Yuvavahini

ಮಂಗಳೂರು

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 10-08-2026 ರಂದು ಸಂಜೆ ನಡೆಯಿತು. ಈ ವಾರದ ಭಜನಾ ಸೇವೆ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಇವರ ಸಹಯೋಗದಲ್ಲಿ ನೆರವೇರಿತು. ಹರಿನಾಮ ಸ್ಮರಣೆಯ ಭಕ್ತಿ ಭಾವ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ […]

Read More

ಒಂದೇ ನಾಮ, ಒಂದೇ ಭಾವದಲ್ಲಿ ಮೊಳಗಿದ ಸಾಪ್ತಾಹಿಕ ಭಜನಾ ಸಂಕೀರ್ತನ

ಮಂಗಳೂರು, ಆ. 3: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ ಆಗಸ್ಟ್ 3ರಂದು ಸಂಜೆ ಭಜನಾ ಸೇವೆ ಭಕ್ತಿಭಾವದಿಂದ ನಡೆಯಿತು. ಈ ವಾರದ ಭಜನಾ ಸೇವೆಯನ್ನು ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ (ರಿ.), ಕರ್ನಾಟಕ, ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಭಜನಾ ತಂಡದ ಸದಸ್ಯರು ಹರಿನಾಮ ಸ್ಮರಣೆಯೊಂದಿಗೆ ಭಕ್ತಿರಸಪೂರ್ಣ ಭಜನೆಗಳನ್ನು ಹಾಡಿ, ಶ್ರೀ ಗೋಕರ್ಣನಾಥ ಸ್ವಾಮಿ […]

Read More

“ಆಟಿ ಎಂದರೆ ಕಷ್ಟದ ದಿನಗಳು; ಆ ದಿನಗಳ ಸಂಕಷ್ಟವನ್ನು ಇಂದಿನ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ” – ಡಾ. ಮೀನಾಕ್ಷಿ ರಾಮಚಂದ್ರ

ಮಂಗಳೂರು, ಜು. 28: ಹಿಂದಿನ ಕಾಲದಲ್ಲಿ ಆಟಿ ತಿಂಗಳು ಎಂದರೆ ಕಷ್ಟದ ದಿನಗಳ ಸಂಕೇತವಾಗಿತ್ತು. ನಿರಂತರ ಸುರಿಯುವ ಮಳೆಯಿಂದ ಸೂರ್ಯನ ಮುಖವೇ ಕಾಣದ ದಿನಗಳು, ಆಹಾರದ ಅಭಾವ, ಅನಾರೋಗ್ಯ ಮತ್ತು ಬದುಕಿನ ಸಂಕಷ್ಟಗಳು ಆಟಿಯ ಅವಿಭಾಜ್ಯ ಅಂಗವಾಗಿದ್ದವು. ಆ ದಿನಗಳ ಅನುಭವವನ್ನು ಮರೆಯಲು ಸಾಧ್ಯವಿಲ್ಲ ಎಂದು ಖ್ಯಾತ ಉಪನ್ಯಾಸಕಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕವು ಆಯೋಜಿಸಿದ್ದ ಕಾರ್ಗಿಲ್ ವಿಜಯ್ ದಿವಸ್, ಆಟಿದ ಕಂಪು-ನೆಂಪು ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ […]

Read More

ಭಕ್ತಿಭಾವದಿಂದ ಸಾಪ್ತಾಹಿಕ ಭಜನಾ ಸಂಕೀರ್ತನ ಸೇವೆ

ಮಂಗಳೂರು, ಜುಲೈ 27: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುತ್ತಿರುವ “ಒಂದೇ ನಾಮ, ಒಂದೇ ಭಾವ” ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ ಜುಲೈ 27ರಂದು ಸಂಜೆ ಭಜನಾ ಸೇವೆಯು ಭಕ್ತಿಭಾವದಿಂದ ನೆರವೇರಿತು. ಈ ಸಂದರ್ಭದಲ್ಲಿ ಮಂಜುಳ ಪ್ರಭಾಕರ್ ಮತ್ತು ಬಳಗ, ಅಶೋಕನಗರ, ಮಂಗಳೂರು ಅವರ ಸಹಯೋಗದಲ್ಲಿ ಭಜನಾ ಸಂಕೀರ್ತನ ನಡೆಯಿತು. ಭಜನಾ ತಂಡದ ಸದಸ್ಯರು ಹರಿನಾಮ ಸ್ಮರಣೆಯೊಂದಿಗೆ ಭಕ್ತಿರಸಪೂರ್ಣ ಭಜನೆಗಳನ್ನು ಗಾಯನ ಮಾಡಿ, ಶ್ರೀ ಗೋಕರ್ಣನಾಥ […]

Read More

ಭಕ್ತಿಭಾವದಿಂದ ನಡೆದ ಸಾಪ್ತಾಹಿಕ ಭಜನಾ ಸಂಕೀರ್ತನ ಸೇವೆ

ಮಂಗಳೂರು, ಜುಲೈ 20: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತಿ ಸೋಮವಾರ ನಡೆಯುವ ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ, ಸೋಮವಾರ ಸಂಜೆ ನಡೆದ ಭಜನಾ ಸೇವೆಯು ಭಕ್ತಿಭಾವದಿಂದ ನೆರವೇರಿತು. ಈ ವಾರದ ಭಜನಾ ಸೇವೆಯನ್ನು ಶ್ರೀ ನಾರಾಯಣ ಗುರು ಸೇವಾ ಮಂದಿರ, ಕೂಳೂರು ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಭಜನಾ ತಂಡದ ಸದಸ್ಯರು ಹರಿನಾಮ ಸ್ಮರಣೆಯೊಂದಿಗೆ ಭಕ್ತಿರಸಪೂರ್ಣ ಭಜನೆಗಳನ್ನು ಹಾಡುವ ಮೂಲಕ ಶ್ರೀ ಗೋಕರ್ಣನಾಥ ಹಾಗೂ ಬ್ರಹ್ಮಶ್ರೀ […]

Read More

ಧೂಮಪಾನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಪುಂಡಲೀಕ ಲಕಾಟಿ

ಮಂಗಳೂರು, ಜು.14: ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ “ಧೂಮಪಾನ ನಿಷೇಧ ಮತ್ತು ಕಾನೂನು ನಿಯಮ” ಕುರಿತು ಜಾಗೃತಿ ಕಾರ್ಯಕ್ರಮವು ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗುರುಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಪುಂಡಲೀಕ ಲಕಾಟಿ ಅವರು ಧೂಮಪಾನ ಮತ್ತು ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಧೂಮಪಾನದಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

“ಎಲ್ಲಿ ನಾಮವಿದೆಯೋ ಅಲ್ಲಿ ನಾರಾಯಣನಿದ್ದಾನೆ. ಎಲ್ಲಿ ಭಜನೆಯಿದೆಯೋ ಅಲ್ಲಿ ಶಾಂತಿಯಿದೆ. ಮಂಗಳೂರು ಜುಲೈ 13 : ದಿನಾಂಕ: 13-07-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯನ್ನು ಪ್ರಥಮ್ ಮತ್ತು ಬಳಗ ಮಂಗಳೂರು ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿ ಭಾವ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು. ಸಂಜೆ 7 […]

Read More

ಸಹಾಯ ಹಸ್ತದ ಮೂಲಕ ₹75 ಸಾವಿರ ಧನಸಹಾಯ ಹಸ್ತಾಂತರ

ಮಂಗಳೂರು, ಜು. 13: ಯುವವಾಹಿನಿ (ರಿ.) ಮಂಗಳೂರು ಘಟಕದ ನಿಕಟಪೂರ್ವ ಅಧ್ಯಕ್ಷರಾದ ದಿವಂಗತ ಅಶೋಕ್ ಅಂಚನ್ ಕೋಡಿಕಲ್ ಅವರ ಕುಟುಂಬಕ್ಕೆ ಯುವವಾಹಿನಿ (ರಿ.) ಮಂಗಳೂರು ಘಟಕವು ಮಾನವೀಯ ಕಾಳಜಿಯಿಂದ ₹75,000/- ಧನಸಹಾಯವನ್ನು ಹಸ್ತಾಂತರಿಸಿತು. ಅಶೋಕ್ ಅಂಚನ್ ಕೋಡಿಕಲ್ ಅವರು ದಿನಾಂಕ 30-06-2026ರಂದು ದೈವಾದೀನರಾಗಿದ್ದರು. ಅವರ ಕುಟುಂಬದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವುದನ್ನು ಮನಗಂಡ ಯುವವಾಹಿನಿ (ರಿ.) ಮಂಗಳೂರು ಘಟಕವು, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಹಾಗೂ ವಿವಿಧ ಘಟಕಗಳ ಸದಸ್ಯರ ಸಹಕಾರದೊಂದಿಗೆ ಧನಸಹಾಯವನ್ನು ಸಂಗ್ರಹಿಸಿತು. ದಿನಾಂಕ 13-07-2026ರಂದು […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ

ಮಂಗಳೂರು, ಜುಲೈ 6: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ ಜುಲೈ 6ರಂದು ಸಂಜೆ ಭಜನಾ ಸೇವೆ ಭಕ್ತಿಭಾವದಿಂದ ನೆರವೇರಿತು. ಈ ವಾರದ ಭಜನಾ ಸೇವೆಯನ್ನು ಭಜಕ ವೃಂದ ಕೋಡಿಕಲ್ ತಂಡವು ನಡೆಸಿಕೊಟ್ಟು, ಶ್ರೀ ಗೋಕರ್ಣನಾಥ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಚರಣಕ್ಕೆ ಭಕ್ತಿ ಸಂಗೀತವನ್ನು ಸಮರ್ಪಿಸಿತು. ಭಜನಾ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಕ್ತಿಮಯ ವಾತಾವರಣಕ್ಕೆ ಸಾಕ್ಷಿಯಾದರು. […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು: ದಿನಾಂಕ: 29-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಮಿತ್ರ ಮಂಡಳಿ ಯೋಗ ಭಜನಾ ತಂಡ ಬಿಜೈ ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿಯ ನಾಮ ಸ್ಮರಣೆ ಒಂದೇ ಮುಕ್ತಿಯ ದಾರಿ ಎಂಬಂತೆ ಭಕ್ತಿ ಭಾವದಿಂದ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು.ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!