ಎಕ್ಕಾರು-ಪೆರ್ಮುದೆ

ಸ್ವಚ್ಛತಾ ಕಾರ್ಯಕ್ರಮ

ದಿನಾಂಕ 17/11/2019 ರಂದು ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಘಟಕದ ವತಿಯಿಂದ ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಇದರ ವಠಾರದ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು. ಅಧ್ಯಕ್ಷರಾದ ಸಂದೇಶ್ ಪೂಜಾರಿ, ಉಪಾಧ್ಯಕ್ಷರಾದ ಚಂದ್ರಹಾಸ ಪೂಜಾರಿ, ಹಿರಿಯರಾದ ಪ್ರದೀಪ್ ಕುಮಾರ್ ಸುವರ್ಣ, ವಿನೋದ್ ಸಾಲ್ಯಾನ್ ಸೇರಿದಂತೆ ಒಟ್ಟು 12 ಸದಸ್ಯರು ಹಾಜರಿದ್ದರು.

Read More

ಮಕ್ಕಳಿಗೆ ಛದ್ಮವೇಷ ಸ್ಪರ್ಧೆ

ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಹಾಗು ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಜಂಟಿ ಆಶ್ರಯದಲ್ಲಿ 14/11/2019 ಮಕ್ಕಳ ದಿನಾಚರಣೆಯಂದು ಅಂಗನವಾಡಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತ ಮಕ್ಕಳಿಗೆ ಬಹುಮಾನ ಹಾಗು ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರೋತ್ಸಾಹಕ ಬಹುಮಾನ ನೀಡಲಾಯಿತು. ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಅಧ್ಯಕ್ಷರಾದ ಸಂದೇಶ್ ಪೂಜಾರಿ, ಗ್ರಾಮ ಪಂಚಾಯತ್ ಪೆರ್ಮುದೆ ಇದರ ಅಧ್ಯಕ್ಷರಾದ ಸರೋಜ, ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಹಿರಿಯ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ, ಚಂದ್ರಕಲಾ ಹಾಗು ಇತರ ಸದಸ್ಯರು ಉಪಸ್ಥಿತರಿದ್ದರು.

Read More

ರಾಧೆ-ಕೃಷ್ಣ ಸ್ಪರ್ಧೆ‌ 2019

ಯುವವಾಹಿನಿ(ರಿ)ಎಕ್ಕಾರು-ಪೆರ್ಮುದೆ ಹಾಗು ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಇದರ ಜಂಟಿ ಆಶ್ರಯದಲ್ಲಿ ರಾಧೆ-ಕೃಷ್ಣ ಸ್ಪರ್ಧೆ‌ ೨೦೧೯ ದಿನಾಂಕ ೨೫/೦೮/೨೦೧೯ ರಂದು ಬಿಲ್ಲವ ಸಮಾಜ ಸೇವಾ ಸಂಘ ದ ಸಭಾ ಭವನ ದಲ್ಲಿ ಜರುಗಿತ್ತು. ಸಭೆಯ ಅಧ್ಯಕ್ಷತೆಯನ್ನು ಸಂದೇಶ್ ಪೂಜಾರಿ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಘದ ಗೌರವ ಅಧ್ಯಕ್ಷರಾದ ಯಾದವ ಕೋಟ್ಯಾನ್, ಪ್ರದೀಪ್ ಕುಮಾರ್ ಸುವರ್ಣ, ರಮಾನಂದ‌ ಸಾಲ್ಯಾನ್, ಉಪಾಧ್ಯಕ್ಷರಾದ ಚಂದ್ರಹಾಸ ಪೂಜಾರಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ – ಅಕ್ಷರ ಎಕ್ಕಾರು, ದ್ವಿತೀಯ […]

Read More

ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ 19

ಎಕ್ಕಾರು ಪೆರ್ಮುದೆ : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ.), ಎಕ್ಕಾರು ಪೆರ್ಮುದೆ ಘಟಕದ ಆತಿಥ್ಯದಲ್ಲಿ ವಿಶು ಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ 19 ನಡೆಯಿತು. ಯುವವಾಹಿನಿ ರಿ‌. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಿತಿಯ ಮಾಜಿ ಸಂಚಾಲಕರಾದ ಕಿಶೋರ್ ಬಿಜೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾಹಿತ್ಯ ಲೋಕದ ದಿಗ್ಗಜ ವಿಶುಕುಮಾರ್ ಅವರ ಸಾಹಿತ್ಯ ಕ್ಷೇತ್ರ, ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, […]

Read More

ಯುವವಾಹಿನಿ(ರಿ) ಎಕ್ಕಾರು ಪೆರ್ಮುದೆ ಘಟಕದಿಂದ ಸಹಾಯ ಹಸ್ತ

ಎಕ್ಕಾರು ಪೆರ್ಮುದೆ : ಮನನೊಂದ ಅಶಕ್ತ ಸಮಾಜ ಬಾಂಧವರ ಸಹಾಯಕ್ಕೆ ಸದಾ ಸಿದ್ದ ಎನ್ನುವ ಯುವವಾಹಿನಿ(ರಿ) ಎಕ್ಕಾರು ಪೆರ್ಮುದೆ  ಘಟಕವು ತನ್ನ ಧ್ಯೇಯ ವಾಕ್ಯದಂತೆ ಮತ್ತೊಂದು ನೊಂದ ಬಡ ಮನಸ್ಸಿಗೆ ತನ್ನ ಸಹಾಯ ಹಸ್ತವನ್ನು ನೀಡಿರುತ್ತದೆ ಮೂಡಿಗೆರೆಯ ಸುರೇಶ್ ಇವರು ಕಳೆದ ಕೆಲ ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ನಗರದ ಎ.ಜೆ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಮೂಲತಃ ಬಡ ಕುಟುಂಬದವರಾಗಿದ್ದು, ಅವಿವಾಹಿತರಾಗಿದ್ದು ತನ್ನ ತಂದೆಯನ್ನೂ ಕಳೆದುಕೊಂಡಿರುತ್ತಾರೆ. ಇವರ ಚಿಕಿತ್ಸೆಗೆ ಹಣ ಹೊಂದಿಸಲು ಇವರ ಸಹೋದರಿ ಸುಮ ಇವರು ಕಷ್ಟ […]

Read More

ಅಧ್ಯಕ್ಷರಾಗಿ ಸಂದೇಶ್ ಪೂಜಾರಿ ಆಯ್ಕೆ

ಪೆರ್ಮುದೆ ಎಕ್ಕಾರು : ಯುವವಾಹಿನಿ (ರಿ) ಎಕ್ಕಾರು ಪೆರ್ಮುದೆ  ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸಂದೇಶ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಸಂದೇಶ್ ಪೂಜಾರಿ ಪೆರ್ಮುದೆ ಉಪಾಧ್ಯಕ್ಷರು : ಚಂದ್ರಹಾಸ್ ಪೂಜಾರಿ ಎಕ್ಕಾರು ಕಾರ್ಯದರ್ಶಿ : ಸಂದೇಶ್ ಕೋಟ್ಯಾನ್ ಪೆರ್ಮುದೆ ಜತೆ ಕಾರ್ಯದರ್ಶಿ : ರೋಹಿತ್ ಎಕ್ಕಾರು ಕೋಶಾಧಿಕಾರಿ : ಜಯಲಕ್ಷ್ಮಿ ಕೆ.ಪೂಜಾರಿ ಪೆರ್ಮುದೆ ಸಂಘಟನಾ ಕಾರ್ಯದರ್ಶಿ : ಶಿವರಾಮ್ ಕೋಟ್ಯಾನ್ ಪೆರ್ಮುದೆ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ದೀಪಕ್ ಪೂಜಾರಿ ಪೆರ್ಮುದೆ ಉದ್ಯೋಗ ಮತ್ತು […]

Read More

ಎಕ್ಕಾರು ಪೆರ್ಮುದೆ – ಘಟಕ ಉದ್ಘಾಟನೆ

ಎಕ್ಕಾರು ಪೆರ್ಮುದೆ  : ಯುವವಾಹಿನಿಯ 33 ನೇ ನೂತನ ಘಟಕ ಎಕ್ಕಾರು ಪೆರ್ಮುದೆ  ಘಟಕವು ದಿನಾಂಕ 04.11.2018 ರಂದು ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಎಕ್ಕಾರು ಇಲ್ಲಿ ಬಿಲ್ಲವ ಸಂಘದ ಗೌರವಾಧ್ಯಕ್ಷ ಯಾದವ ಕೋಟ್ಯಾನ್ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯು ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯಗಳೊಂದಿನ ಯುವಜನರ ದ್ವನಿಯಾಗಿ ರೂಪುಗೊಂಡಿದೆ, ಎಂದು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದ  ಯುವವಾಹಿನಿ (ರಿ) […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!