ಕೇಂದ್ರ ಸಮಿತಿ

ಡಾ. ಸದಾನಂದ ಕುಂದರ್ – ಅಧ್ಯಕ್ಷರು -2010-11

ಮಂಗಳೂರು ತಾಲೂಕಿನ ತಾಳಿಪಾಡಿ ಗ್ರಾಮದ ದಿ| ಸಂಜೀವ ಜಿ. ಅಮೀನ್ ಮತ್ತು ಶ್ರೀಮತಿ ಜಾನಕಿಯವರ ಸುಪುತ್ರರಾದ ಡಾ| ಸದಾನಂದ ಕುಂದರ್‌ರವರು ಸುಮಾರು 34 ವರ್ಷಗಳಿಂದ ನೆಲ್ಯಾಡಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಜಾದೂಗಾರರಾಗಿಯೂ ಖ್ಯಾತಿಯನ್ನು ಪಡೆದಿರುತ್ತಾರೆ. ಕಳೆದ 20 ವರ್ಷಗಳಿಂದ ಕರ್ನಾಟಕ, ಕೇರಳ, ಗೋವಾ ರಾಜ್ಯಗಳಲ್ಲಿ 900 ಕ್ಕೂ ಮಿಕ್ಕಿ ಜಾದೂ ಪ್ರದರ್ಶನಗಳನ್ನು ನೀಡಿ ಜನಮೆಚ್ಚುಗೆಯನ್ನು ಗಳಿಸಿರುತ್ತಾರೆ. ಆರೋಗ್ಯ ಮಾಹಿತಿಯಲ್ಲಿ ಜಾದೂ, ಜನಜಾಗೃತಿಗಾಗಿ ಜಾದೂ, ಬುದ್ಧಿಮಾಂದ್ಯರಿಗೆ ಜಾದೂ, ಗುಜರಾತ್ ಭೂಕಂಪ ಮತ್ತು ತ್ಸುನಾಮಿ ಸಂತ್ರಸ್ತರ ಪರಿಹಾರ ನಿಧಿಗಾಗಿ ಜಾದೂ ಹೀಗೆ ಹಲವು ಜನಹಿತ […]

Read More

ಯುವವಾಹಿನಿಯ 23ನೇ ವಾರ್ಷಿಕ ಸಮಾವೇಶ -2010

ಜವಾಹರಲಾಲ್ ನೆಹರು ಶತಮಾನೋತ್ಸವ ಸಭಾಂಗಣ (JNC), ಪಣಂಬೂರು ದಿನಾಂಕ :08-08-2010 ಉದ್ಘಾಟನೆ : ಶ್ರೀ ಶ್ರೀ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ರಾಮಕ್ಷೇತ್ರ, ಧರ್ಮಸ್ಥಳ ವಿಶೇಷಾಂಕ ಬಿಡುಗಡೆ : ಶ್ರೀ ಆನಂದ ಪೂಜಾರಿ, ಜಂಟಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಮುಖ್ಯ ಅತಿಥಿಗಳು : ಡಾ. ಗಣೇಶ್ ಅಮೀನ್ ಸಂಕಮಾರ್, ಉಪನ್ಯಾಸಕರು, ಕನ್ನಡ ವಿಭಾಗ, ಸಂತ ಅಲೋಶಿಯಸ್ ಪ.ಪೂ ಕಾಲೇಜು, ಮಂಗಳೂರು ಪ್ರೊ. ಆಶಾಲತಾ ಎಸ್. ಸುವರ್ಣ, ಉಪನ್ಯಾಸಕರು, ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಅಧ್ಯಕ್ಷತೆ : ಶ್ರೀ ಜಯರಾಮ […]

Read More

ಜಯರಾಮ ಕಾರಂದೂರ್ – ಅಧ್ಯಕ್ಷರು -2009-10

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಮನೆತನಗಳಾದ ಕಾರಂದೂರು ಹಾಗೂ ಪಡುಪಾಲ್ಜಾಲು ಮನೆತನದ ಪಡುಪಾಲ್ಜಾಲು ಪದ್ಮ ಪೂಜಾರಿ ಮತ್ತು ಶ್ರೀಮತಿ ಲಕ್ಷ್ಮಿ ಪಿ. ಪೂಜಾರಿಯವರ ಸುಪುತ್ರರಾದ ಇವರು ಬಿ.ಎ. ಪದವೀಧರ. 7ನೇ ತರಗತಿಯಲ್ಲಿ ಶಾಲಾ ವಿದ್ಯಾರ್ಥಿ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. M.C.F. Ltd ಕಂಪೆನಿಯಲ್ಲಿ ಸಾರ್ವಜನಿಕ ಸಂಪರ್ಕ ವಿಭಾಗದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ, ಎರಡು ಬಾರಿ ಸಿಂಚನ ಜಾಹಿರಾತಿನ ಸಂಚಾಲಕರಾಗಿ ಯುವವಾಹಿನಿ ವಾರ್ಷಿಕ ಸಮಾವೇಶದ ಸಂಚಾಲಕರಾಗಿ, ಮಂಗಳೂರು ಶ್ರೀ ಗೋಕರ್ಣನಾಥ ಕೋ ಓಪರೇಟಿವ್ […]

Read More

ಉಬಾರ ತುಡರ್ ಮೂಲ್ಕಿ ಯುವವಾಹಿನಿ ಪ್ರಥಮ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ  ಯುವವಾಹಿನಿ(ರಿ) ಉಪ್ಪಿನಂಗಡಿ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು ಯುವವಾಹಿನಿ(ರಿ) ಮೂಲ್ಕಿ ಘಟಕ ಪ್ರಥಮ, ಯುವವಾಹಿನಿ(ರಿ) ಸಸಿಹಿತ್ಲು ಘಟಕ ದ್ವಿತೀಯ ಹಾಗೂ  ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕ ತೃತೀಯ ಪ್ರಶಸ್ತಿ ಗಳಿಸಿತು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅದ್ಯಕ್ಷರಾದ ಜಯರಾಮ ಕಾರಂದೂರು ಸಮಾರೋಪ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು ಮಾಜಿ ಸಂಸದರಾದ […]

Read More

ಉಬಾರ ತುಡರ್ ಸಾಂಸ್ಕೃತಿಕ ಲೋಕ ಅನಾವರಣ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ  ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಮದನ ಪೂಜಾರಿ ಕುದ್ಮಾರು ದೀಪ ಬೆಳಗಿಸಿ ತೆಂಗಿನ ಪಿಂಗಾರ ಅರಳಿಸುವುದರ ಮೂಲಕ ಉಬಾರ ತುಡರ್ ಉದ್ಘಾಟಿಸಿದರು. ದಿನಾಂಕ 21.02.2010 ರಂದು ಆದಿತ್ಯವಾರ. ಜರಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಗೂ […]

Read More

ಯುವವಾಹಿನಿಯ 22ನೇ ವಾರ್ಷಿಕ ಸಮಾವೇಶ -2009

ರುಕ್ಕುರಾಮ್ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂಘ, ಮೂಲ್ಕಿ ದಿನಾಂಕ :  02-08-2009 ಉದ್ಘಾಟನೆ : ಶ್ರೀ ಕೆ. ರಾಘು ಸುವರ್ಣ, ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ) ಮುಲ್ಕಿ ಮುಖ್ಯ ಅತಿಥಿಗಳು : ಡಾ. ಕೆ. ಎನ್. ವಿಜಯ್ ಪ್ರಕಾಶ್, ಆಪ್ತಕಾರ್ಯದರ್ಶಿ, ಜೀವಿಶಾಸ್ತ್ರ ಪರಿಸರ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು, ಬೆಂಗಳೂರು ಶ್ರೀ ರಾಜ್‌ಕುಮಾರ್, ಅಧ್ಯಕ್ಷರು, ಗಲ್ಫ್ ಬಿಲ್ಲವರ ಒಕ್ಕೂಟ ಅಧ್ಯಕ್ಷರು, ಗುರು ಸೇವಾ ಸಮಿತಿ, ಬಹರೈನ್ ಬಿಲ್ಲವಾಸ್ ವಿಶೇಷಾಂಕ ಬಿಡುಗಡೆ : ಶ್ರೀ.ಬಿ. ಸುಧಾಕರ, ಹಿರಿಯ ವಿಭಾಗಾಧಿಕಾರಿ, ದಿ. […]

Read More

ಮೂಲ್ಕಿ ಚಂದ್ರಶೇಖರ್ ಸುವರ್ಣ – ಅಧ್ಯಕ್ಷರು -2008-09

ಯುವವಾಹಿನಿ ಕೇಂದ್ರ ಸಮಿತಿಯ 2008-09 ನೇ ಸಾಲಿನ ಅಧ್ಯಕ್ಷರಾಗಿರುವ ಇವರು ಪ್ರಸಕ್ತ ಮೂಲ್ಕಿ ಬಿಲ್ಲವ ಸಂಘದ ಜೊತೆ ಕಾರ್ಯದರ್ಶಿಯಾಗಿ, ಬಪ್ಪನಾಡು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿದ್ದು ಮೂಲ್ಕಿ ದಿ ಯೂನಿಯನ್ ಕ್ಲಬ್‌ನ ಖಜಾಂಚಿಯಾಗಿ, ಮೂಲ್ಕಿ ಮೂರ್ತೆದಾರರ ಸೇವಾ ಸೊಸೈಟಿಯ ನಿರ್ದೇಶಕರಾಗಿರುತ್ತಾರೆ. ಹಾಗೂ ಮೂಲ್ಕಿ ಯುವವಾಹಿನಿ(ರಿ) ಘಟಕದ ಮಾಜಿ ಅಧ್ಯಕ್ಷರಾಗಿರುತ್ತಾರೆ. ಮೂಲ್ಕಿ ಚೆನ್ನಪ್ಪ ಸುವರ್ಣ ಮತ್ತು ಲಲಿತ ಸಿ. ಸುವರ್ಣರ ಸುಪುತ್ರನಾಗಿ 2-8-1960 ರಂದು ಜನಿಸಿದರು. ಪತ್ನಿ- ಚಿತ್ರಾ ಸಿ. ಸುವರ್ಣ, ಮಕ್ಕಳು – ಗಗನ್ ಸುವರ್ಣ, ದೀಕ್ಷಾ ಸುವರ್ಣ ಕಲಾ […]

Read More

ಯುವವಾಹಿನಿಯ 21ನೇ ವಾರ್ಷಿಕ ಸಮಾವೇಶ -2008

ಪುರಭವನ, ಉಡುಪಿ ದಿನಾಂಕ : 02-08-2008 ಉದ್ಘಾಟನೆ : ಶ್ರೀ ಬೋಳ ಪೂಜಾರಿ ಕಪ್ಪೆಟ್ಟು, ಉದ್ಯಮಿ, ಉಡುಪಿ ಮುಖ್ಯ ಅತಿಥಿಗಳು : ಶ್ರೀ ರಾಜು ಪೂಜಾರಿ, ಅಧ್ಯಕ್ಷರು, ಉಡುಪಿ ಜಿಲ್ಲಾ ಪಂಚಾಯತ್ ವಿಶೇಷಾಂಕ ಬಿಡುಗಡೆ : ಶ್ರೀ ದೇವಾನಂದ, ಚಾರ್ಟರ್ಡ್ ಅಕೌಂಟೆಂಟ್ಸ್, ಉಡುಪಿ ಶಿಖರೋಪನ್ಯಾಸ : ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಅಧ್ಯಕ್ಷತೆ : ಪ್ರತಿಭಾ ಪುರಸ್ಕಾರ : 2008 ಕು| ಸಂಜನ್ ಎಸ್. ಅಮೀನ್, ಉಡುಪಿ– ನಾಟ್ಯಲೋಕ ಶ್ರೀ ನವೀನ್ ರಾಘು ಪೂಜಾರಿ, ಕಟಪಾಡಿ– ಬಹುಮುಖ ಪ್ರತಿಭೆ […]

Read More

ರವಿರಾಜ್ ಕುಮಾರ್ – ಅಧ್ಯಕ್ಷರು -2007-08

ಶ್ರೀಯುತ ಬಿ. ವಾಸು ಮತ್ತು ಶ್ರೀಮತಿ ಕುಸುಮ ದಂಪತಿಯವರ ಸುಪುತ್ರ ಶ್ರೀ ರವಿರಾಜ ಕುಮಾರ್ 10.04.1963 ರಂದು ಉಡುಪಿಯ ಉದ್ಯಾವರದಲ್ಲಿ ಜನಿಸಿದರು. ಬಿ.ಕಾಂ., ಎಲ್.ಎಲ್.ಬಿ ಪದವೀಧರರಾದ ಇವರು ಉಡುಪಿ ಹೃದಯ ಭಾಗದಲ್ಲಿರುವ ಮೈತ್ರಿ ಕಾಂಪ್ಲೆಕ್ಸ್‌ನಲ್ಲಿ ಸ್ವಂತ ಕಛೇರಿಯೊಂದಿಗೆ ವಕೀಲ ವೃತ್ತಿ ನಡೆಸುತ್ತಿದ್ದಾರೆ. ಉಡುಪಿ ಜಿಲ್ಲಾ ನ್ಯಾಯಾಲಯದ ವಕೀಲರಾದ ಶ್ರೀಯುತರು ಹಲವಾರು ಇನ್ಸೂರೆನ್ಸ್ ಕಂಪೆನಿಗಳಿಗೆ ಸಲಹಾ ವಕೀಲರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮೂರು ವರ್ಷಗಳವರೆಗೆ ಸರಕಾರೀ ಹೆಣ್ಮಕ್ಕಳ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ, 1995-2005 ರ ವರೆಗೆ ಸರಕಾರೀ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ದುಡಿದ ಅನುಭವ […]

Read More

ನೇಮಿರಾಜ್ ಪಿ. – ಅಧ್ಯಕ್ಷರು -2006-07

ಮಂಗಳೂರಿನ ಮರೋಳಿ ಕುಲಶೇಖರ ನಿವಾಸಿಯಾಗಿರುವ ನೇಮಿರಾಜ್ ಓರ್ವ ಉತ್ತಮ ಸಂಘಟಕರು, ಕಲಾಪೋಷಕರಾಗಿ ಬೆಳೆದವರು. ನಾಯಕತ್ವ ಗುಣವನ್ನು ತನ್ನೊಡಲಲ್ಲೇ ತುಂಬಿಕೊಂಡು ಬಂದಿರುವಂತಹ ಶ್ರೀಯುತರು ಯುವವಾಹಿನಿಯ ಸ್ಥಾಪಕ ಸದಸ್ಯರಾಗಿರುವುದರೊಂದಿಗೆ ಪ್ರತಿಯೊಂದು ಕಾರ್ಯಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡವರು. ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಶ್ರೀಯುತರು 2004ರಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವರು. ಕೇಂದ್ರ ಸಮಿತಿಯ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ 2006-07ನೇ ಸಾಲಿನಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುತ್ತಾರೆ. ’ಜೈ ಭಾರತ್‌ಮಾತಾ ಎಜುಕೇಶನ್ ಸೊಸೈಟಿ, ಮಂಡ್ಯ’ ಇದರ ಅಧ್ಯಕ್ಷರಾಗಿ, ಆತ್ಮಶಕ್ತಿ ವಿವಿದೋದ್ಧೇಶ ಸಹಕಾರಿ ಸಂಘ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!