Yuvavahini

ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯ ವರದಿ-2015-16

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕಥೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನೇರ ನಡೆನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ವಿಶುಕುಮಾರ್ ದತ್ತಿನಿಧಿಯನ್ನು ಸ್ಥಾಪಿಸಿ ಅದರ ಮೂಲಕ ಕಳೆದ ಹದಿನಾಲ್ಕು ವರ್ಷಗಳಿಂದ ವಿಶುಕುಮಾರ್ ಪ್ರಶಸ್ತಿಯನ್ನು ನೀಡುತ್ತಾ ಬಂದಿರುತ್ತದೆ. 2015-16 ನೇ ಸಾಲಿನ ವಿಶುಕುಮಾರ್ ದತ್ತಿನಿಧಿ ಸಂಚಲನಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸಂತೋಷ್ […]

Read More

ಚಿಂತನ

ಚಿಂತನ ಗುಣವತಿ ರಮೇಶ್, ಸುರತ್ಕಲ್ ಶ್ರೇಷ್ಠವಾದ ಮಾನವ ಜನ್ಮವನ್ನು ಪಡೆದಿರುವ ಎಲ್ಲರೂ ತಮ್ಮ ಜೀವನ ಸುಖಮಯವಾಗಿರಬೇಕೆಂದು ಹರಸಾಹಸ ಮಾಡುತ್ತಾರೆ. ಎಲ್ಲರೂ ಮಾಡುವುದು ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ ಎಂಬ ಗಾದೆ ಮಾತಿತ್ತು. ಆದರೆ ಇಂದು ಹುಟ್ಟು ಸಾವಿನ ನಡುವಿನ ಜೀವನದ ಸುಖಕ್ಕಾಗಿ ಪ್ರಪಂಚದಾದ್ಯಂತ ಎಂತೆಂತಹ ಘನಕಾರ್‍ಯಗಳು ನಡೆಯುತ್ತವೆ ಎಂದು ಆಲೋಚಿಸಿದರೆ ಅಬ್ಬಾ ಎಂಥಾ ಕಾಲವಪ್ಪ, ಎಂದೆನಿಸುತ್ತದೆ. ಆದರೆ ನಮ್ಮ ಪೂರ್ವಿಕರು ಹೊಲ, ಗದ್ದೆ, ಗುಡ್ಡ, ತೋಟ ಹೀಗೆ ಬೆವರು ಸುರಿಸಿ ದುಡಿದು, ಇದ್ದದ್ದನ್ನು ತುಂಬು ಕುಟುಂಬದಲ್ಲಿದ್ದ ಎಲ್ಲರೂ ಹಂಚಿಕೊಂಡರು […]

Read More

ಅಕ್ಷತಾ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಪ್ರತಿಭೆಗೆ ಸರಹದ್ದುಗಳಿಲ್ಲ-ಕಾರ್ಯಕ್ಷೇತ್ರಗಳೆಂಬ ಇತಿಮಿತಿ ಇರುವುದಿಲ್ಲ ಎಂಬ ಮಾತಿಗೆ ಸ್ಪಷ್ಟ ನಿದರ್ಶನ-ಬಜಪೆಯ ಶ್ರೀ ಪಿ.ಮೋಹನ್ ಕುಮಾರ್ ಹಾಗೂ ಕನಕಾ ಎಂ ದಂಪತಿಗಳ ಸುಪುತ್ರಿ ಕು| ಅಕ್ಷತಾ. ಪ್ರಾಥಮಿಕ, ಪ್ರೌಢ ಶಿಕ್ಷಣದ ನಂತರ ವಾಣಿಜ್ಯ ಕ್ಷೇತ್ರದತ್ತ ಮುಖ ಮಾಡಿದ ಈಕೆ ಬಿ.ಕಾಂ ಪದವಿಯನ್ನು ಮುಗಿಸಿ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ (ಮಾನವ ಸಂಪನ್ಮೂಲ) ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಕಲೆಯಲ್ಲಿ ದಿ| ವಿ.ಪಿ.ಕಾರಂತ, ಶ್ರೀ ಪಿ. ಮೋಹನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ವೈವಿಧ್ಯಮಯ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಕರ್ನಾಟಕ ಸಂಗೀತದತ್ತ ಒಲವು […]

Read More

ಜಾತಿ-ಮತ-ಧರ್ಮದಿಂದಾಚೆ…

ವೈಚಾರಿಕ – ಅಮಿತಾಂಜಲಿ ಕೆ., ಉಡುಪಿ ಬಾಲ್ಯವೆಲ್ಲಾ ಕ್ರಿಶ್ಚಿಯನ್ ಒಡನಾಡಿಗಳೊಂದಿಗೇ ಆಡಿ ಬೆಳೆದವಳು ನಾನು. ಮುಸ್ಲಿಂ ಬಾಂಧವರ ಜೊತೆ ಬಾಂಧವ್ಯದ ಸುಖವನ್ನು ಕಂಡವಳು ನಾನು. ಅಪ್ಪ ಸ್ವಂತ ಮನೆ ಕಟ್ಟುವವರೆಗೂ ಕ್ರಿಶ್ಚಿಯನ್ನರ ಒಕ್ಕಲು ಮನೆಗಳಲ್ಲೇ ಬಾಡಿಗೆಗಿದ್ದೆವು. ಅಜ್ಜಿ ಮನೆಗೆ ಹೋದಾಗಲೆಲ್ಲ ಅಜ್ಜಿಯ ಒಡಹುಟ್ಟಿದಂತಿದ್ದ ನೆರೆಮನೆಯ ನಮ್ಮ ’ಸಣ್ಣಜ್ಜಿ’ ಜಾಕಿಯಾಬಿ ನಮ್ಮ ಮೇಲೆ ಪ್ರೀತಿಯ ಮಳೆಯನ್ನೇ ಹರಿಸುತ್ತಿದ್ದರು. ಯಾವತ್ತೂ ಅವರಲ್ಲಿ ಯಾರೂ ನಮ್ಮನ್ನು ಹಿಂದೂಗಳೆಂದು ಹಂಗಿಸಿದ್ದಿಲ್ಲ. ಅವರು ಬೇರೆ ಧರ್ಮೀಯರೆಂಬ ಕಾರಣಕ್ಕೆ ನಾವವರನ್ನು ದ್ವೇಷಿಸಿದ್ದಿಲ್ಲ. ಆತ್ಮೀಯ ಬಾಂಧವ್ಯ ನಮ್ಮೊಳಗಿತ್ತು. […]

Read More

ವಿಜ್ಞಾನ ಯುಗದ ಅಜ್ಞಾನಿಗಳು

ಆಶಯ ಕೆ. ರಾಜೀವ ಪೂಜಾರಿ ಈ ಸೃಷ್ಟಿಯ ಸೌಂದರ್ಯವೇ ಬದುಕಿನ ಆಂತರ್ಯ. ತೇಲುವ ಮೋಡಗಳಲ್ಲಿ, ಹರಿಯುವ ನದಿಯ ಜಲದಲ್ಲಿ. ಹಸುರಿನ ಸಿರಿಯಲ್ಲಿ, ಹೂಗಳ ವರ್ಣದಲ್ಲಿ…ಮಂದಹಾಸದಲ್ಲಿರುವುದು ಅನಂತ ಚೈತನ್ಯದ ಒಂದು ರೂಪವೇ ಎನ್ನುವುದು ಸನಾತನೀಯ ಸಚ್ಚಿಂತನೆ. ನಮ್ಮದು ಸನಾತನ ಚಿಂತನೆಯನ್ನು ಗೌರವಿಸುವ ದೇಶ. ಮಾನವೀಯ ಮೌಲ್ಯಗಳನ್ನು ಮಾನ್ಯ ಮಾಡುವ ಮಹನೀಯರುಗಳು ಈಗಲೂ ಈ ನೆಲದಲ್ಲಿರುವರು. ಇಲ್ಲಿನ ಮಣ್ಣಿನ ಗುಣವೇ ದೈವಿಕ ಭಾವದಿಂದ ಕೂಡಿರುವುದು. ಅನೇಕ ಸಂತ ಮಹಂತರುಗಳು ಈ ನೆಲದಲ್ಲಿ ಬಾಳಿ ಹೋಗಿದ್ದಾರೆ. ಅವರ ನುಡಿಗಳು ಮನುಕುಲಕ್ಕೆ ದಾರಿದೀಪಗಳಾಗಿವೆ. […]

Read More

ಸ್ವಪ್ರಯತ್ನವೇ ಜೀವಾಳ – ಶಶಾಂತ್ ಬಿ.

ಬಂಟ್ವಾಳ ಕಸ್ಬಾ ಗ್ರಾಮದ ಭೋಜ ಪೂಜಾರಿ ಮತ್ತು ವನಿತಾ ದಂಪತಿಗಳ ಸುಪುತ್ರ ಶಶಾಂತ್ ಬಿ. ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಗಣಿತ ಮತ್ತು ಸಂಸ್ಕೃತದಲ್ಲಿ 100 ಅಂಕಗಳನ್ನು ಪಡೆದು 625 ಕ್ಕೆ 614 (98.24%) ಅಂಕ ಗಳಿಸಿರುವುದು ಶ್ಲಾಘನೀಯ. ಬಿಡುವಿನ ವೇಳೆಯಲ್ಲಿ ತಾನೇ ದುಡಿದು ಶಾಲಾ ಶುಲ್ಕವನ್ನು ಭರಿಸಿ ಹೆತ್ತವರಿಗೆ ಹೊರೆಯಾಗದೆ ಎಲ್ಲರ ಪ್ರೀತಿ ಸಂಪಾದಿಸಿದ್ದಾರೆ. ತಾನೇ ನಾಟಕ ರಚಿಸಿ, ಅಭಿನಯಿಸಿದ ಉತ್ತಮ ರಂಗ ಕಲಾವಿದ. ಶಾಲಾ ದಿನಗಳಲ್ಲೇ ನಾಯಕತ್ವ ಗುಣ […]

Read More

ಕಲಿಕೆಯಲ್ಲಿ ನಿಧಿಯೇ ಸರಿ – ಕು| ನಿಧಿಶ್ರೀ ಯು. ಪೂಜಾರಿ

ಶ್ರೀಮತಿ ಭಾರತಿ ಹಾಗೂ ಶ್ರೀ ಉಮಾನಾಥ ದಂಪತಿಗಳಿಗೆ ಉತ್ತಮ ಹೆಮ್ಮೆ ಪಡತಕ್ಕೆ ಸಾಧನೆಯ ಕುವರಿ ನಿಧಿಶ್ರೀಯ ಬಗ್ಗೆ ಮತ್ತು ಅವಳ ಸಾಧನೆಯ ಬಗ್ಗೆ ಅರಿವಿರಲಿಕ್ಕಿಲ್ಲ ತಮ್ಮ ಜೀವನದ ಹಾದಿಯಲ್ಲಿ ತಮ್ಮ ಮಗಳು ಒಂದುದಿನ ಸ್ವಪ್ರತಿಭೆಯಿಂದ ಜನ ಮನ್ನಣೆಯನ್ನು ಗಳಿಸಿ ಕೊಡಲಿದ್ದಾಳೆ ಎಂಬ ಅರಿವಿರಲಿಕ್ಕಿಲ್ಲ. ಕಾರಣ ಅವರಿದ್ದದ್ದು 62 ತೋಕೂರು ಜೋಕಟ್ಟೆ ಎಂಬ ಸಣ್ಣ ಊರಿನಲ್ಲಿ. ಸಾಮಾನ್ಯವಾಗಿ ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಬೆಳೆದವರಿಗೆ ಬದುಕಿನ ಸೂಕ್ಷತೆಗಳ ಅರಿವಿರುತ್ತದೆ. ಜೀವನದ ಕಷ್ಟ ಕಾರ್ಪಣ್ಯಗಳ ಸರಿಯಾದ ದೃಷ್ಟಿಕೋನ ಇರುತ್ತದೆ ಇವರ ಬಾಳಿನಲ್ಲೂ ನಡೆದದ್ದು […]

Read More

ಆಶ್ರಮದ ಮಕ್ಕಳಿಗೆ ಕ್ಷೌರ ಸೇವೆ

ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 30-07-2016 ರಂದು ಬಲ್ಮಠದ ಶ್ರದ್ಧಾನಂದ ಆಶ್ರಮದ ಮಕ್ಕಳಿಗೆ ಕ್ಷೌರ ಸೇವೆಯನ್ನು (hair cutting) ಘಟಕದ ಕೆಲವು ಸೌಂದರ್ಯ ತಜ್ಞೆಯರಿಂದ ನಡೆಸಿಕೊಡಲಾಯಿತು. ಮಕ್ಕಳಿಗೆ ಸ್ವೀಟ್, ಬಿಸ್ಕೆಟ್, ಪೆನ್, ಪೆನ್ಸಿಲ್‌ಗಳನ್ನು ನೀಡಲಾಯಿತು. ಸುಮಾರು 35 ಮಕ್ಕಳು ಇವುಗಳ ಪ್ರಯೋಜನ ಪಡೆದರು.

Read More

ಪುತ್ತೂರು ಘಟಕದ ಪದಗ್ರಹಣ ಕಾರ್ಯಕ್ರಮ

ವಿದ್ಯೆ, ಉದ್ಯೋಗ ಮತ್ತು ಸಂಪರ್ಕವೆಂಬ ನಾರಾಯಣ ಗುರುಗಳ ತತ್ವದಂತೆ ಯುವವಾಹಿನಿ ಸದಸ್ಯರು ಕೆಲಸ ಮಾಡುತ್ತಿದ್ದು ಜನರ ಅನಿಸಿಕೆ ಹಾಗೂ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಯುವವಾಹಿನಿ ಯಂತೆ ಪ್ರತಿಯೊಂದು ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಸಂಘಟನೆಗಳಿಗೆ ನಿಜವಾದ ಅರ್ಥ ಹಾಗೂ ಬೆಲೆ ಸಿಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಸಂತೋಷ್ ಕುಮಾರ್‌ರವರು ಹೇಳಿದರು. ಅವರು ಜು. 24 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2016-17 ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ […]

Read More

ಹಳೆಯಂಗಡಿ ಘಟಕದ ವತಿಯಿಂದ ಆಟಿದ ಆಯನ ಕಾರ್ಯಕ್ರಮ

ಯುವವಾಹಿನಿ(ರಿ) ಹಳೆಯಂಗಡಿ ವತಿಯಿಂದ ದಿನಾಂಕ 24-7-2016 ರಂದು ಆಟಿದ ಆಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೋಟಿ ಚೆನ್ನಯರು ಆರಾಧಿಸಿದ ಕೆಮ್ಮಲೆಜೆಯ ನಾಗಬ್ರಹ್ಮ ಗುಡಿಯ ಆಕರ್ಷಕ ರಂಗ ವಿನ್ಯಾಸದ ವೇದಿಯಲ್ಲಿ ಹಳೆಯಂಗಡಿ ಯುವವಾಹಿನಿಯ ಅವಳಿ ಸದಸ್ಯರ ಕೋಟಿ-ಚೆನ್ನಯ ಕಿರು ರೂಪಕದೊಂದಿಗೆ ಕಾರ್ಯಕ್ರಮ ಆರಂಭ. ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಹಾಗೂ ತುಳು ಚಿತ್ರನಟ, ರಂಗಭೂಮಿ ಕಲಾವಿದ ಶ್ರೀ ಅರವಿಂದ ಬೋಳಾರ್ ಇವರು ನಾಗಬ್ರಹ್ಮ ಗುಡಿಯ ಜೋಡು ನಂದಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ವಿಶಿಷ್ಠವಾಗಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!