವೇಂದ್ರ ಡಿ.ಕೋಟ್ಯಾನ್ ಅಧ್ಯಕ್ಷರು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕಾಟಿಪಳ್ಳ ಇವರು ಗುರುಗಳ ಬಗ್ಗೆ ಸಂದೇಶ ಮತ್ತು ಯುವವಾಹಿನಿ ಸಂಘಟನೆ ಇನ್ನಷ್ಟು ಯುವಕರಿಗೆ ಸ್ಫೂರ್ತಿಯಾಗಲಿ ಎಂದು ಉದ್ಘಾಟಕರ ಮಾತಲ್ಲಿ ತಿಳಿಸಿದರು.

ಪ್ರಸ್ತಾವನೆ ಶ್ರೀ ಪದ್ಮನಾಭ್ ಸಾಲ್ಯಾನ್ ನೆರವೇರಿಸಿದರು. ಗುರು ಸಂದೇಶವನ್ನು ಉಪನ್ಯಾಸಕರು ಶ್ರೀ ಅರುಣ್ ಉಳ್ಳಾಲ್ ಸೈಂಟ್ ಆಗ್ನೇಸ್ ಕಾಲೇಜು ಮಂಗಳೂರು ಸಮಾಜದಲ್ಲಿ ಆಗುವಂತಹ ಬದಲಾವಣೆಗಳನ್ನು ಸರಿಪಡಿಸಿ ನಮ್ಮ ಹಿಂದೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಯ ಮಕ್ಕಳಿಗೆ ಉಳಿಸಿ ಕೊಡುವಲ್ಲಿ ಪೋಷಕರು ಮಹತ್ವದ ಪಾತ್ರ ವಹಿಸಬೇಕಿದೆ ಎಂದು ಮನವರಿಕೆ ಮಾಡುವುದರ ಮೂಲಕ ಉತ್ತಮ ಮಾಹಿತಿಗಳನ್ನು ಸಭೆಯಲ್ಲಿ ಹಂಚಿ ಕೊಂಡರು.

ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ. ಪೂಜಾರಿಯವರು ಮುಖ್ಯ ಅತಿಥಿಗಳ ನೆಲೆಯಲ್ಲಿ ಮಾತನಾಡಿದರು. ಶ್ರೀ ರಾಜಾರಾಮ್ ಸಾಲ್ಯಾನ್ ಮಾಲಕರು ಧನಲಕ್ಷ್ಮೀ ಕನ್ಸ್ಟ್ರಕ್ಷನ್ MRPL ಶುಭ ಹಾರೈಕೆ ಮಾಡಿದರು. ಶ್ರೀ ಸಂತೋಷ್ ಜೆ ಶೆಟ್ಟಿ ಅಗರಮೇಲು ಮಾಲಕರು ಸ್ವಯಂವರ ಸಿಲ್ಕ್ಸ್ ಸುರತ್ಕಲ್ ಶುಭಾಶಯ ತಿಳಿಸಿದರು. ಶ್ರೀ ಲೋಕೇಶ್ ಬೊಳ್ಳಾಜೆ ಮ.ನ. ಪಾ ಸದಸ್ಯರು ವಾರ್ಡ್ 3 ಕಾಟಿಪಳ್ಳ ಘಟಕಕ್ಕೆ ಶುಭ ಹಾರೈಸಿದರು.

ಶ್ರೀ ದೀಕ್ಷಿತ್ ಸಿ. ಎಸ್. ಕುಳೂರ್ ಕೇಂದ್ರದ ಸಂಘಟನಾ ಕಾರ್ಯದರ್ಶಿ, ಶ್ರೀ ಮೋಹನ್ ಮಾಡೂರ್ ಗುರುತತ್ವ ಪ್ರಚಾರಕರು ಕೇಂದ್ರ ಸಮಿತಿ, ಶ್ರೀಮತಿ ಸುಲತ ಪೂಜಾರಿ ಕಾರ್ಯದರ್ಶಿ ಮತ್ತು ಸಂಚಾಲಕರಾದ ಶ್ರೀಮತಿ ಮಾಲತಿ ಪದ್ಮನಾಭ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ SSLC/PUC ಯಲ್ಲಿ ಸಾಧನೆಗೈದ ಒಟ್ಟು 17 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, ಕಂಬಳ ವಿಭಾಗದಲ್ಲಿ ಸಾಧಕರಾದ ಶ್ರೀ ಯೋಗೀಶ್ ಕರಿಯ ಪೂಜಾರಿ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿ ಕೊಂಡು ಅನೇಕ ಮಕ್ಕಳಿಗೆ ಆಶ್ರಯ ನೀಡಿರುವ ಆಶಾಕಿರಣ ಸಂಸ್ಥೆಯ ಶ್ರೀಮತಿ ಪುಷ್ಪ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ಘಟಕದ ಸದಸ್ಯರಿಂದ ಸಾಂಸ್ಕೃತಿಕ ಸ್ಕೃತಿಕ ಕಾರ್ಯಕ್ರಮ, ಅರ್ಹ ಪ್ರತಿಭಾವಂತ 15 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಕಾರ್ಯಕ್ರಮದ ಪ್ರಯುಕ್ತ ಮಹಿಳೆಯರಿಗೆ ಭಜನಾ ಸ್ಪರ್ಧೆ ಮತ್ತು ವಿದ್ಯಾರ್ಥಿಗಳಿಗೆ ಆನ್ಲೈನ್ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಶ್ರೀ ಯೋಗೀಶ್ ಸನಿಲ್ ಬಹುಮಾನ ವಿತರಿಸಿದರು.

ನಿರೂಪಣೆ ಶ್ರೀಮತಿ ಗಾಯತ್ರಿ ಸತೀಶ್, ಭಾಸ್ಕರ್ ಸಾಲ್ಯಾನ್ ಮತ್ತು ಶ್ರೀ ಸತೀಶ್ ಕೋಟ್ಯಾನ್ ನಡೆಸಿಕೊಟ್ಟರು. ಸಂಚಾಲಕರಾದ ಶ್ರೀಮತಿ ಮಾಲತಿ ಪದ್ಮನಾಭ್ರವರ ಧನ್ಯವಾದದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!