Yuvavahini

ಬಂಟ್ವಾಳ

ಬ್ರೈನ್ ಟ್ಯೂಮರ್ ಪೀಡಿತರಿಗೆ ಯುವವಾಹಿನಿ ಬಂಟ್ವಾಳದಿಂದ ₹25 ಸಾವಿರ ನೆರವು

ಬಂಟ್ವಾಳ, ಆ. 3: ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿರುವ ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರುವ ರಾಮಚಂದ್ರ ಸಾಲ್ಯಾನ್ ಅವರಿಗೆ ಸೇವಾ ಯೋಜನೆಯಡಿ ₹25,000 ಮೊತ್ತದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು. ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಈ ಸೇವಾ ಯೋಜನೆಯನ್ನು ರೂಪಿಸಲಾಗಿದ್ದು, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಸಮ್ಮುಖದಲ್ಲಿ ನೆರವಿನ ಮೊತ್ತವನ್ನು ಫಲಾನುಭವಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಮಾರ್ಗದರ್ಶಕರಾದ ಭುವನೇಶ್ ಪಚ್ಚಿನಡ್ಕ ಚಕ್ ಹಸ್ತಾಂತರ ಮಾಡಿದರು ಯುವವಾಹಿನಿ ಬಂಟ್ವಾಳ […]

Read More

ಎಲ್ಲ ಧರ್ಮಗಳ ಸಾರ – ಮಾನವೀಯತೆಯೇ ಶ್ರೇಷ್ಠ ಧರ್ಮ: ಪ್ರಶಾಂತ್ ಅನಂತಾಡಿ

ಕಲ್ಲಡ್ಕ, ಜುಲೈ 31: “ಎಲ್ಲಾ ಮತಧರ್ಮಗಳಲ್ಲಿರುವ ಉತ್ತಮಾಂಶಗಳ ಸಾರವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಆಧ್ಯಾತ್ಮಿಕತೆ. ಶ್ರೀ ನಾರಾಯಣಗುರುಗಳ ಸಂದೇಶಗಳಲ್ಲಿ ಈ ವಿಶಾಲ ಮಾನವೀಯ ದೃಷ್ಟಿಕೋನ ಸ್ಪಷ್ಟವಾಗಿ ಕಾಣುತ್ತದೆ” ಎಂದು ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕರಾದ ಪ್ರಶಾಂತ್ ಅನಂತಾಡಿ ಹೇಳಿದರು.ಅವರು ಜುಲೈ 31ರಂದು ಮುರಬೈಲು–ಗೊಳ್ತಮಜಲು, ಕಲ್ಲಡ್ಕದ ಮೋಹನ್ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ – 73ನೇ ಮಾಲಿಕೆ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿದರು.ಗುರುಗಳ ಚಿಂತನೆಗಳನ್ನು ಅರಿತಾಗ ಭಗವಾನ್ ಬುದ್ಧ, ಆದಿ […]

Read More

ಉಚಿತ ಆರೋಗ್ಯ, ಕಣ್ಣಿನ ತಪಾಸಣೆ ಹಾಗೂ ರಕ್ತದಾನ ಶಿಬಿರ

ಬಂಟ್ವಾಳ, ಜು. 25 : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಾಗೂ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಐ.ಎಂ.ಎ. ಮಂಗಳೂರು ಶಾಖೆಯ ಸಹಕಾರದೊಂದಿಗೆ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಶನಿವಾರ ಯಶಸ್ವಿಯಾಗಿ ನಡೆಯಿತು. ಆರೋಗ್ಯ ಜಾಗೃತಿ ಹಾಗೂ ಸಮಾಜಸೇವೆಯ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಯುವವಾಹಿನಿಯ ಸುಮಾರು 70 ಮಂದಿ ಸದಸ್ಯರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ […]

Read More

ಗುರುತತ್ವವಾಹಿನಿ 72ನೇ ಮಾಲಿಕೆ

ಬಂಟ್ವಾಳ, ಜು. 23 : ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಗುರುತತ್ವವಾಹಿನಿ 72ನೇ ಮಾಲಿಕೆ ಕಾರ್ಯಕ್ರಮವು ಗುರುವಾರ ಸಜೀಪ ಮುನ್ನೂರು ಗ್ರಾಮದ ಪುರುಷೋತ್ತಮ ಪೂಜಾರಿ ಮಿತ್ತಕಟ್ಟ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಗುರುತತ್ವ ಸಂದೇಶ ನೀಡಿದ ಜಯಶಂಕರ್ ಕಾನ್ಸಾಲೆ ಅವರು, ಶ್ರೀ ನಾರಾಯಣ ಗುರುಗಳ ತತ್ವಗಳು ಸಮಾಜದಲ್ಲಿ ಸಮಾನತೆ, ಸಹೋದರತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಶಾಶ್ವತ ಸಂದೇಶಗಳಾಗಿವೆ. ಗುರುಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ವ್ಯಕ್ತಿಯೊಂದಿಗೆ ಸಮಾಜವೂ ಅಭಿವೃದ್ಧಿಯತ್ತ ಸಾಗುತ್ತದೆ ಎಂದು ಹೇಳಿದರು. ಯುವವಾಹಿನಿ […]

Read More

ಪ್ರಸ್ತುತ ಜೀವನದಲ್ಲೂ ನಾರಾಯಣಗುರು ಸಂದೇಶ ಪ್ರಸ್ತುತವಾಗಿದೆ: ಶಿಕ್ಷಕಿ ತ್ರಿವೇಣಿ ರಮೇಶ್

ಬಂಟ್ವಾಳ, ಜುಲೈ 16: “ಶ್ರೀ ನಾರಾಯಣಗುರುಗಳ ಸಂದೇಶಗಳು ಇಂದಿನ ಸಮಾಜ ಮತ್ತು ಜೀವನ ಮೌಲ್ಯಗಳಿಗೆ ಅತ್ಯಂತ ಪ್ರಸ್ತುತವಾಗಿವೆ. ಸಮಾನತೆ, ಮಾನವೀಯತೆ, ಶಿಕ್ಷಣ ಹಾಗೂ ಸೌಹಾರ್ದತೆಯ ಕುರಿತು ಗುರುದೇವರು ನೀಡಿದ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ,” ಎಂದು ಶಿಕ್ಷಕಿ ತ್ರಿವೇಣಿ ರಮೇಶ್ ಹೇಳಿದರು. ಅವರು ದಿನಾಂಕ 16-07-2026 ರಂದು ನರಹರಿನಗರ, ಕಲ್ಲಡ್ಕದ ಶೇಖರ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ಗುರುತತ್ವವಾಹಿನಿ ಮಾಲಿಕೆ–71ರ ಭಜನಾ […]

Read More

ಪ್ರತಿ ಮನೆಯಲ್ಲಿ ಒಂದು ಗಿಡ ನೆಡುವ ಸಂಕಲ್ಪ

ಬಂಟ್ವಾಳ, ಜುಲೈ 16: ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ಯುವವಾಹಿನಿ (ರಿ.) ಬಂಟ್ವಾಳ ಘಟಕವು ತನ್ನ ನೂತನ ಕಾರ್ಯಕಾರಿ ಸಮಿತಿಯ ವಿಶೇಷ ಯೋಜನೆಯಾಗಿ “ಮನೆ ಮನೆ ಹಸಿರು ಅಭಿಯಾನ”ಕ್ಕೆ ಚಾಲನೆ ನೀಡಿದೆ. ಘಟಕದ ಜಂಟಿ ಸಭೆಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಯುವವಾಹಿನಿಯ “ಹಸಿರುಯಾನ” ಯೋಜನೆಯಡಿ ಘಟಕದ ವ್ಯಾಪ್ತಿಯ ಪ್ರತಿಯೊಂದು ಸದಸ್ಯರ ಮನೆಯಲ್ಲಿ ಕನಿಷ್ಠ ಒಂದು ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸುವ ಸಂಕಲ್ಪ ಕೈಗೊಳ್ಳಲಾಯಿತು. ಅಭಿಯಾನಕ್ಕೆ ಯುವವಾಹಿನಿ (ರಿ.) ಬಂಟ್ವಾಳ […]

Read More

ಪ್ರಕೃತಿ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ದಿನೇಶ್ ಸುವರ್ಣ ರಾಯಿ

ಕಲ್ಲಡ್ಕ, ಜುಲೈ 9: “ಪ್ರಕೃತಿಯ ನಾಶ ಜಗತ್ತಿನ ಸರ್ವನಾಶ” ಎಂಬುದು ಬ್ರಹ್ಮಶ್ರೀ ನಾರಾಯಣ ಗುರುಗಳ ಪರಿಸರ ಸಂರಕ್ಷಣೆಯ ಸಂದೇಶದ ಸಾರವಾಗಿದ್ದು, ಪ್ರಕೃತಿಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಹೇಳಿದರು. ಅವರು ಜುಲೈ 9ರಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ ‘ಗುರುತತ್ವವಾಹಿನಿ’ 70ನೇ ಮಾಲಿಕೆ ಕಾರ್ಯಕ್ರಮದಲ್ಲಿ, ವೀರಕಂಭ ಗ್ರಾಮದ ಗೋಳಿಮಾರು ಜನಾರ್ದನ ಪೂಜಾರಿಯವರ ನೂತನ ಗೃಹ “ಬ್ರಹ್ಮಶ್ರೀ” ನಿವಾಸದಲ್ಲಿ ಗುರುಸಂದೇಶ ನೀಡುತ್ತಾ ಮಾತನಾಡಿದರು. […]

Read More

ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಅನುಕರಣೀಯ : ಭುವನೇಶ್ ಪಚ್ಚಿನಡ್ಕ

ಬಂಟ್ವಾಳ : ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳು ನಿಜಕ್ಕೂ ಅನುಕರಣೀಯವಾಗಿವೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು. ಅವರು ಜೂನ್ 21 ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 38 ವರ್ಷಗಳಿಂದ ಯುವವಾಹಿನಿ ಯುವಜನರನ್ನು ಒಗ್ಗೂಡಿಸಿ ಶಿಕ್ಷಣ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!