31-07-2016, 5:49 AM
ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕಥೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನೇರ ನಡೆನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ವಿಶುಕುಮಾರ್ ದತ್ತಿನಿಧಿಯನ್ನು ಸ್ಥಾಪಿಸಿ ಅದರ ಮೂಲಕ ಕಳೆದ ಹದಿನಾಲ್ಕು ವರ್ಷಗಳಿಂದ ವಿಶುಕುಮಾರ್ ಪ್ರಶಸ್ತಿಯನ್ನು ನೀಡುತ್ತಾ ಬಂದಿರುತ್ತದೆ. 2015-16 ನೇ ಸಾಲಿನ ವಿಶುಕುಮಾರ್ ದತ್ತಿನಿಧಿ ಸಂಚಲನಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸಂತೋಷ್ […]
Read More
31-07-2016, 5:47 AM
ಚಿಂತನ ಗುಣವತಿ ರಮೇಶ್, ಸುರತ್ಕಲ್ ಶ್ರೇಷ್ಠವಾದ ಮಾನವ ಜನ್ಮವನ್ನು ಪಡೆದಿರುವ ಎಲ್ಲರೂ ತಮ್ಮ ಜೀವನ ಸುಖಮಯವಾಗಿರಬೇಕೆಂದು ಹರಸಾಹಸ ಮಾಡುತ್ತಾರೆ. ಎಲ್ಲರೂ ಮಾಡುವುದು ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ ಎಂಬ ಗಾದೆ ಮಾತಿತ್ತು. ಆದರೆ ಇಂದು ಹುಟ್ಟು ಸಾವಿನ ನಡುವಿನ ಜೀವನದ ಸುಖಕ್ಕಾಗಿ ಪ್ರಪಂಚದಾದ್ಯಂತ ಎಂತೆಂತಹ ಘನಕಾರ್ಯಗಳು ನಡೆಯುತ್ತವೆ ಎಂದು ಆಲೋಚಿಸಿದರೆ ಅಬ್ಬಾ ಎಂಥಾ ಕಾಲವಪ್ಪ, ಎಂದೆನಿಸುತ್ತದೆ. ಆದರೆ ನಮ್ಮ ಪೂರ್ವಿಕರು ಹೊಲ, ಗದ್ದೆ, ಗುಡ್ಡ, ತೋಟ ಹೀಗೆ ಬೆವರು ಸುರಿಸಿ ದುಡಿದು, ಇದ್ದದ್ದನ್ನು ತುಂಬು ಕುಟುಂಬದಲ್ಲಿದ್ದ ಎಲ್ಲರೂ ಹಂಚಿಕೊಂಡರು […]
Read More
31-07-2016, 5:47 AM
ಪ್ರತಿಭೆಗೆ ಸರಹದ್ದುಗಳಿಲ್ಲ-ಕಾರ್ಯಕ್ಷೇತ್ರಗಳೆಂಬ ಇತಿಮಿತಿ ಇರುವುದಿಲ್ಲ ಎಂಬ ಮಾತಿಗೆ ಸ್ಪಷ್ಟ ನಿದರ್ಶನ-ಬಜಪೆಯ ಶ್ರೀ ಪಿ.ಮೋಹನ್ ಕುಮಾರ್ ಹಾಗೂ ಕನಕಾ ಎಂ ದಂಪತಿಗಳ ಸುಪುತ್ರಿ ಕು| ಅಕ್ಷತಾ. ಪ್ರಾಥಮಿಕ, ಪ್ರೌಢ ಶಿಕ್ಷಣದ ನಂತರ ವಾಣಿಜ್ಯ ಕ್ಷೇತ್ರದತ್ತ ಮುಖ ಮಾಡಿದ ಈಕೆ ಬಿ.ಕಾಂ ಪದವಿಯನ್ನು ಮುಗಿಸಿ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ (ಮಾನವ ಸಂಪನ್ಮೂಲ) ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಕಲೆಯಲ್ಲಿ ದಿ| ವಿ.ಪಿ.ಕಾರಂತ, ಶ್ರೀ ಪಿ. ಮೋಹನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ವೈವಿಧ್ಯಮಯ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಕರ್ನಾಟಕ ಸಂಗೀತದತ್ತ ಒಲವು […]
Read More
31-07-2016, 5:45 AM
ವೈಚಾರಿಕ – ಅಮಿತಾಂಜಲಿ ಕೆ., ಉಡುಪಿ ಬಾಲ್ಯವೆಲ್ಲಾ ಕ್ರಿಶ್ಚಿಯನ್ ಒಡನಾಡಿಗಳೊಂದಿಗೇ ಆಡಿ ಬೆಳೆದವಳು ನಾನು. ಮುಸ್ಲಿಂ ಬಾಂಧವರ ಜೊತೆ ಬಾಂಧವ್ಯದ ಸುಖವನ್ನು ಕಂಡವಳು ನಾನು. ಅಪ್ಪ ಸ್ವಂತ ಮನೆ ಕಟ್ಟುವವರೆಗೂ ಕ್ರಿಶ್ಚಿಯನ್ನರ ಒಕ್ಕಲು ಮನೆಗಳಲ್ಲೇ ಬಾಡಿಗೆಗಿದ್ದೆವು. ಅಜ್ಜಿ ಮನೆಗೆ ಹೋದಾಗಲೆಲ್ಲ ಅಜ್ಜಿಯ ಒಡಹುಟ್ಟಿದಂತಿದ್ದ ನೆರೆಮನೆಯ ನಮ್ಮ ’ಸಣ್ಣಜ್ಜಿ’ ಜಾಕಿಯಾಬಿ ನಮ್ಮ ಮೇಲೆ ಪ್ರೀತಿಯ ಮಳೆಯನ್ನೇ ಹರಿಸುತ್ತಿದ್ದರು. ಯಾವತ್ತೂ ಅವರಲ್ಲಿ ಯಾರೂ ನಮ್ಮನ್ನು ಹಿಂದೂಗಳೆಂದು ಹಂಗಿಸಿದ್ದಿಲ್ಲ. ಅವರು ಬೇರೆ ಧರ್ಮೀಯರೆಂಬ ಕಾರಣಕ್ಕೆ ನಾವವರನ್ನು ದ್ವೇಷಿಸಿದ್ದಿಲ್ಲ. ಆತ್ಮೀಯ ಬಾಂಧವ್ಯ ನಮ್ಮೊಳಗಿತ್ತು. […]
Read More
31-07-2016, 5:42 AM
ಆಶಯ ಕೆ. ರಾಜೀವ ಪೂಜಾರಿ ಈ ಸೃಷ್ಟಿಯ ಸೌಂದರ್ಯವೇ ಬದುಕಿನ ಆಂತರ್ಯ. ತೇಲುವ ಮೋಡಗಳಲ್ಲಿ, ಹರಿಯುವ ನದಿಯ ಜಲದಲ್ಲಿ. ಹಸುರಿನ ಸಿರಿಯಲ್ಲಿ, ಹೂಗಳ ವರ್ಣದಲ್ಲಿ…ಮಂದಹಾಸದಲ್ಲಿರುವುದು ಅನಂತ ಚೈತನ್ಯದ ಒಂದು ರೂಪವೇ ಎನ್ನುವುದು ಸನಾತನೀಯ ಸಚ್ಚಿಂತನೆ. ನಮ್ಮದು ಸನಾತನ ಚಿಂತನೆಯನ್ನು ಗೌರವಿಸುವ ದೇಶ. ಮಾನವೀಯ ಮೌಲ್ಯಗಳನ್ನು ಮಾನ್ಯ ಮಾಡುವ ಮಹನೀಯರುಗಳು ಈಗಲೂ ಈ ನೆಲದಲ್ಲಿರುವರು. ಇಲ್ಲಿನ ಮಣ್ಣಿನ ಗುಣವೇ ದೈವಿಕ ಭಾವದಿಂದ ಕೂಡಿರುವುದು. ಅನೇಕ ಸಂತ ಮಹಂತರುಗಳು ಈ ನೆಲದಲ್ಲಿ ಬಾಳಿ ಹೋಗಿದ್ದಾರೆ. ಅವರ ನುಡಿಗಳು ಮನುಕುಲಕ್ಕೆ ದಾರಿದೀಪಗಳಾಗಿವೆ. […]
Read More
31-07-2016, 3:59 AM
ಬಂಟ್ವಾಳ ಕಸ್ಬಾ ಗ್ರಾಮದ ಭೋಜ ಪೂಜಾರಿ ಮತ್ತು ವನಿತಾ ದಂಪತಿಗಳ ಸುಪುತ್ರ ಶಶಾಂತ್ ಬಿ. ಈ ಬಾರಿಯ ಎಸ್ಎಸ್ಎಲ್ಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಗಣಿತ ಮತ್ತು ಸಂಸ್ಕೃತದಲ್ಲಿ 100 ಅಂಕಗಳನ್ನು ಪಡೆದು 625 ಕ್ಕೆ 614 (98.24%) ಅಂಕ ಗಳಿಸಿರುವುದು ಶ್ಲಾಘನೀಯ. ಬಿಡುವಿನ ವೇಳೆಯಲ್ಲಿ ತಾನೇ ದುಡಿದು ಶಾಲಾ ಶುಲ್ಕವನ್ನು ಭರಿಸಿ ಹೆತ್ತವರಿಗೆ ಹೊರೆಯಾಗದೆ ಎಲ್ಲರ ಪ್ರೀತಿ ಸಂಪಾದಿಸಿದ್ದಾರೆ. ತಾನೇ ನಾಟಕ ರಚಿಸಿ, ಅಭಿನಯಿಸಿದ ಉತ್ತಮ ರಂಗ ಕಲಾವಿದ. ಶಾಲಾ ದಿನಗಳಲ್ಲೇ ನಾಯಕತ್ವ ಗುಣ […]
Read More
31-07-2016, 3:55 AM
ಶ್ರೀಮತಿ ಭಾರತಿ ಹಾಗೂ ಶ್ರೀ ಉಮಾನಾಥ ದಂಪತಿಗಳಿಗೆ ಉತ್ತಮ ಹೆಮ್ಮೆ ಪಡತಕ್ಕೆ ಸಾಧನೆಯ ಕುವರಿ ನಿಧಿಶ್ರೀಯ ಬಗ್ಗೆ ಮತ್ತು ಅವಳ ಸಾಧನೆಯ ಬಗ್ಗೆ ಅರಿವಿರಲಿಕ್ಕಿಲ್ಲ ತಮ್ಮ ಜೀವನದ ಹಾದಿಯಲ್ಲಿ ತಮ್ಮ ಮಗಳು ಒಂದುದಿನ ಸ್ವಪ್ರತಿಭೆಯಿಂದ ಜನ ಮನ್ನಣೆಯನ್ನು ಗಳಿಸಿ ಕೊಡಲಿದ್ದಾಳೆ ಎಂಬ ಅರಿವಿರಲಿಕ್ಕಿಲ್ಲ. ಕಾರಣ ಅವರಿದ್ದದ್ದು 62 ತೋಕೂರು ಜೋಕಟ್ಟೆ ಎಂಬ ಸಣ್ಣ ಊರಿನಲ್ಲಿ. ಸಾಮಾನ್ಯವಾಗಿ ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಬೆಳೆದವರಿಗೆ ಬದುಕಿನ ಸೂಕ್ಷತೆಗಳ ಅರಿವಿರುತ್ತದೆ. ಜೀವನದ ಕಷ್ಟ ಕಾರ್ಪಣ್ಯಗಳ ಸರಿಯಾದ ದೃಷ್ಟಿಕೋನ ಇರುತ್ತದೆ ಇವರ ಬಾಳಿನಲ್ಲೂ ನಡೆದದ್ದು […]
Read More
30-07-2016, 5:42 AM
ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 30-07-2016 ರಂದು ಬಲ್ಮಠದ ಶ್ರದ್ಧಾನಂದ ಆಶ್ರಮದ ಮಕ್ಕಳಿಗೆ ಕ್ಷೌರ ಸೇವೆಯನ್ನು (hair cutting) ಘಟಕದ ಕೆಲವು ಸೌಂದರ್ಯ ತಜ್ಞೆಯರಿಂದ ನಡೆಸಿಕೊಡಲಾಯಿತು. ಮಕ್ಕಳಿಗೆ ಸ್ವೀಟ್, ಬಿಸ್ಕೆಟ್, ಪೆನ್, ಪೆನ್ಸಿಲ್ಗಳನ್ನು ನೀಡಲಾಯಿತು. ಸುಮಾರು 35 ಮಕ್ಕಳು ಇವುಗಳ ಪ್ರಯೋಜನ ಪಡೆದರು.
Read More
24-07-2016, 9:18 AM
ವಿದ್ಯೆ, ಉದ್ಯೋಗ ಮತ್ತು ಸಂಪರ್ಕವೆಂಬ ನಾರಾಯಣ ಗುರುಗಳ ತತ್ವದಂತೆ ಯುವವಾಹಿನಿ ಸದಸ್ಯರು ಕೆಲಸ ಮಾಡುತ್ತಿದ್ದು ಜನರ ಅನಿಸಿಕೆ ಹಾಗೂ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಯುವವಾಹಿನಿ ಯಂತೆ ಪ್ರತಿಯೊಂದು ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಸಂಘಟನೆಗಳಿಗೆ ನಿಜವಾದ ಅರ್ಥ ಹಾಗೂ ಬೆಲೆ ಸಿಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಸಂತೋಷ್ ಕುಮಾರ್ರವರು ಹೇಳಿದರು. ಅವರು ಜು. 24 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2016-17 ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ […]
Read More
24-07-2016, 5:56 AM
ಯುವವಾಹಿನಿ(ರಿ) ಹಳೆಯಂಗಡಿ ವತಿಯಿಂದ ದಿನಾಂಕ 24-7-2016 ರಂದು ಆಟಿದ ಆಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೋಟಿ ಚೆನ್ನಯರು ಆರಾಧಿಸಿದ ಕೆಮ್ಮಲೆಜೆಯ ನಾಗಬ್ರಹ್ಮ ಗುಡಿಯ ಆಕರ್ಷಕ ರಂಗ ವಿನ್ಯಾಸದ ವೇದಿಯಲ್ಲಿ ಹಳೆಯಂಗಡಿ ಯುವವಾಹಿನಿಯ ಅವಳಿ ಸದಸ್ಯರ ಕೋಟಿ-ಚೆನ್ನಯ ಕಿರು ರೂಪಕದೊಂದಿಗೆ ಕಾರ್ಯಕ್ರಮ ಆರಂಭ. ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಹಾಗೂ ತುಳು ಚಿತ್ರನಟ, ರಂಗಭೂಮಿ ಕಲಾವಿದ ಶ್ರೀ ಅರವಿಂದ ಬೋಳಾರ್ ಇವರು ನಾಗಬ್ರಹ್ಮ ಗುಡಿಯ ಜೋಡು ನಂದಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ವಿಶಿಷ್ಠವಾಗಿ […]
Read More