ಘಟಕಗಳು

ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಶಿಬಿರ

ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಆಶ್ರಯದಲ್ಲಿ ನೆಲ್ಲಿಕಾರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸಹಯೋಗದೊಂದಿಗೆ ದಿನಾಂಕ 10.06.2018 ರಂದು ನೆಲ್ಲಿಕಾರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್‌ ಇದರ ಗೌರವ ವಿಶ್ವಸ್ಥರಾದ ಚಂದ್ರಶೇಖರ್ ಎಸ್.ಎಡಪದವು ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಮೂಡಬಿದ್ರೆ ಘಟಕದ.ಅಧ್ಯಕ್ಷರಾದ ರಾಜೇಶ್ ಡಿ.ಕೋಟ್ಯಾನ್, ನೆಲ್ಲಿಕಾರು ಬಿಲ್ಲವ […]

Read More

ಶ್ರಮದಾನದ ಮೂಲಕ ಸೇವೆ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ಸದಸ್ಯರು ದಿನಾಂಕ 10/06/2018 ಪಂಜಿಮೊಗರು ಮಂಜೊಟ್ಟಿ ಅಂಗನವಾಡಿ ಕೇಂದ್ರದ ಎದುರಿನ ಪ್ರದೇಶದಲ್ಲಿ ಶ್ರಮದಾನ ಮಾಡಲಾಯಿತು. ಅಂಗನವಾಡಿ ಕೇಂದ್ರದ ಕಾಲುದಾರಿಯು ಅಸ್ತವ್ಯಸ್ತವಾಗಿದ್ದು ಶಾಲಾ ಮಕ್ಕಳಿಗೆ ಶಾಲೆಗೆ ಹಾಜರಾಗಲು ಅನಾನುಕೂಲವಾದ್ದರಿಂದ ಘಟಕದ ವತಿಯಿಂದ ಶ್ರಮದಾನ ಮಾಡಲಾಯಿತು. ಒಟ್ಟು 25 ಮಂದಿ ಸದಸ್ಯರು ಶ್ರಮದಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಿಕಟಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಮತ್ತು ಈ ಕಾರ್ಯಕ್ರಮದ ಸಂಚಾಲಕಿ ಹಾಗೂ ಸಂಘಟನಾ ಕಾರ್ಯದರ್ಶಿಯಾದ […]

Read More

ಅಧ್ಯಕ್ಷರಾಗಿ ಶಿವಾನಂದ ಎಮ್. ಆಯ್ಕೆ

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶಿವಾನಂದ ಎಮ್. ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಶಿವಾನಂದ ಎಮ್ ಉಪಾಧ್ಯಕ್ಷರು : ನಾಗೇಶ್ ಎಮ್, ಸತೀಶ್ ಪೂಜಾರಿ ಬಾಯಿಲ ಕಾರ್ಯದರ್ಶಿ : ಕಿರಣ್ ರಾಜ್ ಪೂಂಜರೆಕೋಡಿ ಜತೆ ಕಾರ್ಯದರ್ಶಿ : ರಚನಾ ಕರ್ಕೇರ ಕೋಶಾಧಿಕಾರಿ : ಗಣೇಶ್ ಪೂಜಾರಿ ಮಣಿ ಸಂಘಟನಾ ಕಾರ್ಯದರ್ಶಿ : ಸುಂದರ ಪೂಜಾರಿ ಬೋಳಂಗಡಿ, ಪ್ರವೀಣ್ ಸುವರ್ಣ ತುಂಬೆ, ದೇವಪ್ಪ‌ ಕರ್ಕೇರ ರಾಯಿ, ಸ್ನೇಹಾ ಸುರೇಶ್, […]

Read More

ಯುವವಾಹಿನಿಯ 31ನೇ ಘಟಕ ಉದ್ಘಾಟನೆ

ಕಡಬ: ಯುವ ಜನತೆ ಸ್ವಾಭಿಮಾನಿ ಸ್ವಾವಲಂಭಿ ಬದುಕಿನತ್ತ ಹೆಜ್ಜೆ ಇಟ್ಟು ಎಲ್ಲಾ ಕ್ಷೇತ್ರಗಳಲ್ಲೂ ಸಮಾಜದ ಮುಖ್ಯ ವಾಹಿನಿಗೆ ಬಂದು ಸದೃಡ ಸಮಾಜ ನಿರ್ಮಾಣಕ್ಕೆ ಕಾರಣೀಭೂತರಾಗಿರಬೇಕು ಎಂದು ಯುವವಾಹಿನಿ(ರಿ} ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಹೇಳಿದರು. ಅವರು ದಿನಾಂಕ 10.06.2018 ರಂದು ಕಡಬ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಯುವವಾಹಿನಿ ಸಂಸ್ಥೆಯ 31ನೇ ಘಟಕ ಯುವವಾಹಿನಿ{ರಿ) ಕಡಬ ಘಟಕದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವವಾಹಿನಿ ಘಟಕ ಸ್ಥಾಪಿಸುವ ಮೂಲಕ ಬಿಲ್ಲವ ಸಮುದಾಯದ […]

Read More

ಯುವವಾಹಿನಿ(ರಿ) ಕುಪ್ಪೆಪದವು ಘಟಕದ ದೇಗುಲ ದರ್ಶನ

ದಿನಾಂಕ 10 .06.2018 ರಂದು ಘಟಕದ ವತಿಯಿಂದ ದೇಗುಲ ದರ್ಶನಕ್ಕಾಗಿ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಕುಪ್ಪೆಪದವಿನಿಂದ ಹೊರಟೆವು ಪ್ರಥಮವಾಗಿ ನಮ್ಮ ಪ್ರಯಾಣ ಆನೆಗುಡ್ಡೆಯತ್ತ ಸಾಗಿ.ದೇವರ ದರ್ಶನ ಪಡೆದು.ಅಲ್ಲಿಂದ ಪ್ರಯಾಣ ಕಮಲಶಿಲೆಯತ್ತ ಸಾಗಿ ಬ್ರಾಹ್ಮಿ ದುರ್ಗಾಪರಮೇಶ್ವರಿ ಅಮ್ಮನವರ ಮಹಾಪೂಜೆ ದರ್ಶನ ಪಡೆದು .ಮಹಾಪ್ರಸಾದವಾದ ಅನ್ನಪ್ರಸಾದವನ್ನು ಸ್ವೀಕರಿಸಿದ ನಂತರ.ಪ್ರಯಾಣವು ಮಂದಾರ್ತಿ ಕ್ಷೇತ್ರಕ್ಕೆ ಸಾಗಿ .ಅಲ್ಲಿ ದೇವರ ದರ್ಶನ ಪಡೆದನಂತರ, ಪಯಣವು ಮಲ್ಪೆ ಕಡಲತೀರಕ್ಕೆ ಬಂದು ಅಲ್ಲಿಯ ಕಡಲತೆರೆಯ ಅಬ್ಬರದ ಸೊಬಗನ್ನು ನೋಡಿ.ಕುಪ್ಪಳಿಸಿದ ನಂತರ. ಪಾಯಣವು ಸ್ವಗ್ರಹದತ್ತ ಸಾಗಿ ಕೊನೆಗೊಂಡಿತು..ಈ […]

Read More

ಮುಂಡಾರು ಹಿಂದೂ ರುದ್ರ ಭೂಮಿಯಲ್ಲಿ ವಿಶ್ವ ಪರಿಸರ ದಿನ‌ ಆಚರಣೆ.

ಬಜ್ಪೆ : ತಾ. 10.06.18 ಭಾನುವಾರ ಯುವವಾಹಿನಿ(ರಿ) ಬಜ್ಪೆ ಘಟಕದ ಸದಸ್ಯರಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಜ್ಪೆ ಸಮೀಪದ ಮುಂಡಾರು ಇಲ್ಲಿರುವ ಹಿಂದೂ ರುದ್ರ ಭೂಮಿಯ ಪರಿಸರ ಸ್ವಚ್ಛಗೊಳಿಸಿ, ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ಶ್ರೀಯುತ ರಾಘವೇಂದ್ರ ಆಚಾರ್, ಮಾಲಕರು, ಶಾಂತಿ ಭವನ ಬಜ್ಪೆ ಮತ್ತು ಡಾ|| ಜಯರಾಮ್ ಶೆಟ್ಟಿ, ಖ್ಯಾತ ಮಕ್ಕಳ ತಜ್ಞರು, ಬಜ್ಪೆ ಇವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 20 ವಿವಿಧ ಜಾತಿಯ ಸುಮಾರು 100 ಗಿಡಗಳನ್ನು […]

Read More

ಯುವವಾಹಿನಿ ಎಂಬುದು ದೇಗುಲ : ಜಯಾನಂದ

ಉಡುಪಿ : ಸಾಮೂಹಿಕ ಪ್ರಯತ್ನದಿಂದ ಮಾತ್ರ ಮಾದರಿ ಸಂಘಟನೆ ನಿರ್ಮಾಣ ಸಾಧ್ಯ, ಹಾಗೂ ಯುವವಾಹಿನಿ ಎಂಬ ದೇವಾಲಯದಲ್ಲಿ ಅಧ್ಯಕ್ಷರು ಅರ್ಚಕರಾಗಿ ಸದಸ್ಯರು ಭಕ್ತಾದಿಗಳೆಂಬ ಪರಿಕಲ್ಪನೆಯಲ್ಲಿ ಯುವವಾಹಿನಿ ಸಾಗುತ್ತಿರುವುದು ಶ್ಲಾಘನೀಯ ಎಂದು ಮೆಸ್ಕಾಮ್ ಕಾರ್ಯಪಾಲಕ‌ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 10.06.2018 ರಂದು ಉದ್ಯಾವರ ಬಲಾಯಿಪಾದೆ ಯುವವಾಹಿನಿ ಸಭಾಭವನದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ 2018-19 ನೇ ಸಾಲಿನ‌ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಗಣೇಶ್ ಕುಮಾರ್ […]

Read More

ಯುವವಾಹಿನಿಯಿಂದ ಯುವಜನತೆಗೆ ಜಾಗೃತಿ : ರಮೇಶ್ ಅಂಚನ್

ಪಡುಬಿದ್ರಿ : ಸಮಾಜದಲ್ಲಿ ಯುವಜನಾಂಗವು ದಾರಿ ತಪ್ಪುತ್ತಿರುವ ಸಂದರ್ಭದಲ್ಲಿ ಸಂಘಟನೆಗಳ ಮೂಲಕ ಜಾಗೃತಿ ಮೂಡಿಸುವುದು ಅನಿವಾರ್ಯ. ಹಲವಾರು ಸಮಸ್ಯೆಗಳ ನಿವಾರಣೆಗೆ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಬಿಲ್ಲವರ ಯೂನಿಯನ್, ಕುದ್ರೊಟ್ಟು, ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳ್ ಬಡಾದ ಕಾರ್ಯದರ್ಶಿ ರಮೇಶ್ ಅಂಚನ್ ತಿಳಿಸಿದರು.   ಅವರು ಪಡುಬಿದ್ರಿ ಬಿಲ್ಲವ ಸಂಘದ ಸಭಾ ಭವನದಲ್ಲಿ ಜರಗಿದ ಯುವವಾಹಿನಿ ಪಡುಬಿದ್ರಿ ಘಟಕದ 2018 ನೇ ಸಾಲಿನ ಪದಗ್ರಹಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು […]

Read More

ಮಾನವೀಯ ಮೌಲ್ಯಗಳ ಪ್ರೇರಕ ಶಕ್ತಿ ಯುವವಾಹಿನಿ : ನರೇಶ್

ಹೆಜಮಾಡಿ : ವಿಜ್ಞಾನ ಮುಂದುವರಿದಂತೆ ಮಾನವೀಯ ಮೌಲ್ಯಗಳು ವ್ಯವಹಾರವಾಗಿ ಬದಲಾಗುತ್ತಿದೆ, ಪ್ರೀತಿ, ವಿಶ್ವಾಸ , ನಂಬಿಕೆ, ಗೌರವ, ಸ್ನೇಹ ಇಲ್ಲದಂತಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಮಾನವೀಯ ಮೌಲ್ಯಗಳ ಪ್ರೇರಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಯುವವಾಹಿನಿ ಕೆಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ತಿಳಿಸಿದರು. ದಿನಾಂಕ‌10.06.2018 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ 2018-19 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು. ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷ ಮಹೇಂದ್ರ ಸಾಲ್ಯಾನ್ ಸಮಾರಂಭ […]

Read More

ಯುವವಾಹಿನಿ ವೇಣೂರು ಘಟಕದಿಂದ ಉಚಿತ ಪುಸ್ತಕ ವಿತರಣೆ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಕರಿಮಣೇಲು ತಿಮ್ಮಣ್ಣಬೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ನಿತೀಶ್ ಎಚ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ, ವಲಯ ಬಿಲ್ಲವ ಸಂಘದ ಅಧ್ಯಕ್ಷ ಪೂವಪ್ಪ ಪರನೀರು, ನಿರ್ದೇಶಕರಾದ ಲವಶಾಂತಿ‌ ಪರನೀರು, ಹರೀಶ್ ಪಿ.ಎಸ್, ಸತೀಶ್ ಕಾಂತಿಬೆಟ್ಟು, ಕೃಷ್ಣಪ್ಪ ಪೂಜಾರಿ, ಹರೀಶ್ ಪೂಜಾರಿ ದೇಲಂಪುರಿ, ಮತ್ತಿತರರು ಉಪಸ್ಥಿತರಿದ್ದರು

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!