31-07-2016, 7:27 AM
ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಲನಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನಡೆ ನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್ರವರ ಸ್ಮರಣಾರ್ಥ ಯುವವಾಹಿನಿಯ ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯು ಕಳೆದ 14 ವರ್ಷಗಳಿಂದ ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ದುಡಿದ, ಗಣನೀಯ ಸಾಧನೆ ಮಾಡಿದ ಮಹನೀಯರನ್ನು ಗುರುತಿಸಿ ವಿಶುಕುಮಾರ್ ಪ್ರಶಸ್ತಿ ನೀಡುತ್ತಾ ಬಂದಿರುತ್ತದೆ. 2016ರ ಸಾಲಿನ ವಿಶುಕುಮಾರ್ ಪ್ರಶಸ್ತಿಯು ದ್ವಿಭಾಷಾ ಕವಿ, […]
Read More
31-07-2016, 6:44 AM
ತೋನ್ಸೆ ಗರಡಿ ಮನೆ-ಮೂಡು ತೋನ್ಸೆ ಹೊನ್ನಪ್ಪಕುದ್ರು ಇಲ್ಲಿನ ದಿ| ನಾರಾಯಣ ಪೂಜಾರಿ-ಅಮ್ಮಣ್ಣಿ ಪೂಜಾರ್ತಿ ದಂಪತಿಗಳ ಸುಪುತ್ರರಾದ ಡಾ| ನವೀನ್ ಕುಮಾರ್ ತೋನ್ಸೆಯವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ತೋನ್ಸೆ ನಿಡಂಬಳ್ಳಿ ಪ್ರಾಥಮಿಕ ಶಾಲೆಯಲ್ಲಿ ಪಡೆದು ಮಿಲಾಗ್ರಿಸ್ ಹೈಸ್ಕೂಲ್ನಲ್ಲಿ ಪ್ರೌಢ ಹಾಗೂ ಮಿಲಾಗ್ರಿಸ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರೈಸಿದರು. ಮಣಿಪಾಲ ವಿಶ್ವವಿದ್ಯಾನಿಲಯದ ಕಾಲೇಜ್ ಆಫ್ ಎಲೈಡ್ ಹೆಲ್ತ್ ಸೈನ್ಸ್ ಇಲ್ಲಿ ಬಿ.ಎಸ್ಸಿ (MLT) ಪದವಿ ಪಡೆದ ಡಾ| ತೋನ್ಸೆಯವರು ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ಅನಾಟಮಿಯಲ್ಲಿ ಎಂ.ಎಸ್ಸಿ. ಪದವಿ ಪಡೆದರು. ಪ್ರೋ| […]
Read More
31-07-2016, 6:40 AM
ಮೂಲ್ಕಿ ನಾರಾಯಣಗುರು ವಿದ್ಯಾಸಂಸ್ಥೆಯಲ್ಲಿ ಕಲಿತ ಓರ್ವ ಮಹಿಳೆ ಇಂದು ವಿಶ್ವವಿಖ್ಯಾತ ಬೆಂಗಳೂರಿನ CMR Institute of Technology ಯಲ್ಲಿ ಸಹಾಯಕ ಪ್ರೊಫೆಸರ್ ಆಗಿದ್ದಾರೆ. ಹಲವು ವೈಶಿಷ್ಟ್ಯಪೂರ್ಣ ಸಾಧನೆಯ ಈ ಪ್ರತಿಭಾನ್ವಿತೆ ಸಮಾಜದ ಕೆಲವೇ ಸಾಧಕರಲ್ಲಿ ಮೆಚ್ಚುಗೆ ಗಳಿಸಿ ಯುವ ಪೀಳಿಗೆಗೆ ಆದರ್ಶಪ್ರಾಯರೆನಿಸಿದ್ದಾರೆ. ಪ್ರತಿಷ್ಠಿತ (ಈಗಿನ ವಿದ್ಯಾರ್ಥಿಗಳ ಪ್ರಥಮ ಆಯ್ಕೆ ಎನಿಸಿದ) ಬೆಂಗಳೂರಿನ BMS ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದು ಉತ್ಪಾದನಾ ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ PES Institute of Technology ಯಲ್ಲಿ M.Tech ಪದವಿ ಪಡೆದಿರುತ್ತಾರೆ. ಅಲ್ಲಿಗೇ […]
Read More
31-07-2016, 6:34 AM
ತುಳುನಾಡಿನ ಪ್ರಾಚೀನ ಶ್ರೇಷ್ಠ ಪರಂಪರೆಯಲ್ಲಿ ನಡೆದು ಬಂದ ರೀತಿ ರಿವಾಜುಗಳು, ಸಾಂಸ್ಕೃತಿಕ ಹರಹುಗಳು ಮತ್ತದರ ಶ್ರೇಷ್ಠತೆ, ವೈಶಿಷ್ಠತೆ ನಮ್ಮಲ್ಲೇ ಹೆಚ್ಚಿನವರಿಗೆ ಅರಿವಿಲ್ಲದಿರಬಹುದು ಅದರಲ್ಲೂ ಜನಜೀವನದ ಮಧ್ಯೆ ಇದ್ದು ತಮ್ಮ ಅಸಾಧಾರಣ ಶಕ್ತಿ ಸಾಮರ್ಥ್ಯಗಳಿಂದ ಅಸಹಾಯಕರಿಗೆ ಸಹಾಯಕರಾಗಿ ದುಷ್ಟರಿಗೆ ಸಿಂಹಸ್ಚಪ್ನರಾಗಿ ಭಕ್ತ ಜನರಿಗೆ ರಕ್ಷಕರಾಗಿ ಇದ್ದ ಕೆಲವು ಶಕ್ತಿಗಳು ಪವಾಡ ಪುರುಷರಾಗಿ ಭೂತಾರಾಧನೆಯ ಕೇಂದ್ರ ಬಿಂದುಗಳಾಗಿ ಇಂದಿಗೂ ಪ್ರಸ್ತುತರಾಗಿದ್ದಾರೆ. ಅಂದಿನ ಅತಿಶಯ ಶಕ್ತಿವಂತ ನಂಬಿದವರಿಗೆ ಇಂಬುಕೊಟ್ಟ ತುಳು ಇತಿಹಾಸದ ದೈವಗಳಲ್ಲಿ ಜುಮಾದಿ ಎಲ್ಲರಿಗೂ ತಿಳಿದಿರುವಂತಹ ಪವಾಡ ಶೀಲ ಭೂತ […]
Read More
31-07-2016, 6:31 AM
ಕನ್ನಡ ಮಾಧ್ಯಮದಲ್ಲಿ ಶಿಕ್ಷಣ. NITKಯಲ್ಲಿ ಇಲೆಕ್ಟ್ರಾನಿಕ್ ಹಾಗೂ ಇಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವಿ-ಬಿಟ್ಸ್ ಪಿಲಾನಿ (ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ತಂತ್ರಜ್ಞಾನ ತಜ್ಞರನ್ನು ರೂಪಿಸುವ ಸುಪ್ರಸಿದ್ಧ ಸಂಸ್ಥೆ)ಯಲ್ಲಿ ಪ್ರೊಫೆಸರ್! ಎಲ್ಲಿಂದ ಎಲ್ಲಿಗೆ ಪಯಣ ಅತ್ಯಾಶ್ಚರ್ಯಕರ, ನಂಬಲಸಾಧ್ಯ. ಆದರೆ ಇದು ನಿಜ. ಮೈನವಿರೇಳಿಸುವ ಸಾಧನೆ!! ಕನ್ನಡ ಮಾಧ್ಯಮದಲ್ಲಿ ಕಲಿತವರು ಹಿಂದೆ ಬೀಳುತ್ತಾರೆ ಎಂಬ ಹೆಚ್ಚಿನ ಜನರ ಅಭಿಪ್ರಾಯವನ್ನು ಸಂಪೂರ್ಣ ನಿರಾಧಾರ ಎಂದು ನಿರೂಪಿಸಿದ ಜ್ವಲಂತ ನಿದರ್ಶನ ಡಾ| ಶಶಿಧರ ಎಂ.ಕೋಟ್ಯಾನ್. ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸುಂಕದಕಟ್ಟೆ ನಿರಂಜನ ಸ್ವಾಮಿ […]
Read More
31-07-2016, 6:15 AM
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸುಜೀರು ದೈಯಡ್ಕ ಮನೆ, ತಿಮ್ಮಪ್ಪ ಪೂಜಾರಿ ಹಾಗೂ ಶ್ರೀಮತಿ ಪುಷ್ಪಾರವರ ಸುಪುತ್ರಿಯಾದ ರಮ್ಯ ಸುಜೀರ್ರವರು ತನ್ನ ವಿದ್ಯಾಭ್ಯಾಸದ ಜೊತೆಯಲ್ಲಿಯೇ ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿದವರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ತುಳು ಅಧ್ಯಯನ ವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿ.ಎ. ಬಿ.ಎಡ್. ಪದವಿಯನ್ನು ಪಡೆದಿರುತ್ತಾರೆ. ಸೈಂಟ್ ಜೋನ್ಸ್ ಪದವಿ ಪೂರ್ವ ಕಾಲೇಜು ಗಂಡಸಿ ಹಾಸನ ಇಲ್ಲಿ 1 ವರ್ಷ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಸೈಂಟ್ ಆನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲೆ […]
Read More
31-07-2016, 6:05 AM
ಬೆಳ್ತಂಗಡಿ ತಾಲೂಕಿನ ಕುದ್ಯಾಡಿ ಗ್ರಾಮದ ಭಿಮಕಜಿರಿ ಶ್ರೀ ಚಂದಯ್ಯ ಪೂಜಾರಿ-ಇಂದಿರಾ ದಂಪತಿಗಳ ಸುಪುತ್ರ ಡಾ| ಪ್ರವೀಣ್ ಬಿ. ಕುದ್ಯಾಡಿ ಇವರು 2007 ರಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಡಾ| ಪಿ. ಗುರುರಾಜ ಭಟ್ ಸ್ವರ್ಣ ಪದಕ ಸಹಿತ ಪ್ರಥಮ ರ್ಯಾಂಕ್ನೊಂದಿಗೆ ಎಂ.ಎ. ಪದವಿ (ಇತಿಹಾಸ) ಪಡೆದಿರುತ್ತಾರೆ. ಇಂತಹ ಸಾಧನೆಯ ಡಾ| ಕುದ್ಯಾಡಿಯವರು ಮೈಸೂರು ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಶೋಧಕ ಪ್ರವೃತ್ತಿಯಿಂದ ಪ್ರೊ| ಹನುಮನಾಯಕರ ಮಾರ್ಗದರ್ಶನದೊಂದಿಗೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಇತಿಹಾಸ (ಕ್ರಿ.ಶ. 10ನೇ […]
Read More
31-07-2016, 6:00 AM
ಮಾನವ ಸಂಪನ್ಮೂಲ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರೂ ಕೂಡಾ ತನ್ನ ಆಸಕ್ತಿಯ ಕ್ಷೇತ್ರ ಛಾಯಾಗ್ರಹಣದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸತತ 4 ಚಿನ್ನದ ಪದಕ ಸಹಿತ 7 ಪ್ರಶಸ್ತಿಗಳನ್ನು ಗಳಿಸಿ ಸಾಧನೆಗೆ ಇದಿರಿಲ್ಲ ಎಂಬಂತಹ ವಿಶೇಷ ಸ್ಥಾನಮಾನ ಗಳಿಸಿದ ಖ್ಯಾತ ಸಾಮಾಜಿಕ ಧುರೀಣ ಶ್ರೀ ಹರಿಕೃಷ್ಣ ಬಂಟ್ವಾಳ್, ಶಶಿಕಲಾ ದಂಪತಿಗಳ ಹೆಮ್ಮೆಯ ಸುಪುತ್ರ ಶ್ರೀ ನಿತ್ಯಪ್ರಕಾಶ್ ಎಚ್. ಎಸ್. ಬಂಟ್ವಾಳ್ರವರನ್ನು ಯುವ ಸಾಧನಾ ಪುರಸ್ಕಾರಕ್ಕೆ ಆಯ್ಕೆ ಮಾಡಲು ಯುವವಾಹಿನಿ ಸಂಸ್ಥೆ ಅತ್ಯಂತ ಹೆಮ್ಮೆ ಪಡುತ್ತದೆ. ಓರ್ವ ಹವ್ಯಾಸಿ ವಿಶೇಷ ಛಾಯಾಗ್ರಹಣ ಕ್ಷೇತ್ರದಲ್ಲಿ […]
Read More
31-07-2016, 5:56 AM
ಅವಿಷ್ಕಾರಗಳ ಹಿಂದೆ ಹೋದ ಎಲ್ಲರೂ ಯಶಸ್ವಿ ವಿಜ್ಞಾನಿಗಳಾಗಲು ಅಸಾಧ್ಯ. ಇದಕ್ಕೆ ಇತ್ಯಾತ್ಮಕ ಮನೋಭಾವ, ಸಂಶೋಧನಾ ಪ್ರವೃತ್ತಿ, ಕಾರ್ಯ ಸಾಧನೆಯ ಛಲ, ಅಸಾಧಾರಣ ಮನೋಬಲ ಇವೆಲ್ಲಕ್ಕೂ ಮಿಗಿಲಾಗಿ ಕಠಿಣ ಪರಿಶ್ರಮ ಮನೋದೃಷ್ಟಿ ಅತಿ ಮುಖ್ಯ. ಇವೆಲ್ಲ ಗುಣಗಳನ್ನು ಎಳವೆಯಿಂದಲೇ ಮೈಗೂಡಿಸಿಕೊಂಡು ತನ್ನ ಬುದ್ಧಿಮತ್ತೆಯಿಂದ ಸಂಶೋಧನಾ ಕ್ಷೇತ್ರದ ಭೌತಶಾಸ್ತ್ರ ವಿಭಾಗದಲ್ಲಿ ಡಾಕ್ಟರೇಟ್ ಗಳಿಸಿದ ಡಾ| ಪ್ರವೀಣ ಎಸ್.ಡಿ.ಯವರು ಎಲ್ಲರ ಗಮನ ಸೆಳೆದಿದ್ದಾರೆ. ಪ್ರಸ್ತುತ ಸುಳ್ಯದ ಕೆ.ವಿ.ಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭೌತಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ಶ್ರೀಯುತರು ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ವಿಜ್ಞಾನ […]
Read More
31-07-2016, 5:56 AM
ಬಿಲ್ಲವ ಸಮಾಜದ ಶೈಕ್ಷಣಿಕ ಪ್ರಗತಿಗೆ ಯುವವಾಹಿನಿಯು ಶ್ರಮಿಸುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿದ್ದ ಪ್ರತಿಭೆಯೊಂದು ಕಿರಿ ವಯಸ್ಸಿನಲ್ಲಿ ಹಿರಿಯರು ಮಾಡಲಾಗದ ಸಾಧನೆಗೈದಿದ್ದಾರೆ. ಸಮಾಜ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಅವರು ಬೇರಾರೂ ಅಲ್ಲ. ಪಿ.ಬಾಲಕೃಷ್ಣ ಪೂಜಾರಿ-ಮಲ್ಲಿಕಾ ಬಿ. ಪೂಜಾರಿ ದಂಪತಿಗಳ ಸುಪುತ್ರಿ ಮನಿಷಾ ಬಿ. ಪೂಜಾರಿ. ಕಾಲೇಜು ವಿದ್ಯಾಭ್ಯಾಸ ಹಂತದಿಂದ ಕಲಿಕೆಯ ಮುಂಚೂಣಿಯಲ್ಲಿದ್ದು ಪಿ.ಯು.ಸಿ ಪರೀಕ್ಷೆಯಲ್ಲಿ ಕಾಲೇಜಿಗೆ ದ್ವಿತೀಯ ಶ್ರೇಷ್ಠರಾಗಿ ಸಾಧನೆಗೈದ ಇವರು ತನ್ನ ಕಲಿಕೆಯಾದ್ಯಂತ ಅತ್ಯುನ್ನತ ಶ್ರೇಣಿಯ ಗಳಿಕೆ ಸಾಧಿಸಿರುವುದು ಉಲ್ಲೇಖನೀಯ. ಬಿ.ಕಾಂ ಪದವಿಯಲ್ಲಿ MGM College ಉಡುಪಿಯ […]
Read More