06-08-2017, 1:48 PM
ಇವರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯಾರು ದಿ| ಸುಬ್ಬಪ್ಪ ಪೂಜಾರಿ ಹಾಗೂ ಲೀಲಾವತಿ ದಂಪತಿಗಳ ಪುತ್ರ. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರಸ್ತುತ ಪ್ರಾಂಶುಪಾಲರಾಗಿರುವ ಪ್ರೊ| ಅಚ್ಯುತ್ತ ಪೂಜಾರಿ ಕೆ. ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ| ವೈ. ಮುನಿರಾಜುರವರ ಮಾರ್ಗದರ್ಶನದಲ್ಲಿ ಮಂಡಿಸಿರುವ¸An Empirical Analysis of Banker & Customer Relationship Strategies […]
Read More
06-08-2017, 1:41 PM
ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೆರೆ, ಉಡುಪಿ ಜಿಲ್ಲೆ ಇಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಮನೋಜ್ ಕುಮಾರ್ ಎಂ. ಇವರು ಮೈಸೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ (ಪಿ.ಹೆಚ್.ಡಿ) ಪದವಿಯನ್ನು ಪಡೆದಿರುತ್ತಾರೆ. ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಪ್ರೊ. ವೆಂಕಟೇಶ್ ಸಿ. ಇವರ ಮಾರ್ಗದರ್ಶನದಲ್ಲಿ ಶ್ರೀ ಮನೋಜ್ಕುಮಾರ್ ಎಂ ಇವರು ಮಂಡಿಸಿದ Construction of health related physical fitness Norms for 16-18 years boys of coastal Karnataka“ಎಂಬ ಮಹಾಪ್ರಬಂಧಕ್ಕೆ […]
Read More
06-08-2017, 1:31 PM
ಪಶ್ಚಿಮ ಕರಾವಳಿ ಪರ್ವತ ಶ್ರೇಣಿಯ ತಪ್ಪಲಿನ ಬೆಳ್ತಂಗಡಿ ತಾಲೂಕು ತೆಂಕ ಕಾರಂದೂರು ಗ್ರಾಮದ ಅಂಗಡಿಬೆಟ್ಟು ಎಂಬಲ್ಲಿಯ ನಿವಾಸಿಯಾಗಿದ್ದು, ಗ್ರಾಮೀಣ ಪ್ರದೇಶದಲ್ಲಿದ್ದರೂ ಕಲಿಕೆಯಲ್ಲಿ ಹಿಂದೆ ಬೀಳದೆ ವೈದ್ಯಕೀಯ ಪದವಿ ಪಡೆದು ಉನ್ನತವಾದ ಉದ್ಯೋಗವನ್ನು ಪಡೆದು ಬಡಜನರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುತ್ತಾ ಜನಸೇವೆ ಮಾಡುತ್ತಿರುವ ಓರ್ವ ಸಾಧಕ ಡಾ. ಸದಾನಂದ ಪೂಜಾರಿ ಇವರು. ಶ್ರೀಯುತರು ಕೃಷಿ ಕುಟುಂಬದಲ್ಲಿ ಜನಿಸಿ, ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಪ್ರಾಥಮಿಕ ಶಾಲೆ, ತೆಂಕ ಕಾರಂದೂರಿನಲ್ಲಿ ನಡೆಸಿ, ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದು, ಉಜಿರೆಯ […]
Read More
06-08-2017, 1:19 PM
ಯಕ್ಷಲೋಕದಲ್ಲಿ ಗಾನ ಸುರಭಿ ಎಂದೇ ಕರೆಸಿಕೊಂಡು ತನ್ನ ಕಂಠ ಮಾಧುರ್ಯಕ್ಕೆ ಅಸಂಖ್ಯಾತ ಅಭಿಮಾನಿ ಬಳಗವನ್ನು ಹುಟ್ಟು ಹಾಕಿಕೊಂಡಿರುವ ರವಿಚಂದ್ರ ಕನ್ನಡಿಕಟ್ಟೆ ಈ ನಾಡುಕಂಡ ಅಪ್ರತಿಮ ಭಾಗವತ.ತೆಂಕು ತಿಟ್ಟಿನ ಯಕ್ಷಲೋಕದಲ್ಲಿ ನಕ್ಷತ್ರಪುಂಜದಂತೆ ಮಿನುಗುವ ರವಿಚಂದ್ರ ಕನ್ನಡಿಕಟ್ಟೆ ಮೂಲತಃ ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ಪಜೆಮಾರು ನಿವಾಸಿ ಧರ್ಮಣ್ಣ ಪೂಜಾರಿ ಮತ್ತು ಸುಶೀಲಾ ದಂಪತಿಗಳ ಪುತ್ರ. 1980ನೇ ಇಸವಿಯ ಅಕ್ಟೋಬರ್ 10ರಂದು ಜನಿಸಿದ ಕನ್ನಡಿಕಟ್ಟೆ ಎಸ್ಎಸ್ಎಲ್ಸಿಗೆ ತನ್ನ ಶಿಕ್ಷಣ ಮೊಟಕುಗೊಳಿಸಿ ಬಳಿಕ ಯಕ್ಷರಂಗದತ್ತ ಮುಖ ಮಾಡಿ ಹೊರಟವರು. ಧರ್ಮಸ್ಥಳ ಮಂಜುನಾಥೇಶ್ವರ […]
Read More
06-08-2017, 1:05 PM
ಸಾಮಾಜಿಕ ಕ್ಷೇತ್ರದ ಸಾಧಕ ಶ್ರೀ ಧರಣೇಂದ್ರ ಕುಮಾರ್ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಬಜೆ ಮನೆತನದ ದಿ. ಬಾಬು ಪೂಜಾರಿ ಮತ್ತು ಶ್ರೀಮತಿ ಸಿರಿಯಮ್ಮ ದಂಪತಿಯರ ಸುಪುತ್ರನಾಗಿ ಜನನ. ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯಲ್ಲಿ ಹಾಗೂ ಪ್ರೌಢಶಿಕ್ಷಣ ಹಾಗೂ ಪದವಿ ಶಿಕ್ಷಣವನ್ನು ಸರಕಾರಿ ಪ್ರೌಢ ಶಾಲೆ ಮತ್ತು ಪದವಿ ಕಾಲೇಜು ಸಿದ್ಧಕಟ್ಟೆಯಲ್ಲಿ ಮುಗಿಸಿ ವೃತ್ತಿ ಜೀವನವನ್ನು ಕೃಷಿಯಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿ ಜೀವನದಲ್ಲಿಯೇ ಸಮಾಜಸೇವೆಯನ್ನು ಮೈಗೂಡಿಸಿಕೊಂಡು ಫ್ರೆಂಡ್ಸ್ ಕ್ಲಬ್ (ರಿ.) ಹೊಸಂಗಡಿ […]
Read More
06-08-2017, 12:17 PM
ಶೈಕ್ಷಣಿಕವಾಗಿ ಮತ್ತು ಸಂಘಟನಾತ್ಮಕವಾಗಿ ಸಮುದಾಯ ಎದ್ದುನಿಂತಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಹೇಳಿದ್ದಾರೆ. ಅದೇ ರೀತಿ ಮುಂದುವರಿದ ಬಿಲ್ಲವ ಸಮುದಾಯ ಈಗ ಬಲಿಷ್ಠಗೊಳ್ಳುತ್ತಿದೆ. ಆದರೆ ಕೆಲವರು ನಮ್ಮನ್ನು ತಮ್ಮ ಕೆಲಸಗಳಿಗಾಗಿ ಸೈನಿಕರನ್ನಾಗಿ ಬಳಸಿಕೊಳ್ಳುತ್ತಿದ್ದು, ಇದರಿಂದ ಕೋಮುಗಲಭೆಯಲ್ಲಿ ಶೇ. 70 ರಿಂದ 80ರಷ್ಟು ಬಿಲ್ಲವರು ಭಾಗಿಗಳಾಗುವಂತಾಗಿದೆ. ಇದರ ವಿರುದ್ಧ ಪ್ರತಿಯೋರ್ವರು ಎಚ್ಚೆತ್ತುಕೊಂಡು ಸಮುದಾಯದ ಯುವಕರು ಹಳಿ ತಪ್ಪದ್ದಂತೆ ಜಾಗೃತೆ ವಹಿಸಿಕೊಳ್ಳಬೇಕಿದೆ ಎಂದು ಐಎಫ್ಎಸ್ ಅಧಿಕಾರಿ ದಾಮೋದರ ಎ.ಟಿ. ತಿಳಿಸಿದರು. ಯುವವಾಹಿನಿ ಕೇಂದ್ರ ಸಮಿತಿ […]
Read More
06-08-2017, 12:10 PM
ತಾವು ಪಟ್ಟ ಕಷ್ಟ ನಮ್ಮ ಮಕ್ಕಳಿಗೆ ಸಿಗದಿರಲಿ ಎಂದು ಆಶಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಅವರ ಜೀವನಕ್ಕಾಗಿ ಎಲ್ಲವನ್ನೂ ಧಾರೆ ಎರೆಯುವ ಹೆತ್ತವರನ್ನು ಈ ಸಮಾಜದಲ್ಲಿ ಕಂಡಿದ್ದೇವೆ, ಆದರೆ ಬಡತನದ ಬೇಹುದಿಯಲ್ಲಿ ಬೆಳೆಯುತ್ತಾ ಶಿಕ್ಷಣ ಪಡೆಯಲು ಈ ಸಮಾಜದಲ್ಲಿ ತಾನು ಕಂಡುಕೊಂಡ ಕಷ್ಟ ಇನ್ನೊಬ್ಬರಿಗೆ ಬರದಿರಲಿ ಎಂದು ಆಶಿಸಿ ಒಂದೆರಡು ವರುಷವಲ್ಲ ನಿರಂತರವಾದ ಐವತ್ತು ಸಂವತ್ಸರದಿಂದ ಎಲೆಮರೆಯ ಕಾಯಿಯಂತೆಯೇ ಉಳಿದು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಬಂದ ಅಪರೂಪದ ಸಾಧಕರ ಸಾಲಿನಲ್ಲಿ ಬರುವ ಮೇರು ವ್ಯಕ್ತಿತ್ವದ […]
Read More
06-08-2017, 12:01 PM
ಬ್ರಹ್ಮಶ್ರೀ ನಾರಾಯಣ ಗುರುಗಳು 1909ರಲ್ಲಿ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಅಸ್ಖಲಿತ ವಾಣಿಯಿಂದ ಹರಿದು ಬಂದ ಅತುಲನೀಯವಾದ ಜ್ಞಾನಾಮೃತದಿಂದ ಪ್ರೇರಿತರಾದ ನಮ್ಮ ಸಮಾಜ ಬಾಂಧವರು 1910ರಲ್ಲಿ ಶ್ರೀ ವೆಂಕಟೇಶ ಭಜನಾ ಸಂಘವನ್ನು ಸ್ಥಾಪನೆ ಮಾಡಿದರು. ಬಳಿಕ ಶಿವಭಕ್ತಿ ಯೋಗ ಸಂಘವೆಂಬ ಸಮಾನ ಮನಸ್ಕ ಇನ್ನೊಂದು ಸಂಘವನ್ನು ಸೇರ್ಪಡೆಗೊಳಿಸಿ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ ಎಂಬ ನೂತನ ಸಂಘಟನೆ ಸ್ಥಾಪನೆಯಾಯಿತು. ಈ ಸಂಸ್ಥೆ 1926ರಲ್ಲಿ ಸರಕಾರದ ಆಗಿನ ರಿಜಿಸ್ಟ್ರೇಶನ್ ಆ್ಯಕ್ಟ್ನಂತೆ ಸಂಖ್ಯೆ 2/1925-26 ರಂತೆ ನೋಂದಣಿ […]
Read More
06-08-2017, 8:48 AM
ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ದಿನಾಂಕ 06.08.2017 ರಂದು ಉಪ್ಪಿನಂಗಡಿಯ ಎಚ್ ಎಮ್.ಆಡಿಟೋರಿಯಂ ಇಲ್ಲಿ ಜರುಗಿದ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದಲ್ಲಿ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಕೆ.ವಸಂತ ಬಂಗೇರ ಅವರು ಸಿಂಚನ ವಿಶೇಷಾಂಕ -2017 ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಐ ಎಪ್ ಎಸ್ ಅಧಿಕಾರಿ ಶ್ರೀ ದಾಮೋದರ ಎ.ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ […]
Read More
23-07-2017, 8:25 AM
ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಬಂಟ್ವಾಳ ಪುರಸಭೆಯ ನಾಮನಿರ್ದೇಶಕ ಸದಸ್ಯರಾದ ಲೋಕೇಶ್ ಸುವರ್ಣ ಅಲೆತ್ತೂರು ಇವರು ಆಯ್ಕೆಯಾಗಿದ್ದಾರೆ. ಉಳಿದ ಪದಾಧಿಕಾರಿಗಳಾಗಿ ಉಪಾಧ್ಯಕ್ಷರು : ಗಣೇಶ್ ಪೂಂಜೆರೆಕೋಡಿ ಕಾರ್ಯದರ್ಶಿ : ದಿನೇಶ್ ಕೆ. ಸುವರ್ಣ, ಕೋಶಾಧಿಕಾರಿ : ಲೋಕೇಶ್ ಪೂಜಾರಿ. ಜತೆ ಕಾರ್ಯದರ್ಶಿ : ಕಿರಣ್ ರಾಜ್ ನಿರ್ದೇಶಕರು:- ಸಾಂಸ್ಕøತಿಕ : ಹರೀಶ್ ಕೋಟ್ಯಾನ್ ಕುದನೆ ನಾರಾಯಣಗುರು ತತ್ವ […]
Read More