Yuvavahini

ವಿದ್ಯೆ

ವಿದ್ಯಾರ್ಥಿವೇತನ, ಯುವಸಿರಿ–ಶ್ರೀ ಹರಿ ಪ್ರಶಸ್ತಿ ಪ್ರದಾನ; ಗುರು ಸಂದೇಶ ಗೋಷ್ಠಿ

ಮೂಡುಬಿದಿರೆ, ಆ. 2: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಮಹತ್ವ, ಸಾಮಾಜಿಕ ಜವಾಬ್ದಾರಿ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಿದ್ದ ‘ಅರಿವು–2026’ ಕಾರ್ಯಕ್ರಮವು ಮೂಡುಬಿದಿರೆಯ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಮೃತ ಸಭಾಭವನದಲ್ಲಿ ಯಶಸ್ವಿಯಾಗಿ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಅಧಿಕಾರಿ ಜಿನೇಂದ್ರ […]

Read More

ಮಹಿಳೆಯರು ಆತ್ಮವಿಶ್ವಾಸದಿಂದ ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು: ರೇಖಾ ಗೋಪಾಲ್

ಮಂಗಳೂರು, ಜು. 30: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸೀಡಾಕ್), ಧಾರವಾಡ, ಸೀಡಾಕ್ ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು, ಜಿಲ್ಲಾ ಕೌಶಲ್ಯ ಮಿಷನ್, ಮಂಗಳೂರು, ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ ಚೌಕಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜುಲೈ 30ರಂದು ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ […]

Read More

ನಾಯಕತ್ವ ಗುಣಗಳು ಸಂಘಟನೆಯ ಯಶಸ್ಸಿನ ಭದ್ರ ಬುನಾದಿ : ರಾಜೇಶ್ ಎಸ್. ಬಲ್ಯ

ಬೆಳ್ತಂಗಡಿ, ಜು. 26 : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಗಳ ಕುರಿತು ಅರಿವು ಮೂಡಿಸಿ, ಸಂಘಟನೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುವ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವು ಭಾನುವಾರ ಯಶಸ್ವಿಯಾಗಿ ನಡೆಯಿತು. ಘಟಕದ ಅಧ್ಯಕ್ಷೆ ಲೀಲಾವತಿ ಪಣಕಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡಿಕೊಡಿ ಉದ್ಘಾಟಿಸಿದರು. ಅವರು ಮಾತನಾಡಿ, ಸಂಘಟನೆಯ ಬೆಳವಣಿಗೆಯಲ್ಲಿ ತರಬೇತಿ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿ, ನೂತನ ಕಾರ್ಯಕಾರಿ ಸಮಿತಿಯ […]

Read More

ಎಸ್‌ಎಸ್‌ಎಲ್‌ಸಿ, ಪಿಯುಸಿ ಸಾಧಕರಿಗೆ ಸನ್ಮಾನ

ಮಾಣಿ, ಜುಲೈ 16: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಘಟಕದ ಸದಸ್ಯರ ಮಕ್ಕಳಿಗೆ ‘ಪ್ರತಿಭಾ ಗೌರವ ಅಭಿನಂದನಾ ಕಾರ್ಯಕ್ರಮ’ ಆಯೋಜಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಆಧ್ಯಾ ಎಂ.ಎಸ್., ಗ್ರೀಷ್ಮಾ, ಪ್ರಗತಿ ಆರ್. ಸಾಲ್ಯಾನ್, ಹನ್ಶಿಕಾ ಎಸ್.ಡಿ. ಪೂಜಾರಿ, ಕೌಶಿಕ್, ದಿಶಾ ಕೆ. ಪೂಜಾರಿ, ದಿಶಾಂತ್ ಪೂಜಾರಿ ಹಾಗೂ ಪೂರ್ವಿ ಬಿ.ಕೆ. ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದ […]

Read More

ಉದ್ಯಮಶೀಲತೆಯಿಂದ ಮಹಿಳೆಯರು ಸ್ವಾವಲಂಬಿಗಳಾಗಬೇಕು : ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜಾ

ಮಂಗಳೂರು, ಜೂನ್ 30: ಮಹಿಳೆಯರು ಸ್ವಂತ ಉದ್ಯಮ ಆರಂಭಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ದಿಟ್ಟ ನಿರ್ಧಾರ ಮತ್ತು ಆತ್ಮವಿಶ್ವಾಸದಿಂದ ಯಾವುದೇ ಕ್ಷೇತ್ರದಲ್ಲಿಯೂ ಯಶಸ್ಸು ಸಾಧಿಸಲು ಸಾಧ್ಯ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜಾ ಹೇಳಿದರು. ಅವರು ಮಹಿಳಾ ಮಂಡಲ (ರಿ.) ಕುಳಾಯಿ, ಮಂಗಳೂರಿನಲ್ಲಿ ನಡೆದ “ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಮಾತನಾಡಿ, ಮಹಿಳೆಯರು ಸಣ್ಣ-ಪುಟ್ಟ […]

Read More

“ವಿದ್ಯೆ, ಉದ್ಯೋಗ, ಸಂಪರ್ಕ – ಕಲಿಯೋಣ, ಬೆಳೆಯೋಣ, ಸಮಾಜದ ಸೇವೆಗೆ ಕೈಜೋಡಿಸೋಣ!”

ಪರಪಾದೆ, ಜೂನ್ 30: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಪರಪಾದೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 135 ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊಡೆಗಳನ್ನು ವಿತರಿಸುವ ಸಮಾಜಮುಖಿ ಸೇವಾ ಕಾರ್ಯಕ್ರಮ ನಡೆಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆ ಗೀತಾ ವಸಂತ್ ವಹಿಸಿದ್ದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ವಂದೀಪ್, ಕಾರ್ಯಕ್ರಮದ ಸಂಚಾಲಕಿ ಹಾಗೂ ವಿದ್ಯಾರ್ಥಿ ಸಂಘಟನೆ ನಿರ್ದೇಶಕಿ ವೀಣಾ ಭಾಸ್ಕರ್, ಮಾರ್ಗದರ್ಶಕರಾದ ಜಯಾನಂದ ಅಮೀನ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ರೇಖಾ […]

Read More

“ಸದಸ್ಯತ್ವದ ಅರಿವಿನಿಂದ ನಾಯಕತ್ವದ ಬೆಳಕಿನೆಡೆಗೆ ಯುವ ಪಯಣ”: ರಾಜೇಶ್ ಸುವರ್ಣ

ಮಾಣಿ: ಯುವ ಮನಸ್ಸುಗಳಲ್ಲಿ ಕನಸುಗಳ ಕಿಡಿ ಹೊತ್ತಿಸಿ, ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. “ಯುವಶಕ್ತಿ ಜಾಗೃತಿಯಾದರೆ ಸಮಾಜದ ನಾಳೆ ಬೆಳಗುತ್ತದೆ” ಎಂಬ ಆಶಯದೊಂದಿಗೆ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಾಮಾಜಿಕ ಜಾಲತಾಣ ಹಾಗೂ ವೆಬ್‌ಸೈಟ್ ಸಂಪಾದಕರಾದ ರಾಜೇಶ್ ಸುವರ್ಣ ಅವರು ಯುವಕರಿಗೆ ಸದಸ್ಯತ್ವದ ಮಹತ್ವ, ನಾಯಕತ್ವದ ಗುಣಗಳು […]

Read More

ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಸುಳ್ಯ : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಕೋಶಾಧಿಕಾರಿ ಹರೀಶ್ ದೋಳ ಅವರ ನಿವಾಸದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ಹಾಗೂ ಅವರ ಕುಟುಂಬದವರಿಗಾಗಿ ವಿವಿಧ ಮೋಜಿನ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕುಟುಂಬ ಸದಸ್ಯರ ಪರಸ್ಪರ ಒಡನಾಟ ಮತ್ತು ಸೌಹಾರ್ದತೆಯನ್ನು ವೃದ್ಧಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ […]

Read More

ಜ್ಞಾನ ಮತ್ತು ಸಂಸ್ಕಾರಗಳೊಂದಿಗೆ ಪಡೆದ ಶಿಕ್ಷಣವು ವ್ಯಕ್ತಿಯನ್ನು ಉತ್ತಮ ನಾಗರಿಕನನ್ನಾಗಿ ರೂಪಿಸುತ್ತದೆ : ಯಶೋಧರ ಬಂಗೇರ

ಅಳಕೆ : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಶ್ರೀ ನಾರಾಯಣಗುರುಗಳ ” ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ” ಎಂಬ ಸಂದೇಶವು ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು. ಜ್ಞಾನ ಮತ್ತು ಸಂಸ್ಕಾರಗಳೊಂದಿಗೆ ಪಡೆದ ಶಿಕ್ಷಣವು ವ್ಯಕ್ತಿಯನ್ನು ಉತ್ತಮ ನಾಗರಿಕನನ್ನಾಗಿ ರೂಪಿಸಿ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದರು. ಶಿಕ್ಷಣದ ಮೂಲಕ ಸಮಾನತೆ, ಸಹೋದರತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ಬೆಳೆಸಿಕೊಂಡು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಂತೆ […]

Read More

ಸಮಾಜಸೇವೆಯಲ್ಲಿ ಯುವವಾಹಿನಿಯ ನಡೆ ಶ್ಲಾಘನೀಯ : ವೈ ಭರತ್ ಶೆಟ್ಟಿ

ಕುಪ್ಪೆಪದವು : “ನಾರಾಯಣ ಗುರುಗಳ ತತ್ವದಂತೆ ‘ವಿದ್ಯೆ–ಉದ್ಯೋಗ–ಸಂಪರ್ಕ’ ಎಂಬ ಧ್ಯೇಯೋದ್ದೇಶದೊಂದಿಗೆ ರಾಜ್ಯವ್ಯಾಪಿ ಬೆಳೆಯುತ್ತಿರುವ ಯುವವಾಹಿನಿ ಸಂಸ್ಥೆಯು, ಯುವಶಕ್ತಿಯನ್ನು ಸಮಾಜಸೇವೆಯತ್ತ ಕೊಂಡೊಯ್ಯುತ್ತಿರುವುದು ಹೆಮ್ಮೆಯ ವಿಚಾರ,” ಎಂದು ಶಾಸಕರಾದ ವೈ ಭರತ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕುಪ್ಪೆಪದವು-ಎಡಪದವು ಘಟಕದ ವತಿಯಿಂದ ವಿದ್ಯಾನಿಧಿ ಸಹಾಯಾರ್ಥವಾಗಿ ಕಿಲೆಂಜಾರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಘಟಕವು ಯುವಜನರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದು ಅವರು ಶ್ಲಾಘಿಸಿದರು. ಪಂದ್ಯಕೂಟವನ್ನು ಕಿಲೆಂಜಾರು ಅರಮನೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!