Yuvavahini

ಜಾತಿ ಒಂದು ಧರ್ಮ ಒಂದು ದೇವರು ಒಬ್ಬನೇ

ಹದಿನೆಂಟು, ಹತ್ತೊಂಭತ್ತನೇ ಶತಮಾನಗಳಲ್ಲಿ ಕೇರಳದ ಸಮಾಜ ಅಜ್ಞಾನ, ಅಂಧಶ್ರದ್ಧೆಗಳ ಅಂಧಕಾರದಲ್ಲಿ ಮುಳುಗಿತ್ತು. ಕೆಳವರ್ಗದವರಿಗೆ ಮೇಲ್ವರ್ಗದವರ ಹಿಂಸೆ, ಕಿರುಕುಳಗಳಿಂದಾಗಿ ಬದುಕುವುದೇ ಕಷ್ಟವಾಗಿತ್ತು. ಆ ಕಾಲದ ಜಾತಿ ವ್ಯವಸ್ಥೆಯ ಕ್ರೂರತೆಯಿಂದ ಪಾರಾಗಲು ದಲಿತರು ಮತಾಂತರಕ್ಕೆ ಮುಂದಾಗುತ್ತಿದ್ದರು. ಅಂತಹ ವಿಲಕ್ಷಣ ಕಾಲಘಟ್ಟದಲ್ಲಿ ಜನ್ಮತಾಳಿದ ನಾರಾಯಣ ಗುರು ಎಳವೆಯಲ್ಲೇ ಸಮಾಜದಲ್ಲಿ ಬೇರೂರಿರುವ ಅಸ್ಪೃಶ್ಯತೆ, ಅಜ್ಞಾನ, ಮೂಢನಂಬಿಕೆಗಳನ್ನು ಕಂಡು ಮರುಗುತ್ತಿದ್ದರು. ವಿದ್ಯಾರ್ಥಿಯಾಗಿದ್ದಾಗಲೇ ಅವರು ದೀನದಲಿತರ ಸೇವೆ, ಶುಶ್ರೂಷೆಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ತಮ್ಮ ತಾಯಿ-ತಂದೆ ನಿಧನರಾದ ಮೇಲೆ ಹುಟ್ಟಿದೂರಿಗೆ ವಿದಾಯ ಹೇಳಿ ಪರಿವ್ರಾಜಕರಾಗಿ ಸಂಚಾರಕ್ಕೆ ತೊಡಗುವ ಗುರು, […]

Read More

ಯುವವಾಹಿನಿ ಸಮಾವೇಶಗಳ ಅತಿಥಿ ಗಣ್ಯರು

ಪ್ರಥಮ ವಾರ್ಷಿಕ ಸಮಾವೇಶ (24-01-1988) ಉದ್ಘಾಟಕರು : ಶ್ರೀ ನಾರಾಯಣ ಕೊಂಚಾಡಿ, ಡಿವಿಜನಲ್ ಮ್ಯಾನೇಜರ್, ವಿಜಯಾ ಬ್ಯಾಂಕ್, ಮಂಗಳೂರು. ವಿಚಾರ ಸಂಕಿರಣ : ಶ್ರೀ ಅಡ್ವೆ ರವೀಂದ್ರ ಪೂಜಾರಿ (ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಪಾತ್ರ) : ಡಾ| ಶಿವರಾಜನ್ (ನಾರಾಯಣ ಗುರು ತತ್ವಗಳು ಇಂದಿಗೆ ಪ್ರಸ್ತುತ ಎಷ್ಟು?) : ಶ್ರೀ ಮೋಹನ್ ಕೋಟ್ಯಾನ್ (ಹಿಂದುಳಿದ ವರ್ಗದವರ ಸಂಘಟನೆಯ ಅಗತ್ಯ) : ಶ್ರೀ ಬಿ. ತಮ್ಮಯ್ಯ (ಗ್ರಾಮೀಣ ಪ್ರದೇಶದಲ್ಲಿ ನಾವೇಕೆ ಹಿಂದುಳಿದಿದ್ದೇವೆ- ಪರಿಹಾರ) : ಡಾ| ಎನ್.ಟಿ. ಅಂಚನ್, […]

Read More

ದಿ| ವಿಶುಕುಮಾರ್ : ಬದುಕು-ಸಾಧನೆ

ಕರಾವಳಿ ಕಂಡ ಧೀಮಂತ ಪ್ರತಿಭಾಶಾಲಿಗಳ ಸಾಲಿನ ಮಿನುಗು ನಕ್ಷತ್ರವಾದ ವಿಶುಕುಮಾರ್ ದಂತಕತೆಯಾದ ವ್ಯಕ್ತಿ. ತುಳುವಿನ ಉಸಿರು, ಕನ್ನಡದ ಶಕ್ತಿ, ಸಮಾಜದ ಸ್ಫೂರ್ತಿ, ಚೆಲುವಿನ ಮೂರ್ತಿಯಾಗಿದ್ದ ವಿಶುಕುಮಾರ್ ಒಂದು ಕಾಲದ ಪ್ರತಿಭಾವಂತ ನಟ, ನಿರ್ದೇಶಕ, ಕಾದಂಬರಿಕಾರ, ಪತ್ರಕರ್ತ, ಸಂಘಟಕ, ಸಿನಿಮಾ ನಿರ್ದೇಶಕರಾಗಿ, ಶ್ರೇಷ್ಠ ಸಾಧನೆಗಳನ್ನು ಮಾಡಿದವರು, ಇನ್ನೆಷ್ಟೋ ಉಪಯುಕ್ತ ಕೊಡುಗೆಗಳನ್ನು ನೀಡಲಿರುವ ಭರವಸೆಯ ಅಕಾಲದಲ್ಲೇ ಅಗಲಿ ಹೋದವರು. 1797 ರಲ್ಲಿ ಟಿಪ್ಪುಸುಲ್ತಾನ್ ಸಮರ ಕಾಲದಲ್ಲಿ ಮಂಗಳೂರು ಬೋಳೂರಿನ ಕಡಲತೀರದಲ್ಲಿ ಕಟ್ಟಿಸಿದ ಕೋಟೆ ಸುಲ್ತಾನ್ ಬತ್ತೇರಿ, ಇಂದು ಪ್ರವಾಸಿಗರ ರಮ್ಯ ತಾಣ, […]

Read More

ವಿಶುಕುಮಾರ್- ತಾತ್ವಿಕ ನಿಲುವುಗಳು

ಅಧ್ಯಯನ ವಿಶುಕುಮಾರ್ ಕಾಲವಾಗಿ (1989) ಇದೀಗ 26 ವರ್ಷಗಳು ಪೂರ್ಣವಾಗುತ್ತಿದೆ. ಆದರೆ ಅವರು ಬಿಟ್ಟು ಹೋದ ಸಾಹಿತ್ಯ ಕೃತಿಗಳು, ನಾಟಕ, ಸಿನೆಮಾಗಳು ಇಂದಿಗೂ ನಮ್ಮನ್ನು ಕಾಡಿಸುತ್ತವೆ; ಯೋಚನೆಗೆ ಹಚ್ಚುತ್ತವೆ. ವಿಶುಕುಮಾರ್ ತಮ್ಮ ಕೃತಿಗಳಲ್ಲಿ ಆಯ್ದುಕೊಂಡ ವಸ್ತುಗಳು, ಸಾಮಾಜಿಕ ಸಮಸ್ಯೆಗಳು, ಸಂಘರ್ಷಗಳು, ಇವತ್ತಿಗೂ ಪ್ರಸ್ತುತವೆನಿಸುತ್ತವೆ. ವಿಶುಕುಮಾರ್ ಭಿನ್ನವಾಗಿ ಆಲೋಚಿಸುವ ಮನೋಧರ್ಮದವರು. ಹಾಗಾಗಿ ಕೆಲವೊಮ್ಮೆ ಅವರು ವಿವಾದಾತ್ಮಕ ವ್ಯಕ್ತಿಯೂ ಆದರು. ಒಬ್ಬ ವ್ಯಕ್ತಿ ಸಾಮಾನ್ಯವಾಗಿ ಒಂದು ಕ್ಷೇತ್ರದಲ್ಲಿ ಯಶಸ್ಸನ್ನು, ಪ್ರಸಿದ್ಧಿಯನ್ನು ಪಡೆಯುವುದನ್ನು ನಾವು ಕಾಣುತ್ತೇವೆ. ಆದರೆ ವಿಶುಕುಮಾರ್ ತಾವು ಪ್ರವೇಶಿಸಿದ ಎಲ್ಲಾ […]

Read More

ಬಿಲ್ಲವರ ಎರಡು ಮುಖ

ಸ್ಥಿತಿ-ಗತಿ – ವಿಶುಕುಮಾರ್ (1979 ರಲ್ಲಿ ಬೆಳ್ತಂಗಡಿ ಬಿಲ್ಲವ ಸಂಘವು ಹೊರತಂದ  ’ಕೋಟಿ- ಚೆನ್ನಯ’ ಎಂಬ ಸ್ಮರಣ ಸಂಚಿಕೆಯಲ್ಲಿ ಪ್ರಕಟಗೊಂಡ  ಖ್ಯಾತ ಸಾಹಿತಿ ದಿ| ವಿಶುಕುಮಾರ್ ಅವರ ಇಂದಿಗೂ ಪ್ರಸ್ತುತವೆನಿಸುವ ಒಂದು ಲೇಖನ…) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಜನಾಂಗಕ್ಕೆ ಬಿಲ್ಲವ, ಪೂಜಾರಿ, ಬೈದ, ಹಳೇಪೈಕ ಇತ್ಯಾದಿ ಹೆಸರುಗಳು. ಉತ್ತರ ಕನ್ನಡದಲ್ಲಿ ನಾಮಧಾರಿಗಳು. ಶಿವಮೊಗ್ಗ, ಸಾಗರ ಕಡೆ ದೀವರು. ಹಳೇ ಮೈಸೂರು ಕಡೆ ಈಡಿಗರು. ಗುಲ್ಬರ್ಗ, ಬೀದರ್ ಕಡೆ ಈಳಿಗರು, ಕೇರಳದಲ್ಲಿ ತೀಯಾ, ತಮಿಳ್‌ನಾಡಿನಲ್ಲಿ ನಾಡಾರ್ ಹೀಗೆ ಬೇರೆ […]

Read More

ಅನುಭವ ಮಂಟಪದಲ್ಲೊಬ್ಬ ಕುಲಬಾಂಧವ ಶರಣ

ವಿಶ್ವಗುರು ಬಸವಣ್ಣನವರಿಗೂ ಸೇಂದಿ ಮಾರುವ ಕುಲಕಸುಬಿನವರಿಗೂ ಎತ್ತಣ ಸಂಬಂಧವಯ್ಯಾ? ಸಹಜ ಪ್ರಶ್ನೆಯೇ, ೧೨ನೆಯ ಶತಮಾನದಲ್ಲಿ ಜಗತ್ತೇ ಬೆರಗುಗೊಳ್ಳುವ ರೀತಿಯಲ್ಲಿ ಸಮಾಜೋ ಧಾರ್ಮಿಕ ಕ್ರಾಂತಿಗೆ ರೂವಾರಿಯಾದ ಬಸವಣ್ಣ ಸ್ಥಾಪಿತ ಅನುಭವ ಮಂಟಪದಲ್ಲಿ ಸೇಂದಿ ಮಾರುವ ಶರಣನೊಬ್ಬನಿದ್ದ. ಹೆಸರು ಹೆಂಡದ ಮಾರಯ್ಯ. ಬಸವಣ್ಣನವರ ಸತ್ಸಂಗದ ನಂತರ ಶರಣ ಪಟ್ಟವನ್ನಲಂಕರಿಸಿದ ಮಾರಯ್ಯ ನವರು ’ಶರಣ ಹೆಂಡದ ಮಾರಯ್ಯ’ ಎಂದು ನಾಮಾಂಕಿತರಾದರು. ಅಸಮಾನತೆ ಸಾರುವ, ಮನುಷ್ಯರನ್ನು ಉಚ್ಛ-ನೀಚ ಎಂಬುದಾಗಿ ವಿಭಜಿಸುವ ಅಂದಿನ ಸಮಾಜದಲ್ಲಿ ದೀನ ದಲಿತರು, ತುಳಿತಕ್ಕೊಳಗಾದವರು. ಶೋಷಣೆಯಲ್ಲಿ ಮುಳುಗಿದ ವರ ಅಂತಃಕರಣದಲ್ಲಿ […]

Read More

ವರ್ತಮಾನದಲ್ಲಿ ಬಿಲ್ಲವರ ಸಂಘಟನೆ

ಕರ್ನಾಟಕ ರಾಜ್ಯ ಭಾರತದ ಒಂದು ಅಂಗ. ಈ ರಾಜ್ಯದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ’ತುಳುನಾಡೆಂದೇ’ ಪ್ರಖ್ಯಾತಿ. ಅರಬ್ಬೀ ಸಮುದ್ರದ ತಡಿಯಿಂದ ಪಶ್ಚಿಮ ಘಟ್ಟಗಳ ತುದಿಯ ತನಕ ಹಬ್ಬಿಕೊಂಡಿರುವ ಕೃಷಿ ಪ್ರಧಾನವಾದ, ಪ್ರಾಕೃತಿಕ ಚೆಲುವಿನ ಹಸಿರನ್ನು ತುಂಬಿಸಿಕೊಂಡ ಶ್ರೀಮಂತ ಜಿಲ್ಲೆ. ತುಂಬಿ ಹರಿಯುತ್ತಿರುವ ನದಿಗಳು, ಜಗತ್ಪ್ರಸಿದ್ಧ ಪುಣ್ಯ ಕ್ಷೇತ್ರಗಳು, ಇಂತಹ ಸುಂದರ ನಾಡಿನಲ್ಲಿ ಗೇಣಿದಾರನಾಗಿ, ಒಕ್ಕಲಾಗಿ, ಮೂರ್ತೆದಾರನಾಗಿ, ಕಾರ್ಮಿಕನಾಗಿ, ದೈವಗಳ ಪೂಜಾರಿಯಾಗಿ ಬದುಕಿ ಬಾಳಿದ ಬಹು ದೊಡ್ಡ ಜನ ಸಮುದಾಯ ಬಿಲ್ಲವರದ್ದು. ಶೋಷಣೆ, ದಬ್ಬಾಳಿಕೆ, ಜೀತ ಪದ್ಧತಿಯ […]

Read More

ನಾ ಕಂಡ ಯುವವಾಹಿನಿ

ತುಳುನಾಡಿನ ಬಿಲ್ಲವ ಸಮಾಜ ಪ್ರಾಚೀನತೆಯಲ್ಲಿ, ಜನ ಸಂಖ್ಯೆಯಲ್ಲಿ, ಗುತ್ತು ಬರ್ಕೆ, ಭಾವ, ನಟ್ಟಿಲ್‌ಗಳ ಸ್ಥಾನಮಾನದೊಂದಿಗೆ ಆಳರಸರ ದಂಡನಾಯಕರಾಗಿ ಕ್ಷಾತ್ರ ತೇಜದಲ್ಲಿ ಮೆರೆದ ಸಮಾಜವಾಗಿತ್ತು. ಕಾಲಕ್ರಮೇಣ ಅಧೋಗತಿಗಿಳಿದು ಅಸ್ಪೃಶ್ಯತೆ ಶೋಷಣೆಗಳ ಹೊಡೆತದಿಂದ ಜರ್ಜರಿತವಾದ ಈ ಸಮಾಜ 1908 ರಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ತುಳುನಾಡಿಗೆ ಪಾದಾರ್ಪಣೆ ಮಾಡಿ ಕುದ್ರೋಳಿ ಗೋಕರ್ಣನಾಥನ ಸ್ಥಾಪನೆ ಮಾಡಿದ ಮೇಲೆ ಸಮಾಜ ಅಭಿವೃದ್ಧಿಯ ಕಡೆ ಮುಖ ಮಾಡಿತು. ಅನಕ್ಷರಸ್ಥರಾಗಿ, ಇತರರ ಮೋಸದಿಂದ ಎಲ್ಲವನ್ನು ಕಳಕೊಂಡ ಈ ಸಮಾಜ ಶಿಕ್ಷಣದ ಮಹತ್ವವನ್ನು ತಿಳಿದು ಶಿಕ್ಷಣವನ್ನು ತಮ್ಮ […]

Read More

ವಿಶುಕುಮಾರ್ ದತ್ತಿ ನಿಧಿ-2012

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರರಾಗಿ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಅಂಕಣ ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದು ಹೋದ ನಮ್ಮ ನಾಡಿನ, ಬಿಲ್ಲವರ ಹೆಮ್ಮೆಯ ಕಣ್ಮಣಿ, ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ‘ವಿಶುಕುಮಾರ್ ಪ್ರಶಸ್ತಿ’ ಯನ್ನು ಹುಟ್ಟುಹಾಕಿ ಕಳೆದ ಹತ್ತು ವರ್ಷಗಳಿಂದ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ನಮ್ಮ ಸಾಹಿತಿ ಮಿತ್ರರುಗಳ ಒತ್ತಾಸೆ, ಸಲಹೆಗಾರರ ಮಾರ್ಗದರ್ಶನದಲ್ಲಿ ’ವಿಶುಕುಮಾರ್ ದತ್ತಿನಿಧಿ’ಯನ್ನು ಸ್ಥಾಪಿಸಿ […]

Read More

ಬಿಲ್ಲವರ ಗುತ್ತು,  ಗುರಿಕಾರ ಮನೆತನಗಳ ಇತಿಹಾಸ

ಬಿಲ್ಲವರ ಚರಿತ್ರೆಯ ಗುತ್ತು, ಬರ್ಕೆ, ಗುರಿಕಾರ ಮನೆತನಗಳ ಕುರಿತ ಅಧ್ಯಯನವು ಕಳೆದ 2-3 ವರ್ಷಗಳಿಂದ ಮುಂಬಯಿ ’ಗುರುತು’ ಮಾಸಿಕ ಸಂಪಾದಕ, ಸಂಶೋಧಕ ಶ್ರೀ ಬಾಬು ಶಿವ ಪೂಜಾರಿಯವರ ಮಾರ್ಗದರ್ಶನದಲ್ಲಿ ನಡೆಯುತ್ತಾ ಬಂದಿದೆ. ಬಿ.ಎಂ.ರೋಹಿಣಿ, ಮುದ್ದು ಮೂಡುಬೆಳ್ಳೆ ಹಾಗೂ ರಮಾನಾಥ್ ಕೋಟೆಕಾರ್‌ರ ತಂಡ ಕ್ಷೇತ್ರಾಧ್ಯಯನ ನಡೆಸುತ್ತಾ ಬಂದಿದೆ. ಅದರಲ್ಲಿ ಒಂದು ಗುತ್ತುಮನೆ ಅಧ್ಯಯನದ ಮಾದರಿ ಇಲ್ಲಿದೆ: ಸಾಂತ್ಯ ಗುತ್ತು ಸಾಂತ್ಯ ಬಂಟ್ವಾಳ ತಾಲೂಕಿನಲ್ಲಿದೆ. ಬಿ.ಸಿ.ರೋಡ್, ಪುತ್ತೂರು ಮಾರ್ಗದಲ್ಲಿ ಮಾಣಿ ಕಳೆದು, ಕರುವೇಲ್‌ಲ್ಲಿ ಶಾಲಾ ಬಳಿ ಉತ್ತರದ ಮಣ್ಣಿನ ರಸ್ತೆಯಲ್ಲಿ ಮುಂದುವರಿದು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!